Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಹಾಸನದಲ್ಲಿ ಭೀಕರ ಮರ್ಡರ್ : ರಾಡ್ ನಿಂದ ಹೊಡೆದು ತಂದೆಯನ್ನೇ ಬರ್ಬರವಾಗಿ ಕೊಂದ ಮಗ!

11/01/2026 2:32 PM

BIG NEWS : ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಅಂದರೆ, ನಮ್ಮ ಚಿನ್ನ ನಮಗೆ ಕೊಡಿ : ಮಾಲೀಕರು ಗ್ರಾಮಸ್ಥರು ಒತ್ತಾಯ

11/01/2026 2:10 PM

BREAKING : ಬೆಳಗಾವಿಯಲ್ಲಿ ಮಕ್ಕಳ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ!

11/01/2026 2:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ
KARNATAKA

ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ

By kannadanewsnow0916/12/2025 8:45 PM

ಮಂಡ್ಯ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ 66ನೇ ಜನ್ಮದಿನದ ಅಂಗವಾಗಿ ಮದ್ದೂರು ನಗರದ ವಿವಿಧ ದೇವಾಲಯಗಳ ಅರ್ಚಕರುಗಳು ಮಂಗಳವಾರ ಮಂತ್ರಾಕ್ಷತೆ ಮತ್ತು ಫಲ ತಾಂಬೂಲ ನೀಡಿ ಆಶೀರ್ವದಿಸಿದರು.

ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನಿಂದ ಮೈಸೂರಿನ ಶ್ರೀ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ ಅವರು ಮದ್ದೂರು ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಸಾವಿರಾರು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಜೈಕಾರ ಹಾಕಿ ಬೃಹತ್ ಹೂವಿನ ಹಾರಗಳನ್ನು ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು‌‌.

ಬಳಿಕ, ಸಚಿವ ಕುಮಾರಸ್ವಾಮಿ ಅವರಿಗೆ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ಪ್ರದೀಪ ಆಚಾರ್ಯ, ಸಹ ಅರ್ಚಕ ಸುರೇಶ ಆಚಾರ್ಯ, ಶ್ರೀ ಉಗ್ರ ನರಸಿಂಹ ಸ್ವಾಮಿ ದೇಗುಲದ ಅರ್ಚಕ ಪ್ರಶಾಂತ್, ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಅರ್ಚಕ ರಾಘವೇಂದ್ರ ಅವರುಗಳ ತಂಡ ಕುಮಾರಸ್ವಾಮಿ ಅವರಿಗೆ ಶೇಷ ವಸ್ತ್ರ, ತೀರ್ಥ ಪ್ರಸಾದ ನೀಡಿ ಆಶೀರ್ವದಿಸಿದರು.
ಸಚಿವ ಹೆಚ್.ಡಿ. ಕುಮಾರಸ್ವಾಮಿ ಜನ್ಮ ದಿನಾಂಕವು ಯೋಗದ ಫಲವಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ಅವರು ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದರು. ಇದೇ ವೇಳೆ ಮನ್ಮುಲ್ ಮಾಜಿ ನಿರ್ದೇಶಕಿ ರೂಪ ಕುಮಾರಸ್ವಾಮಿ ಅವರಿಗೆ ಬೆಲ್ಲದಾರತಿ ಬೆಳಗಿ ಹುಟ್ಟು ಹಬ್ಬದ ಶುಭಾಶಯ ಕೋರಿದರು.

ನಂತರ ಜೆಡಿಎಸ್ ಕಾರ್ಯಕರ್ತರಿಗೆ ಅಭಯ ನೀಡಿದ ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ನಮ್ಮ ಪಕ್ಷಕ್ಕೆ ಒಳ್ಳೆಯ ಕಾಲ ಬರುತ್ತದೆ. ಅಲ್ಲಿಯವರೆಗೆ ಕಾರ್ಯಕರ್ತರು ಎದೆಗುಂದಬಾರದು. ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಒಂದು ಸಲಹೆ ನೀಡಿದರು.

ಜೆಡಿಎಸ್ ಕಾರ್ಯಕರ್ತರು ತಂದಿದ್ದ ಭಾರಿ ಗಾತ್ರದ ಕೇಕ್ ಕತ್ತರಿಸಿ ಹೆಚ್.ಡಿ.ಕುಮಾರಸ್ವಾಮಿ ಹುಟ್ಟು ಹಬ್ಬ ಆಚರಿಸಿಕೊಂಡರು. ಇದೇ ವೇಳೆ ಮಾಜಿ ಸಚಿವ ಡಿ‌.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು ಹಾಗೂ ಮಾಜಿ ಶಾಸಕ ಸುರೇಶ್ ಗೌಡ ಅವರುಗಳು ಕೇಕ್ ತಿನ್ನಿಸುವ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದರು.

