Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗದಲ್ಲಿ ಹೃದಯವಿದ್ರಾವಕ  ಘಟನೆ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಜೋಡಿಗಳು!

11/09/2025 1:29 PM

Chhattisgarh: ಮಾವೋ ಸಿದ್ಧಾಂತಕ್ಕೆ ಗುಡ್ ಬೈ, 16 ನಕ್ಸಲೀಯರು ಶರಣಾಗತಿ

11/09/2025 1:16 PM

ಮನೆ ಕಟ್ಟೋರಿಗೆ ಗುಡ್‌ನ್ಯೂಸ್‌: ಸಿಮೆಂಟ್ ಚೀಲ ಬೆಲೆ 35 ರೂ.ವರೆಗೆ ಇಳಿಕೆ…..!

11/09/2025 1:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣದಲ್ಲಿ ಗಿಫ್ಟ್ ಕೂಪನ್ ಹಂಚಲು ಕಾಂಗ್ರೆಸ್ ಹುನ್ನಾರ: HDK ಗಂಭೀರ ಆರೋಪ
KARNATAKA

ಚನ್ನಪಟ್ಟಣದಲ್ಲಿ ಗಿಫ್ಟ್ ಕೂಪನ್ ಹಂಚಲು ಕಾಂಗ್ರೆಸ್ ಹುನ್ನಾರ: HDK ಗಂಭೀರ ಆರೋಪ

By kannadanewsnow0931/10/2024 4:56 PM

ಚನ್ನಪಟ್ಟಣ/ರಾಮನಗರ: ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ವಾಮಮಾರ್ಗದಲ್ಲಿ ಉಪ ಚುನಾವಣೆ ಗೆಲ್ಲಲು ಸಂಚು ರೂಪಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ತಿಟ್ಟಮಾರನಹಳ್ಳಿ, ಕುಂತೂರು ದೊಡ್ಡಿ, ಚಿಕ್ಕನದೊಡ್ಡಿ, ಪಟಲು, ಕಳ್ಳಿ ಹೊಸೂರು, ಮೈಲನಾಯಕನಹಳ್ಳಿ ಇನ್ನಿತರೆ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದರು ಅವರು.

ಕಳೆದ ಚುನಾವಣೆಯಲ್ಲಿ ರಾಮನಗರ ಸೇರಿ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ಕಳೆದ ಕಾಂಗ್ರೆಸ್ ಪಕ್ಷ ಗಿಫ್ಟ್ ಕೂಪನ್ ಗಳನ್ನು ಹಂಚಿ ಅಕ್ರಮ ನಡೆಸಿತ್ತು. ಉಪ ಚುನಾವಣೆಯಲ್ಲಿಯೂ ಅದೇ ರೀತಿಯ ಅಕ್ರಮ ನಡೆಸಲು ಹೊರಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕನಕಪುರ ಸೇರಿ ರಾಜ್ಯದ ಹಲವಾರು ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಬೆಂಗಳೂರಿನ ಲುಲು ಮಾಲ್ ನಲ್ಲಿ ಖರೀದಿ ಮಾಡುವ ₹3,000,₹5000 ಮೌಲ್ಯದ ಗಿಫ್ಟ್ ಕೂಪನ್ ಹಂಚಲಾಯಿತು. ಚುನಾವಣೆ ಮುಗಿದ ಮೇಲೆ ಆ ಕೂಪನ್ ಗಳನ್ನು ಮಾಲ್ ನವರಿಗೆ ಕೊಟ್ಟರೆ ಅವರು ವಾಪಸ್ ಕಳಿಸಿದ್ದಾರೆ. ಇದೇ ಕುತಂತ್ರವನ್ನು ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿಯೂ ಜಾರಿ ಮಾಡುತ್ತಿದೆ ಎಂದು ಅವರು ನೇರ ಆರೋಪ ಮಾಡಿದರು.

ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕೂಪನ್ ಷಡ್ಯಂತ್ರ ಮಾಡಲು ಕಾಂಗ್ರೆಸ್ ಹೊರಟಿದೆ. ಇಂಥ ವಂಚನೆಯ ಕುತಂತ್ರಕ್ಕೆ ಯಾರೂ ಮರುಳಾಗಾಬಾರದು ಎಂದು ಕೇಂದ್ರ ಸಚಿವರು ಮನವಿ ಮಾಡಿದರು.

