Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಟೆಲಿಗ್ರಾಮ್ ನಿರ್ಬಂಧದ ವಿರುದ್ಧ ಅರ್ಜಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

BIG BREAKING : 100 ದಿನಗಳ `ಇರಾನ್-ಅಮೆರಿಕ ಯುದ್ಧ’ ಅಧಿಕೃತ ಅಂತ್ಯ : 14 ಅಂಶಗಳ ಶಾಂತಿ ಒಪ್ಪಂದಕ್ಕೆ `ಡಿಜಿಟಲ್ ಸಹಿ’.!

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಪತ್ನಿಯಿಂದ 14 ನಿವೇಶನಗಳನ್ನು ವಾಪಸ್ ಪಡೆದ ‘ಮೂಡಾ ಆಯುಕ್ತ’ರನ್ನು ಕೂಡಲೇ ಬಂಧಿಸಿ: HDK ಆಗ್ರಹ
KARNATAKA

ಸಿಎಂ ಪತ್ನಿಯಿಂದ 14 ನಿವೇಶನಗಳನ್ನು ವಾಪಸ್ ಪಡೆದ ‘ಮೂಡಾ ಆಯುಕ್ತ’ರನ್ನು ಕೂಡಲೇ ಬಂಧಿಸಿ: HDK ಆಗ್ರಹ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ನೇರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮೂಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜೆಡಿಎಸ್ ಪಕ್ಷದ ಕಚೇರಿ ಬಳಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಮೂಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮೂಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು.

ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು; ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.

ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಮೂಡಾ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ಕೈಗೆತ್ತಿಕೊಂಡು ಈಸಿಆರ್ ದಾಖಲು ಮಾಡಿದ ಕೂಡಲೇ ಬಿರುಸಿನ ಬೆಳವಣಿಗೆಗಳು ನಡೆದಿವೆ. ಮಂಗಳವಾರದ ದಿನ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರೇ ಖುದ್ದು ಮುಡಾ ಕಚೇರಿಗೆ ಬಂದು ನಿವೇಶನ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಹೇಳಿಕೆ ಹೊರಬಿದ್ದ ನಂತರ ಎಲ್ಲಾ ನಿವೇಶನಗಳು ಮೂಡಾ ವಶಕ್ಕೆ ಹೋಗಿವೆ. ಹದಿನಾಲ್ಕು ನಿವೇಶನಗಳ ಕ್ರಯಪತ್ರಗಳು ರದ್ದಾಗಿವೆ ಎಂದು ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲಾ ರಾಕೆಟ್ ವೇಗದಲ್ಲಿ ಆಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇದೆಲ್ಲವೂ ಸಂಶಯಾಸ್ಪದವಾಗಿ ನಡೆದಿದೆ. ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಯಾಲಗಳ ಆದೇಶಗಳಿವೆ. ಹೀಗಿದ್ದೂ ಮೂಡಾ ಆಯುಕ್ತರು ನಿವೇಶನಗಳನ್ನು ವಾಪಸ್ ಪಡೆಯುವ ನಿರ್ಧಾರ ಮಾಡುತ್ತಾರೆ. ಅವರಿಗೆ ಈ ಅಧಿಕಾರ ಇಲ್ಲ. ಇಲ್ಲಿ ಸಿಎಂ ಅಧಿಕಾರದ ದುರುಪಯೋಗ ಮಾಡಿದ್ದಾರೆ. ಯಾವ ಆಧಾರದ ಮೇಲೆ ವಾಪಸ್ ಪಡೆಯಲಾಗಿದೆ? ಮೂಡಾ ಆಯುಕ್ತರು ತಮ್ಮ ಅಧಿಕಾರ ಮೀರಿ ವರ್ತಿಸಿದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದರು.

ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಎದ್ದು ಕಾಣುತ್ತಿದೆ. ಯಾರ ಆಸ್ತಿ ಇದು. ಎಲ್ಲವನ್ನೂ ನಕಲಿ ದಾಖಲೆ ಸೃಷ್ಟಿ ಮಾಡಿ ಜನರನ್ನು ಯಾಮಾರಿಸಿದರು. ಕೋರ್ಟ್ ನಲ್ಲಿ ನಮ್ಮದೇ ಆಸ್ತಿ ಎಂದಿದ್ದಾರೆ. ಇನ್ನೊಮ್ಮೆ ಜುಜುಬಿ ನಿವೇಶನಗಳು ಎಂದರು. ಅವುಗಳ ಮೌಲ್ಯ ₹62 ಕೋಟಿ ಎಂದರು. ಇಷ್ಟಕ್ಕೂ ಮೂಡಾ ಆಯುಕ್ತ ಎಲ್ಲಿಗೆ, ಯಾರ ಬಳಿಗೆ ಯಾವಾಗ ಬಂದು ನಿವೇಶನಗಳನ್ನು ವಾಪಸ್ ಪಡೆಯುವ ಮನವಿ ಸ್ವೀಕಾರ ಮಾಡಿದರು? ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅವರು ದೂರಿದರು.

ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಯುವತಿಗೆ ಆಟೋ ಚಾಲಕ ಅವಾಜ್, ಹಲ್ಲೆಗೂ ಯತ್ನ

ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

2 Mins Read

BIG NEWS : ರಾಜ್ಯದ ಪೊಲೀಸ್ ಇಲಾಖೆಯಲ್ಲೂ ಇನ್ಮುಂದೆ `ಡಿಜಿಟಲ್ ಹಾಜರಾತಿ’: ‘ಕರ್ತವ್ಯ’ ಆ್ಯಪ್ ಅನುಷ್ಠಾನಕ್ಕೆ ಸರ್ಕಾರ ಮಹತ್ವದ ಆದೇಶ

1 Min Read

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

2 Mins Read
Recent News

​ಟೆಲಿಗ್ರಾಮ್ ನಿರ್ಬಂಧದ ವಿರುದ್ಧ ಅರ್ಜಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

BIG BREAKING : 100 ದಿನಗಳ `ಇರಾನ್-ಅಮೆರಿಕ ಯುದ್ಧ’ ಅಧಿಕೃತ ಅಂತ್ಯ : 14 ಅಂಶಗಳ ಶಾಂತಿ ಒಪ್ಪಂದಕ್ಕೆ `ಡಿಜಿಟಲ್ ಸಹಿ’.!

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

​ಫಿಫಾ ವಿಶ್ವಕಪ್ 2026: ನಾಯಕ ಹ್ಯಾರಿ ಕೇನ್ ಅಬ್ಬರ; ಕ್ರೊಯೇಷಿಯಾವನ್ನು 4-2 ಗೋಲುಗಳಿಂದ ಮಣಿಸಿದ ಇಂಗ್ಲೆಂಡ್!

State News
KARNATAKA

`LPG’ ಗ್ರಾಹಕರೇ ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಕಟ್ | LPG Gas Subsidy

By kannadanewsnow57 KARNATAKA 2 Mins Read

ಬೆಂಗಳೂರು : ನೀವು ಭಾರತ ಗ್ಯಾಸ್ (Bharat Gas) ಗ್ರಾಹಕರಾಗಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಅತ್ಯಂತ ಪ್ರಮುಖ ಹಾಗೂ ಗಡುವಿನ ಮಾಹಿತಿಯಿದೆ.…

BIG NEWS : ರಾಜ್ಯದ ಪೊಲೀಸ್ ಇಲಾಖೆಯಲ್ಲೂ ಇನ್ಮುಂದೆ `ಡಿಜಿಟಲ್ ಹಾಜರಾತಿ’: ‘ಕರ್ತವ್ಯ’ ಆ್ಯಪ್ ಅನುಷ್ಠಾನಕ್ಕೆ ಸರ್ಕಾರ ಮಹತ್ವದ ಆದೇಶ

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ :’ಕರ್ತವ್ಯ’ ಆ್ಯಪ್ ನಲ್ಲಿ ಹಾಜರಾತಿ ಕಡ್ಡಾಯ ನೋಂದಣಿಗೆ 7 ದಿನಗಳ ಅಂತಿಮ ಗಡುವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.