ಇದೇ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ. ಜೆಡಿಎಸ್ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ದಿವ್ಯ ರಾಮಚಂದ್ರಶೆಟ್ಟಿ, ಸಮಾಜ ಸೇವಕ ಅಪ್ಪುಪಿ.ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ರವಿ ಚನ್ನಚಂದ್ರ, ನಗರಸಭಾ ಮಾಜಿ ಸದಸ್ಯರಾದ ಪ್ರವೀಣ್, ಮನೋಜ್ ಸೇರಿದಂತೆ ನೂರಾರು ಮಂದಿ ಜೆಡಿಎಸ್, ಬಿಜೆಪಿ ಮುಖಂಡರು ಕಾರ್ಯಕರ್ತರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಐಪಿಎಲ್ 2026 ಹರಾಜು: ಹೀಗಿದೆ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ | IPL 2026 Auction

Share. Facebook Twitter LinkedIn WhatsApp Email

Related Posts

SHOCKING : ಹಾಸನದಲ್ಲಿ ಭೀಕರ ಮರ್ಡರ್ : ರಾಡ್ ನಿಂದ ಹೊಡೆದು ತಂದೆಯನ್ನೇ ಬರ್ಬರವಾಗಿ ಕೊಂದ ಮಗ!

11/01/2026 2:32 PM1 Min Read

BIG NEWS : ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಅಂದರೆ, ನಮ್ಮ ಚಿನ್ನ ನಮಗೆ ಕೊಡಿ : ಮಾಲೀಕರು ಗ್ರಾಮಸ್ಥರು ಒತ್ತಾಯ

11/01/2026 2:10 PM1 Min Read

BREAKING : ಬೆಳಗಾವಿಯಲ್ಲಿ ಮಕ್ಕಳ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ!

11/01/2026 2:02 PM1 Min Read
Recent News

SHOCKING : ಹಾಸನದಲ್ಲಿ ಭೀಕರ ಮರ್ಡರ್ : ರಾಡ್ ನಿಂದ ಹೊಡೆದು ತಂದೆಯನ್ನೇ ಬರ್ಬರವಾಗಿ ಕೊಂದ ಮಗ!

11/01/2026 2:32 PM

BIG NEWS : ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಅಂದರೆ, ನಮ್ಮ ಚಿನ್ನ ನಮಗೆ ಕೊಡಿ : ಮಾಲೀಕರು ಗ್ರಾಮಸ್ಥರು ಒತ್ತಾಯ

11/01/2026 2:10 PM

BREAKING : ಬೆಳಗಾವಿಯಲ್ಲಿ ಮಕ್ಕಳ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ!

11/01/2026 2:02 PM

ಬೆಂಗಳೂರಲ್ಲಿ ತಾಯಿ ಮೇಲಿನ ದ್ವೇಷಕ್ಕೆ ಮಗು ಹತ್ಯೆ ಕೇಸ್ ಗೆ ಟ್ವಿಸ್ಟ್ : ಕೊಲೆಗೂ ಮುನ್ನ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

11/01/2026 1:58 PM
State News
KARNATAKA

SHOCKING : ಹಾಸನದಲ್ಲಿ ಭೀಕರ ಮರ್ಡರ್ : ರಾಡ್ ನಿಂದ ಹೊಡೆದು ತಂದೆಯನ್ನೇ ಬರ್ಬರವಾಗಿ ಕೊಂದ ಮಗ!

By kannadanewsnow0511/01/2026 2:32 PM KARNATAKA 1 Min Read

ಹಾಸನ : ಹಾಸನದಲ್ಲಿ ಭೀಕರವಾದ ಕೊಲೆಯಾಗಿದ್ದು ತಂದೆಯನ್ನೇ ರಾಡ್ ನಿಂದ ಹೊಡೆದು ಮಗ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೌಟುಂಬಿಕ…

BIG NEWS : ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಅಂದರೆ, ನಮ್ಮ ಚಿನ್ನ ನಮಗೆ ಕೊಡಿ : ಮಾಲೀಕರು ಗ್ರಾಮಸ್ಥರು ಒತ್ತಾಯ

11/01/2026 2:10 PM

BREAKING : ಬೆಳಗಾವಿಯಲ್ಲಿ ಮಕ್ಕಳ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ!

11/01/2026 2:02 PM

ಬೆಂಗಳೂರಲ್ಲಿ ತಾಯಿ ಮೇಲಿನ ದ್ವೇಷಕ್ಕೆ ಮಗು ಹತ್ಯೆ ಕೇಸ್ ಗೆ ಟ್ವಿಸ್ಟ್ : ಕೊಲೆಗೂ ಮುನ್ನ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

11/01/2026 1:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.