Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಲ್ಲಿ ಪಟಾಕಿ ಸಿಡಿದು ಈವರೆಗೆ ನಾಲ್ವರಿಗೆ ಗಾಯ

20/10/2025 9:30 PM

ಎಚ್ಚರ.! ಉಗುರು ಕಚ್ಚುವ ಅಭ್ಯಾಸವು ಮಾರಕ ‘ಹೃದಯ ಸಮಸ್ಯೆ’ಗೆ ಕಾರಣವಾಗಬಹುದು: ವೈದ್ಯರು | Habit of Nail-Biting

20/10/2025 9:14 PM

BIG NEWS: ‘ಕನ್ನಡಿಗ’ ಅಂದ್ರೆ ಯಾರು.? ‘ಸರ್ಕಾರಿ ಆದೇಶ’ದಲ್ಲಿ ಹೇಳೋದೇನು? ಇಲ್ಲಿದೆ ಓದಿ

20/10/2025 8:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರದ ವಿರುದ್ಧ ಕಾಲು ಕೆರೆದು ಜಗಳಕ್ಕೆ ಬರುವ ರಾಜ್ಯ ಸರಕಾರಕ್ಕೆ ಈ ಕಿವಿಮಾತು ಹೇಳಿದ HDK
KARNATAKA

ಕೇಂದ್ರದ ವಿರುದ್ಧ ಕಾಲು ಕೆರೆದು ಜಗಳಕ್ಕೆ ಬರುವ ರಾಜ್ಯ ಸರಕಾರಕ್ಕೆ ಈ ಕಿವಿಮಾತು ಹೇಳಿದ HDK

By kannadanewsnow0909/02/2025 8:35 PM

ಹಾವೇರಿ : ಸಂಘರ್ಷದಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಕೇಂದ್ರ ಸರಕಾರದ ಜತೆ ಸಂಘರ್ಷ ನಡೆಸುವುದರಿಂದ ರಾಜ್ಯದ ಯಾವುದೇ ಸಮಸ್ಯೆ, ವಿವಾದ ಬಗೆಹರಿಯುವುದೂ ಇಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ಹಾವೇರಿ ಜಿಲ್ಲೆಯ ರಾಣಿಬೆನ್ನೂರುನಲ್ಲಿ ಕರ್ನಾಟಕ ವೈಭವ ವೈಚಾರಿಕ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಭಾಷಣ ಮಾಡಿದರು.

