ಬೆಂಗಳೂರು : ನಟ ನಿರ್ಮಾಪಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಅಪಾರ ಸೇವೆ ಸಲ್ಲಿಸಿದಂತಹ ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಟ್ವೀಟ್ ನಲ್ಲಿ ಸಂತಾಪಸೂಚಿಸಿದ್ದಾರೆ.
ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ.
ವರನಟ ಡಾ||ರಾಜ್ಕುಮಾರ್, ಡಾ||ವಿಷ್ಣುವರ್ಧನ್, ಶ್ರೀ ಅಂಬರೀಶ್ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಆಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು.
ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ.
ವರನಟ ಡಾ||ರಾಜ್ಕುಮಾರ್, ಡಾ||ವಿಷ್ಣುವರ್ಧನ್, ಶ್ರೀ ಅಂಬರೀಶ್ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ… pic.twitter.com/vokgG2wH1e
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 16, 2024