ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಶೀಘ್ರವೇ ಗುಣಮುಖರಾಗಿ ಮನೆಗೆ ಮರಳಲಿದ್ದಾರೆ ಅಂತ ಪುತ್ರ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸುದ್ದಿಗೋಷ್ಠಿಯ ಸಂದರ್ಭದಲ್ಲೇ ಮೂಗಿನಲ್ಲಿ ರಕ್ತಸ್ತ್ರಾವ ಆಗಿತ್ತು. ರಕ್ತ ಸೋರುತ್ತಿದ್ದರೂ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಲಿಂದ ಮರಳಿದ್ದರು. ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಬಗ್ಗೆ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ಕೆಲಸದ ಒತ್ತಡದಿಂದ ವಿಶ್ರಾಂತಿ ಇಲ್ಲದೇ ಹೀಗೆ ಆಗಿದೆ. ವಿಶ್ರಾಂತಿ ಪಡೆದುಕೊಳ್ಳದ ಕಾರಣ, ರಕ್ತಸ್ತ್ರಾವ ಆಗಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ ಎಂದರು.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಆತಂಕ ಪಡುವಂತ ಏನು ಆಗಿಲ್ಲ. ಅವರು ಆರೋಗ್ಯವಾಗಿದ್ದಾರೆ. ಕುಮಾರಣ್ಣನ ಮೇಲೆ ತಂದೆ ತಾಯಿ ಆಶೀರ್ವಾದ, ಈ ನಾಡಿನ ಜನತೆಯ ಆಶೀರ್ವಾದವಿದೆ. ಏನೂ ಆಗಿಲ್ಲ. ಆರೋಗ್ಯವಾಗಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಆಂತಕ ಪಡುವ ಅಗತ್ಯವಿಲ್ಲ ಅಂತ ಸ್ಪಷ್ಟ ಪಡಿಸಿದರು.
BIG NEWS: ಆ.3ರಿಂದ ಬೆಂಗಳೂರಿನಿಂದ ಮೈಸೂರಿಗೆ ‘ಪಾದಯಾತ್ರೆ’: ಬಿ.ವೈ ವಿಜಯೇಂದ್ರ
‘ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ’ ಪರಿಚಯಿಸಲಿದೆ ಕೇಂದ್ರ: ಇದು ‘ಫಾಸ್ಟ್ ಟ್ಯಾಗ್’ಗಿಂತ ಹೇಗೆ ಭಿನ್ನ? ಇಲ್ಲಿದೆ ಮಾಹಿತಿ