ಕರ್ನಾಟಕದ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರಕಾರ ಬದ್ಧವಾಗಿದೆ. ನಾನು ಸೇರಿದಂತೆ ಕೇಂದ್ರದಲ್ಲಿರುವ ರಾಜ್ಯ ಎಲ್ಲಾ ಸಚಿವರು ಕೆಲಸ ಮಾಡಲು ತಯಾರಿದ್ದಾರೆ. ಆದರೆ, ದಿನಕ್ಕೊಂದು ತಂಟೆ ತಕರಾರು ಮಾಡಿಕೊಂಡು ರಾಜ್ಯ ಸರಕಾರ ಅಮೂಲ್ಯ ಅವಕಾಶವನ್ನು ಹಾಳು ಮಾಡಿಕೊಳ್ಳುತ್ತಿದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ರಾಷ್ಟ್ರಕವಿ ಕುವೆಂಪು ಅವರು ‘ಜಯಭಾರತ ಜನನಿಯ ತನುಜಾತೆ’ ಎಂದು ಬರೆದಿದ್ದಾರೆ. ಕುವೆಂಪು ಅವರು ಭಾರತವನ್ನು ತಾಯಿಯಾಗಿ ಮತ್ತು ಕರ್ನಾಟಕವನ್ನು ಆಕೆಯ ಮಗಳಂತೆ ಭಾವಿಸಿದ್ದಾರೆ. ಇಂತಹ ಮಹೋನ್ನತ ವಿಶಾಲ ದೃಷ್ಟಿಕೋನ ಅವರದ್ದು ಎಂಬುದನ್ನು ಈ ಒಂದು ಸಾಲಿನ ಮೂಲಕ ಅರ್ಥ ಮಾಡಿಕೊಳ್ಳಬಹುದು. ಆದರೆ, ರಾಜ್ಯ ಸರಕಾರ ಯಾವ ದಿಕ್ಕಿನಲ್ಲಿ ಆಲೋಚನೆ ಮಾಡುತ್ತಿದೆ ಎಂಬ ಬಗ್ಗೆ ಅವಲೋಕನ ಮಾಡಿಕೊಳ್ಳುವುದು ಉಚಿತ ಎಂದು ಸಚಿವರು ಅಭಿಪ್ರಾಯಪಟ್ಟರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಅತಿ ಹೆಚ್ಚು ಗೌರವ ಸಲ್ಲುತ್ತಿದೆ. ಆದರೆ, ಕೆಲವು ವಿಘಟಕ ಶಕ್ತಿಗಳು ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿವೆ. ರಾಷ್ಟ್ರದ ಹಿತದೃಷ್ಟಿಯಿಂದ ಇದು ಒಳ್ಳೆಯದಲ್ಲ ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಪ್ರತಿಯೊಂದು ರಾಜ್ಯವೂ ಸಮತೋಲಿತವಾಗಿ ಅಭಿವೃದ್ಧಿ ಹೊಂದುತ್ತಿದೆ. ಈಶಾನ್ಯ ರಾಜ್ಯಗಳಲ್ಲಿ ಬಹುದೊಡ್ಡ ಪ್ರಗತಿಯ ಪರ್ವವೇ ಆರಂಭವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಮೋದಿ ಅವರು ಆ ರಾಜ್ಯಗಳಿಗೆ ಸುಮಾರು ಐದೂವರೆ ಲಕ್ಷ ಕೋಟಿಗೂ ಹೆಚ್ಚು ಅನುದಾನ ನೀಡಿದ್ದಾರೆ ಎಂದು ಕೇಂದ್ರ ಸಚಿವರು ಒತ್ತಿ ಹೇಳಿದರು.

ಭಾರತ ಎಲ್ಲಾ ಕ್ಷೇತ್ರಗಳಲ್ಲಿಯೂ ವೇಗವಾಗಿ ಬೆಳೆಯುತ್ತಿದೆ. ಆದರೆ, ಮನುಷ್ಯ ಸಂಬಂಧಗಳು ಅಳಿಯುತ್ತಿವೆ. ಇದು ನಿಜಕ್ಕೂ ನೋವಿನ ಸಂಗತಿ. ಕರ್ನಾಟಕ ವೈಭವದಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಲಿ ಎಂದು ಆಶಯ ವ್ಯಕ್ತಪಡಿಸಿದರು.

ಹರಿಹರದ ಶ್ರೀ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಮಹಾಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಖ್ಯಾತ ಹಿಂದೂಸ್ತಾನಿ ವಿದ್ವಾಂಸರಾದ ಸಂಗೀತಾ ಕಟ್ಟಿ ಅವರಿಗೆ ಸರ್ವಜ್ಞ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾತೆ ಮಂಜಮ್ಮ ಜೋಗತಿ, ಪ್ರಜ್ಞಾವಾಹದ ಸಂಯೋಜಕ ರಘುನಂದನ, ಪರಿವರ್ತನ ಸಂಘಟನೆಯ ಡಾ. ನಾರಾಯಣ ಪವಾರ, ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಗೇಟಿ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯ ಸರಕಾರವು ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನವನ್ನೇ ಕೈಗೊಂಡಿದೆ: MLC ಎನ್.ರವಿಕುಮಾರ್

ಫೆ.11ರಂದು ಇನ್ವೆಸ್ಟ್ ಕರ್ನಾಟಕ 2025 ಉದ್ಘಾಟನೆ: ಈ ಬಾರಿ ಏನಿರುತ್ತೆ? ಯಾವ ಚರ್ಚೆಯಲ್ಲಿ ಯಾರು ಭಾಗಿ.? ಇಲ್ಲಿದೆ ಡೀಟೆಲ್ಸ್ | Invest Karnataka 2025

BREAKING : ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿಶೀಟರ್ `ಸೈಂಟಿಸ್ಟ್ ಮಂಜ್ಯಾ’ ಸೇರಿ ಮೂವರು ಅರೆಸ್ಟ್.!