ನಿಖಿಲ್ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ

ನಿಖಿಲ್ ಕುಮಾರಸ್ವಾಮಿ ಅವರು ಎನ್ ಡಿಎ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ ಎಂದು ಹೇಳಿದ ಕುಮಾರಸ್ವಾಮಿ ಅವರು; ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ವ್ಯಕ್ತಿ ಎನ್ ಡಿಎ ಅಭ್ಯರ್ಥಿ ಆಗಬೇಕಿತ್ತು. ಅವರು ಮೊದಲು ನನಗೆ ಟಿಕೆಟ್ ಬೇಕು ಎಂದು ಕೇಳಿದರು. ಆಮೇಲೆ, ಕಮಲ ಚಿಹ್ನೆ ಆದರೇನು, ತೆನೆ ಹೊತ್ತ ಮಹಿಳೆಯ ಚಿಹ್ನೆ ಆದರೇನು.. ಚುನಾವಣೆಗೆ ನಿಲ್ಲಲು ಸೈ ಎಂದು ಹೇಳಿಕೊಂಡಿದ್ದರು. ಅವರ ಮಾತುಗಳಿಗೆ ನಾವೂ ಮರುಳಾದೆವು. ಜೆಡಿಎಸ್ ಚಿಹ್ನೆ ಅಡಿಯಲ್ಲಿ ನಿಲ್ಲಲ್ಲ, ಆಮೇಲೆ ಕಮಲ ಚಿಹ್ನೆಯೇ ಬೇಕು ಹೊಸ ವರಸೆ ತೆಗೆದರು. ಅದಕ್ಕೂ ನಾವು ಒಪ್ಪಿದೆವು. ಹಿರಿಯರಾದ ಜೆಪಿ ನಡ್ದಾ, ಪ್ರಹ್ಲಾದ್ ಜೋಷಿ ಅವರು ನನಗೇ ಕರೆ ಮಾಡಿ ಆ ವ್ಯಕ್ತಿಗೆ ಟಿಕೆಟ್ ಕೊಡಿ ಎಂದು ಹೇಳಿದರು. ಅವರ ಮಾತು ಮೀರದೆ ಅವರಿಗೆ ಟಿಕೆಟ್ ಕೊಡಲು ತೀರ್ಮಾನ ಮಾಡಿದೆ. ಆದರೆ, ಆ ವ್ಯಕ್ತಿ ಎಲ್ಲರಿಗೂ ಟೋಪಿ ಹಾಕಿ ಹೋದರು ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಚನ್ನಪಟ್ಟಣದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು ಕುಮಾರಸ್ವಾಮಿಗೆ ಕ್ಷೇತ್ರದಲ್ಲಿ ಎಷ್ಟು ಕೆರೆ ಇದೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ನಾನು ಎಷ್ಟು ಕಡೆ ಭೇಟಿ ಕೊಟ್ಟಿದ್ದೇನೆ, ಎಷ್ಟು ಕೆರೆಗಳಿಗೆ ನೀರು ಹರಿಸಿದ್ದೇನೆ. ದಾಖಲೆಗಳಿವೆ, ಬೇಕಾದರೆ ನೋಡಿಕೊಳ್ಳಬಹುದು ಎಂದು ಅವರು ಹೇಳಿದರು.

Share. Facebook Twitter LinkedIn WhatsApp Email

Related Posts

ಶಿವಮೊಗ್ಗದಲ್ಲಿ ಹೃದಯವಿದ್ರಾವಕ  ಘಟನೆ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಜೋಡಿಗಳು!

11/09/2025 1:29 PM1 Min Read

ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!

11/09/2025 12:59 PM1 Min Read

BREAKING : ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ : 50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

11/09/2025 12:50 PM1 Min Read
Recent News

ಶಿವಮೊಗ್ಗದಲ್ಲಿ ಹೃದಯವಿದ್ರಾವಕ  ಘಟನೆ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಜೋಡಿಗಳು!

11/09/2025 1:29 PM

Chhattisgarh: ಮಾವೋ ಸಿದ್ಧಾಂತಕ್ಕೆ ಗುಡ್ ಬೈ, 16 ನಕ್ಸಲೀಯರು ಶರಣಾಗತಿ

11/09/2025 1:16 PM

ಮನೆ ಕಟ್ಟೋರಿಗೆ ಗುಡ್‌ನ್ಯೂಸ್‌: ಸಿಮೆಂಟ್ ಚೀಲ ಬೆಲೆ 35 ರೂ.ವರೆಗೆ ಇಳಿಕೆ…..!

11/09/2025 1:04 PM

BREAKING: ನೇಪಾಳ ಪ್ರತಿಭಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆ, ಮಧ್ಯಂತರ ಸರ್ಕಾರ ರಚನೆಗೆ ಮಾತುಕತೆ

11/09/2025 1:00 PM
State News
KARNATAKA

ಶಿವಮೊಗ್ಗದಲ್ಲಿ ಹೃದಯವಿದ್ರಾವಕ  ಘಟನೆ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಜೋಡಿಗಳು!

By kannadanewsnow0511/09/2025 1:29 PM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ರಾಷ್ಟ್ರೀಯ ಅಪಘಾತದಲ್ಲಿ ಹಸೆಮಣೆ ಎರಬೇಕಿದ್ದ ಜೋಡಿ ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕಿನ…

ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!

11/09/2025 12:59 PM

BREAKING : ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ : 50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

11/09/2025 12:50 PM

BIG NEWS : ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಸಹಜ ಸ್ಥಿತಿಯತ್ತ ಮದ್ದೂರು ಪಟ್ಟಣ

11/09/2025 12:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.