Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ವಾಣಿಜ್ಯ ಹಡಗುಗಳ ಮೇಲಿನ ದಾಳಿ ಸಹಿಸಲಾಗದು’: ಹೊರ್ಮುಜ್ ಜಲಸಂಧಿಯಲ್ಲಿ ಶಾಂತಿಗೆ ವಿಶ್ವಸಂಸ್ಥೆಯಲ್ಲಿ ಭಾರತ ಆಗ್ರಹ!

17/04/2026 7:41 AM

ರಾಜ್ಯದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ ರಜೆ’ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

17/04/2026 7:38 AM

ಮಾತ್ರೆಗಳ ಮಧ್ಯದಲ್ಲಿ ಒಂದು ಗೆರೆ ಏಕಿರುತ್ತೆ ಗೊತ್ತಾ? ಇದು ಕೇವಲ ವಿನ್ಯಾಸವಲ್ಲ, ಇದರ ಹಿಂದಿದೆ ವೈಜ್ಞಾನಿಕ ಕಾರಣ!

17/04/2026 7:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣದಲ್ಲಿ ಗಿಫ್ಟ್ ಕೂಪನ್ ಹಂಚಲು ಕಾಂಗ್ರೆಸ್ ಹುನ್ನಾರ: HDK ಗಂಭೀರ ಆರೋಪ
KARNATAKA

ಚನ್ನಪಟ್ಟಣದಲ್ಲಿ ಗಿಫ್ಟ್ ಕೂಪನ್ ಹಂಚಲು ಕಾಂಗ್ರೆಸ್ ಹುನ್ನಾರ: HDK ಗಂಭೀರ ಆರೋಪ

By kannadanewsnow0931/10/2024 4:56 PM

ಚನ್ನಪಟ್ಟಣ/ರಾಮನಗರ: ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ವಾಮಮಾರ್ಗದಲ್ಲಿ ಉಪ ಚುನಾವಣೆ ಗೆಲ್ಲಲು ಸಂಚು ರೂಪಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ತಿಟ್ಟಮಾರನಹಳ್ಳಿ, ಕುಂತೂರು ದೊಡ್ಡಿ, ಚಿಕ್ಕನದೊಡ್ಡಿ, ಪಟಲು, ಕಳ್ಳಿ ಹೊಸೂರು, ಮೈಲನಾಯಕನಹಳ್ಳಿ ಇನ್ನಿತರೆ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದರು ಅವರು.

ಕಳೆದ ಚುನಾವಣೆಯಲ್ಲಿ ರಾಮನಗರ ಸೇರಿ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ಕಳೆದ ಕಾಂಗ್ರೆಸ್ ಪಕ್ಷ ಗಿಫ್ಟ್ ಕೂಪನ್ ಗಳನ್ನು ಹಂಚಿ ಅಕ್ರಮ ನಡೆಸಿತ್ತು. ಉಪ ಚುನಾವಣೆಯಲ್ಲಿಯೂ ಅದೇ ರೀತಿಯ ಅಕ್ರಮ ನಡೆಸಲು ಹೊರಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕನಕಪುರ ಸೇರಿ ರಾಜ್ಯದ ಹಲವಾರು ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಬೆಂಗಳೂರಿನ ಲುಲು ಮಾಲ್ ನಲ್ಲಿ ಖರೀದಿ ಮಾಡುವ ₹3,000,₹5000 ಮೌಲ್ಯದ ಗಿಫ್ಟ್ ಕೂಪನ್ ಹಂಚಲಾಯಿತು. ಚುನಾವಣೆ ಮುಗಿದ ಮೇಲೆ ಆ ಕೂಪನ್ ಗಳನ್ನು ಮಾಲ್ ನವರಿಗೆ ಕೊಟ್ಟರೆ ಅವರು ವಾಪಸ್ ಕಳಿಸಿದ್ದಾರೆ. ಇದೇ ಕುತಂತ್ರವನ್ನು ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿಯೂ ಜಾರಿ ಮಾಡುತ್ತಿದೆ ಎಂದು ಅವರು ನೇರ ಆರೋಪ ಮಾಡಿದರು.

ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕೂಪನ್ ಷಡ್ಯಂತ್ರ ಮಾಡಲು ಕಾಂಗ್ರೆಸ್ ಹೊರಟಿದೆ. ಇಂಥ ವಂಚನೆಯ ಕುತಂತ್ರಕ್ಕೆ ಯಾರೂ ಮರುಳಾಗಾಬಾರದು ಎಂದು ಕೇಂದ್ರ ಸಚಿವರು ಮನವಿ ಮಾಡಿದರು.

ನಿಖಿಲ್ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ

ನಿಖಿಲ್ ಕುಮಾರಸ್ವಾಮಿ ಅವರು ಎನ್ ಡಿಎ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ ಎಂದು ಹೇಳಿದ ಕುಮಾರಸ್ವಾಮಿ ಅವರು; ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ವ್ಯಕ್ತಿ ಎನ್ ಡಿಎ ಅಭ್ಯರ್ಥಿ ಆಗಬೇಕಿತ್ತು. ಅವರು ಮೊದಲು ನನಗೆ ಟಿಕೆಟ್ ಬೇಕು ಎಂದು ಕೇಳಿದರು. ಆಮೇಲೆ, ಕಮಲ ಚಿಹ್ನೆ ಆದರೇನು, ತೆನೆ ಹೊತ್ತ ಮಹಿಳೆಯ ಚಿಹ್ನೆ ಆದರೇನು.. ಚುನಾವಣೆಗೆ ನಿಲ್ಲಲು ಸೈ ಎಂದು ಹೇಳಿಕೊಂಡಿದ್ದರು. ಅವರ ಮಾತುಗಳಿಗೆ ನಾವೂ ಮರುಳಾದೆವು. ಜೆಡಿಎಸ್ ಚಿಹ್ನೆ ಅಡಿಯಲ್ಲಿ ನಿಲ್ಲಲ್ಲ, ಆಮೇಲೆ ಕಮಲ ಚಿಹ್ನೆಯೇ ಬೇಕು ಹೊಸ ವರಸೆ ತೆಗೆದರು. ಅದಕ್ಕೂ ನಾವು ಒಪ್ಪಿದೆವು. ಹಿರಿಯರಾದ ಜೆಪಿ ನಡ್ದಾ, ಪ್ರಹ್ಲಾದ್ ಜೋಷಿ ಅವರು ನನಗೇ ಕರೆ ಮಾಡಿ ಆ ವ್ಯಕ್ತಿಗೆ ಟಿಕೆಟ್ ಕೊಡಿ ಎಂದು ಹೇಳಿದರು. ಅವರ ಮಾತು ಮೀರದೆ ಅವರಿಗೆ ಟಿಕೆಟ್ ಕೊಡಲು ತೀರ್ಮಾನ ಮಾಡಿದೆ. ಆದರೆ, ಆ ವ್ಯಕ್ತಿ ಎಲ್ಲರಿಗೂ ಟೋಪಿ ಹಾಕಿ ಹೋದರು ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಚನ್ನಪಟ್ಟಣದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು ಕುಮಾರಸ್ವಾಮಿಗೆ ಕ್ಷೇತ್ರದಲ್ಲಿ ಎಷ್ಟು ಕೆರೆ ಇದೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ನಾನು ಎಷ್ಟು ಕಡೆ ಭೇಟಿ ಕೊಟ್ಟಿದ್ದೇನೆ, ಎಷ್ಟು ಕೆರೆಗಳಿಗೆ ನೀರು ಹರಿಸಿದ್ದೇನೆ. ದಾಖಲೆಗಳಿವೆ, ಬೇಕಾದರೆ ನೋಡಿಕೊಳ್ಳಬಹುದು ಎಂದು ಅವರು ಹೇಳಿದರು.

Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ ರಜೆ’ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

17/04/2026 7:38 AM1 Min Read

ಮಾತ್ರೆಗಳ ಮಧ್ಯದಲ್ಲಿ ಒಂದು ಗೆರೆ ಏಕಿರುತ್ತೆ ಗೊತ್ತಾ? ಇದು ಕೇವಲ ವಿನ್ಯಾಸವಲ್ಲ, ಇದರ ಹಿಂದಿದೆ ವೈಜ್ಞಾನಿಕ ಕಾರಣ!

17/04/2026 7:34 AM2 Mins Read

ರಾಜ್ಯದ ರೈತರಿಗೆ ಬಿಗ್ ಶಾಕ್ : ಈ ಬಾರಿ `ಮುಂಗಾರು ಮಳೆ’ ನಿರೀಕ್ಷೆಗಿಂತ ಕಡಿಮೆ, ಬರಗಾಲದ ಭೀತಿ.!

17/04/2026 7:30 AM1 Min Read
Recent News

​’ವಾಣಿಜ್ಯ ಹಡಗುಗಳ ಮೇಲಿನ ದಾಳಿ ಸಹಿಸಲಾಗದು’: ಹೊರ್ಮುಜ್ ಜಲಸಂಧಿಯಲ್ಲಿ ಶಾಂತಿಗೆ ವಿಶ್ವಸಂಸ್ಥೆಯಲ್ಲಿ ಭಾರತ ಆಗ್ರಹ!

17/04/2026 7:41 AM

ರಾಜ್ಯದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ ರಜೆ’ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

17/04/2026 7:38 AM

ಮಾತ್ರೆಗಳ ಮಧ್ಯದಲ್ಲಿ ಒಂದು ಗೆರೆ ಏಕಿರುತ್ತೆ ಗೊತ್ತಾ? ಇದು ಕೇವಲ ವಿನ್ಯಾಸವಲ್ಲ, ಇದರ ಹಿಂದಿದೆ ವೈಜ್ಞಾನಿಕ ಕಾರಣ!

17/04/2026 7:34 AM

ಅಮೆರಿಕ ಸೇನೆಯಲ್ಲಿ ಮಗ, ಇಲ್ಲಿ ತಾಯಿಗೆ ನರಕಯಾತನೆ! ಪಂಜಾಬಿ ಮಹಿಳೆಯನ್ನು ಬಂಧಿಸಿ 24 ಗಂಟೆ ಉಪವಾಸ ಕೆಡವಿದ ICE

17/04/2026 7:33 AM
State News
KARNATAKA

ರಾಜ್ಯದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ ರಜೆ’ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

By kannadanewsnow5717/04/2026 7:38 AM KARNATAKA 1 Min Read

ಬೆಂಗಳೂರು: ಮಹಿಳಾ ನೌಕರರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಮಹತ್ವದ ಆದೇಶ ನೀಡಿರುವ ಹೈಕೋರ್ಟ್, ಋತುಚಕ್ರದ (ಮುಟ್ಟು) ಸಮಯದಲ್ಲಿ…

ಮಾತ್ರೆಗಳ ಮಧ್ಯದಲ್ಲಿ ಒಂದು ಗೆರೆ ಏಕಿರುತ್ತೆ ಗೊತ್ತಾ? ಇದು ಕೇವಲ ವಿನ್ಯಾಸವಲ್ಲ, ಇದರ ಹಿಂದಿದೆ ವೈಜ್ಞಾನಿಕ ಕಾರಣ!

17/04/2026 7:34 AM

ರಾಜ್ಯದ ರೈತರಿಗೆ ಬಿಗ್ ಶಾಕ್ : ಈ ಬಾರಿ `ಮುಂಗಾರು ಮಳೆ’ ನಿರೀಕ್ಷೆಗಿಂತ ಕಡಿಮೆ, ಬರಗಾಲದ ಭೀತಿ.!

17/04/2026 7:30 AM

ಕಡಿಮೆ ಬಂಡವಾಳ ಬಂಪರ್ ಲಾಭ : ಈ ಬೇಸಿಗೆಯಲ್ಲಿ ಕೈತುಂಬಾ ಹಣ ತರುವ ಸೂಪರ್ ವ್ಯವಹಾರಗಳಿವು.!

17/04/2026 7:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.