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಪಟಾಕಿ ಸಿಡಿದು ಈವರೆಗೆ ನಾಲ್ವರಿಗೆ ಗಾಯ

20/10/2025 9:30 PM1 Min Read

BIG NEWS: ‘ಕನ್ನಡಿಗ’ ಅಂದ್ರೆ ಯಾರು.? ‘ಸರ್ಕಾರಿ ಆದೇಶ’ದಲ್ಲಿ ಹೇಳೋದೇನು? ಇಲ್ಲಿದೆ ಓದಿ

20/10/2025 8:43 PM1 Min Read

‘ವಾಟ್ಸಾಪ್’ನ ಹೊಸ ಸಂಚಲನ! ಈಗ ಅಪರಿಚಿತ ಜನರಿಂದ ಬರುವ ಸಂದೇಶಗಳು ಸ್ವಯಂಚಾಲಿತವಾಗಿ ಬ್ಲಾಕ್ | WhatsApp New Feature

20/10/2025 8:15 PM2 Mins Read
Recent News

BREAKING: ಬೆಂಗಳೂರಲ್ಲಿ ಪಟಾಕಿ ಸಿಡಿದು ಈವರೆಗೆ ನಾಲ್ವರಿಗೆ ಗಾಯ

20/10/2025 9:30 PM

ಎಚ್ಚರ.! ಉಗುರು ಕಚ್ಚುವ ಅಭ್ಯಾಸವು ಮಾರಕ ‘ಹೃದಯ ಸಮಸ್ಯೆ’ಗೆ ಕಾರಣವಾಗಬಹುದು: ವೈದ್ಯರು | Habit of Nail-Biting

20/10/2025 9:14 PM

BIG NEWS: ‘ಕನ್ನಡಿಗ’ ಅಂದ್ರೆ ಯಾರು.? ‘ಸರ್ಕಾರಿ ಆದೇಶ’ದಲ್ಲಿ ಹೇಳೋದೇನು? ಇಲ್ಲಿದೆ ಓದಿ

20/10/2025 8:43 PM

BREAKING: ಬಾಲಿವುಡ್ ಖ್ಯಾತ ಹಾಸ್ಯನಟ ಗೋವರ್ಧನ್ ಅಸ್ರಾಣಿ ಇನ್ನಿಲ್ಲ | Asrani no more

20/10/2025 8:40 PM
State News
KARNATAKA

BREAKING: ಬೆಂಗಳೂರಲ್ಲಿ ಪಟಾಕಿ ಸಿಡಿದು ಈವರೆಗೆ ನಾಲ್ವರಿಗೆ ಗಾಯ

By kannadanewsnow0920/10/2025 9:30 PM KARNATAKA 1 Min Read

ಬೆಂಗಳೂರು: ನಗರದಲ್ಲಿ ದೀಪಾವಳಿ ಆರಂಭದಲ್ಲೇ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಪಟಾಕಿ ಸಿಡಿದು ನಾಲ್ವರು ಬೆಂಗಳೂರಲ್ಲಿ ಗಾಯಗೊಂಡಿದ್ದಾರೆ. ಬೆಂಗಳೂರಲ್ಲಿ ಬಿಜಿಲಿ…

BIG NEWS: ‘ಕನ್ನಡಿಗ’ ಅಂದ್ರೆ ಯಾರು.? ‘ಸರ್ಕಾರಿ ಆದೇಶ’ದಲ್ಲಿ ಹೇಳೋದೇನು? ಇಲ್ಲಿದೆ ಓದಿ

20/10/2025 8:43 PM

‘ವಾಟ್ಸಾಪ್’ನ ಹೊಸ ಸಂಚಲನ! ಈಗ ಅಪರಿಚಿತ ಜನರಿಂದ ಬರುವ ಸಂದೇಶಗಳು ಸ್ವಯಂಚಾಲಿತವಾಗಿ ಬ್ಲಾಕ್ | WhatsApp New Feature

20/10/2025 8:15 PM

ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ವೆಚ್ಚ, ಸರ್ಕಾರ ದಿವಾಳಿಯಾಗಿಲ್ಲ: ಸಿಎಂ ಸಿದ್ದರಾಮಯ್ಯ

20/10/2025 8:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.