Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM

ಮಾ.1ರಿಂದ ರೈಲು ಟಿಕೆಟ್’ಗಳಿಂದ ಗ್ಯಾಸ್ ಸಿಲಿಂಡರ್ ಬೆಲೆವರೆಗೆ ಹಲವು ನಿಯಮ ಬದಲಾವಣೆ ; ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ

27/02/2026 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣದಲ್ಲಿ ಗಿಫ್ಟ್ ಕೂಪನ್ ಹಂಚಲು ಕಾಂಗ್ರೆಸ್ ಹುನ್ನಾರ: HDK ಗಂಭೀರ ಆರೋಪ
KARNATAKA

ಚನ್ನಪಟ್ಟಣದಲ್ಲಿ ಗಿಫ್ಟ್ ಕೂಪನ್ ಹಂಚಲು ಕಾಂಗ್ರೆಸ್ ಹುನ್ನಾರ: HDK ಗಂಭೀರ ಆರೋಪ

By kannadanewsnow0931/10/2024 4:56 PM

ಚನ್ನಪಟ್ಟಣ/ರಾಮನಗರ: ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ವಾಮಮಾರ್ಗದಲ್ಲಿ ಉಪ ಚುನಾವಣೆ ಗೆಲ್ಲಲು ಸಂಚು ರೂಪಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ತಿಟ್ಟಮಾರನಹಳ್ಳಿ, ಕುಂತೂರು ದೊಡ್ಡಿ, ಚಿಕ್ಕನದೊಡ್ಡಿ, ಪಟಲು, ಕಳ್ಳಿ ಹೊಸೂರು, ಮೈಲನಾಯಕನಹಳ್ಳಿ ಇನ್ನಿತರೆ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದರು ಅವರು.

ಕಳೆದ ಚುನಾವಣೆಯಲ್ಲಿ ರಾಮನಗರ ಸೇರಿ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ಕಳೆದ ಕಾಂಗ್ರೆಸ್ ಪಕ್ಷ ಗಿಫ್ಟ್ ಕೂಪನ್ ಗಳನ್ನು ಹಂಚಿ ಅಕ್ರಮ ನಡೆಸಿತ್ತು. ಉಪ ಚುನಾವಣೆಯಲ್ಲಿಯೂ ಅದೇ ರೀತಿಯ ಅಕ್ರಮ ನಡೆಸಲು ಹೊರಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕನಕಪುರ ಸೇರಿ ರಾಜ್ಯದ ಹಲವಾರು ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಬೆಂಗಳೂರಿನ ಲುಲು ಮಾಲ್ ನಲ್ಲಿ ಖರೀದಿ ಮಾಡುವ ₹3,000,₹5000 ಮೌಲ್ಯದ ಗಿಫ್ಟ್ ಕೂಪನ್ ಹಂಚಲಾಯಿತು. ಚುನಾವಣೆ ಮುಗಿದ ಮೇಲೆ ಆ ಕೂಪನ್ ಗಳನ್ನು ಮಾಲ್ ನವರಿಗೆ ಕೊಟ್ಟರೆ ಅವರು ವಾಪಸ್ ಕಳಿಸಿದ್ದಾರೆ. ಇದೇ ಕುತಂತ್ರವನ್ನು ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿಯೂ ಜಾರಿ ಮಾಡುತ್ತಿದೆ ಎಂದು ಅವರು ನೇರ ಆರೋಪ ಮಾಡಿದರು.

ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕೂಪನ್ ಷಡ್ಯಂತ್ರ ಮಾಡಲು ಕಾಂಗ್ರೆಸ್ ಹೊರಟಿದೆ. ಇಂಥ ವಂಚನೆಯ ಕುತಂತ್ರಕ್ಕೆ ಯಾರೂ ಮರುಳಾಗಾಬಾರದು ಎಂದು ಕೇಂದ್ರ ಸಚಿವರು ಮನವಿ ಮಾಡಿದರು.

ನಿಖಿಲ್ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ

ನಿಖಿಲ್ ಕುಮಾರಸ್ವಾಮಿ ಅವರು ಎನ್ ಡಿಎ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ ಎಂದು ಹೇಳಿದ ಕುಮಾರಸ್ವಾಮಿ ಅವರು; ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ವ್ಯಕ್ತಿ ಎನ್ ಡಿಎ ಅಭ್ಯರ್ಥಿ ಆಗಬೇಕಿತ್ತು. ಅವರು ಮೊದಲು ನನಗೆ ಟಿಕೆಟ್ ಬೇಕು ಎಂದು ಕೇಳಿದರು. ಆಮೇಲೆ, ಕಮಲ ಚಿಹ್ನೆ ಆದರೇನು, ತೆನೆ ಹೊತ್ತ ಮಹಿಳೆಯ ಚಿಹ್ನೆ ಆದರೇನು.. ಚುನಾವಣೆಗೆ ನಿಲ್ಲಲು ಸೈ ಎಂದು ಹೇಳಿಕೊಂಡಿದ್ದರು. ಅವರ ಮಾತುಗಳಿಗೆ ನಾವೂ ಮರುಳಾದೆವು. ಜೆಡಿಎಸ್ ಚಿಹ್ನೆ ಅಡಿಯಲ್ಲಿ ನಿಲ್ಲಲ್ಲ, ಆಮೇಲೆ ಕಮಲ ಚಿಹ್ನೆಯೇ ಬೇಕು ಹೊಸ ವರಸೆ ತೆಗೆದರು. ಅದಕ್ಕೂ ನಾವು ಒಪ್ಪಿದೆವು. ಹಿರಿಯರಾದ ಜೆಪಿ ನಡ್ದಾ, ಪ್ರಹ್ಲಾದ್ ಜೋಷಿ ಅವರು ನನಗೇ ಕರೆ ಮಾಡಿ ಆ ವ್ಯಕ್ತಿಗೆ ಟಿಕೆಟ್ ಕೊಡಿ ಎಂದು ಹೇಳಿದರು. ಅವರ ಮಾತು ಮೀರದೆ ಅವರಿಗೆ ಟಿಕೆಟ್ ಕೊಡಲು ತೀರ್ಮಾನ ಮಾಡಿದೆ. ಆದರೆ, ಆ ವ್ಯಕ್ತಿ ಎಲ್ಲರಿಗೂ ಟೋಪಿ ಹಾಕಿ ಹೋದರು ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಚನ್ನಪಟ್ಟಣದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು ಕುಮಾರಸ್ವಾಮಿಗೆ ಕ್ಷೇತ್ರದಲ್ಲಿ ಎಷ್ಟು ಕೆರೆ ಇದೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ನಾನು ಎಷ್ಟು ಕಡೆ ಭೇಟಿ ಕೊಟ್ಟಿದ್ದೇನೆ, ಎಷ್ಟು ಕೆರೆಗಳಿಗೆ ನೀರು ಹರಿಸಿದ್ದೇನೆ. ದಾಖಲೆಗಳಿವೆ, ಬೇಕಾದರೆ ನೋಡಿಕೊಳ್ಳಬಹುದು ಎಂದು ಅವರು ಹೇಳಿದರು.

Share. Facebook Twitter LinkedIn WhatsApp Email

Related Posts

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

27/02/2026 9:13 PM1 Min Read

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM1 Min Read

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM1 Min Read
Recent News

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM

ಮಾ.1ರಿಂದ ರೈಲು ಟಿಕೆಟ್’ಗಳಿಂದ ಗ್ಯಾಸ್ ಸಿಲಿಂಡರ್ ಬೆಲೆವರೆಗೆ ಹಲವು ನಿಯಮ ಬದಲಾವಣೆ ; ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ

27/02/2026 9:35 PM

ನಿಮ್ಮ ಹೆಸ್ರಲ್ಲಿ ಬೇರೆ ಯಾರಾದ್ರು ಸಾಲ ಪಡೆದಿರ್ಬೋದು ಅನ್ನೋ ಡೌಟ್ ಇದ್ಯಾ.? ಈಗಲೇ ಈ ರೀತಿ ಚೆಕ್ ಮಾಡಿ!

27/02/2026 9:15 PM
State News
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

By kannadanewsnow0927/02/2026 9:13 PM KARNATAKA 1 Min Read

ಮೈಸೂರು: ಮೈಸೂರು ಮತ್ತು ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಬೈಪಾಸ್ ನಡುವೆ ನಡೆಯುತ್ತಿದ್ದ ರಸ್ತೆ ಕೆಳಸೇತುವೆ (RUB) ಕಾಮಗಾರಿಯ ಹಿನ್ನೆಲೆಯಲ್ಲಿ ಈ…

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.