Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರ: ಸಿಎಸ್‌ಕೆ ವಿರುದ್ಧ ದಾಖಲೆಯ ಮೊತ್ತ; ಒಂದೇ ಓವರ್‌ನಲ್ಲಿ 30 ರನ್ ಚಚ್ಚಿದ ಟಿಮ್ ಡೇವಿಡ್!

06/04/2026 7:11 AM

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

06/04/2026 7:05 AM

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ: ಇನ್ಮುಂದೆ ವಿಳಾಸ ಪುರಾವೆ ಇಲ್ಲದೆಯೇ ಸಿಗಲಿದೆ 5 ಕೆಜಿ ಎಲ್‌ಪಿಜಿ ಸಿಲಿಂಡರ್!

06/04/2026 7:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » HDK 2 ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಅಭಿವೃದ್ಧಿ ಕೊಡುಗೆ ಪಟ್ಟಿ ಬಿಡುಗಡೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು
KARNATAKA

HDK 2 ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಅಭಿವೃದ್ಧಿ ಕೊಡುಗೆ ಪಟ್ಟಿ ಬಿಡುಗಡೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು

By kannadanewsnow0524/10/2024 2:16 PM

ಚನ್ನಪಟ್ಟಣ : ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ ಎಂದು ಸಿ.ಪಿ.ಯೋಗೇಶ್ವರ್ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ.

ಮುಂದಿನ ದಿನಗಳಲ್ಲಿ ಮಿಕ್ಕ ವಿಚಾರಗಳನ್ನು ನಾನು ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಸಾಕಷ್ಟು ಸಿನಿಮಾಗಳನ್ನು ನಾವು ನೋಡಬೇಕಿದೆ. ಚುನಾವಣೆ ಗೆಲ್ಲುವುದೊಂದೇ ನಮ್ಮ ಗುರಿ. ಲೋಕಸಭಾ ಚುನಾವಣೆ ಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಚನ್ನಪಟ್ಟಣದ ಜನತೆ 80 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ್ದರು. ಆದರೆ ಮಿಕ್ಕ ಕಡೆ ಕಡಿಮೆ ಮತಗಳು ಬಂದ ಕಾರಣಕ್ಕೆ ಗೆಲುವು ಸಾಧ್ಯವಾಗಲಿಲ್ಲ.

ಕಾರ್ಯಕರ್ತರ ಕೈ ಬಿಡುವುದಿಲ್ಲ, ಅವರೊಟ್ಟಿಗೆ ನಾವಿದ್ದೇವೆ

ಡಿ.ಕೆ.ಶಿವಕುಮಾರ್ ಹಾಗೂ ಸುರೇಶ್ ಅವರನ್ನು ನಂಬಿ ಬಿಜೆಪಿ ಮತ್ತು ದಳದಿಂದ ಅನೇಕ ಕಾರ್ಯಕರ್ತರು ಬಂದಿದ್ದಾರೆ. ನೀವು ನಮ್ಮ ಕೈ ಬಲಪಡಿಸಿದ್ದೀರಿ, ಯಾವುದೇ ಕಾರಣಕ್ಕೂ ನಿಮ್ಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಡು ನೀರಿನಲ್ಲಿ ಕೈ ಬಿಡುವ ಪ್ರಶ್ನೆಯಿಲ್ಲ. ಭವಿಷ್ಯದಲ್ಲಿಯೂ ನಿಮ್ಮ ಜೊತೆ ನಾವಿರುತ್ತೇವೆ. ಯೋಗೇಶ್ವರ್ ಅವರ ಜೊತೆಯೂ ಇರುತ್ತೇವೆ.

ಚನ್ನಪಟ್ಟಣಕ್ಕೆ 500 ಕೋಟಿ ಅನುದಾನ ನೀಡಿದ್ದೇವೆ

ಚನ್ನಪಟ್ಟಣಕ್ಕೆ ಹೊಸರೂಪವನ್ನು ನೀಡುವುದಕ್ಕೆ ನಾವು ಬದ್ಧವಾಗಿದ್ದೇವೆ. ಕರ್ನಾಟಕದ ಅಭಿವೃದ್ದಿಯೇ ನಮ್ಮ ಸಂಕಲ್ಪ. ಈ ಗುರಿಯನ್ನಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ಚನ್ನಪಟ್ಟಣದ ಅಭಿವೃದ್ದಿಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಸುಮಾರು 500 ಕೋಟಿ ಅನುದಾನ ನೀಡಲಾಗಿದೆ.

ಜಾತ್ಯಾತೀತ ಎನ್ನುವ ಹೆಸರನ್ನು ಇಟ್ಟುಕೊಂಡಿರುವ ಜನತಾದಳ ಕೋಮುವಾದಿ ಬಿಜೆಪಿ ಜೊತೆ ಏಕೆ ಮೈತ್ರಿ ಮಾಡಿಕೊಂಡಿತು. ದಳದವರು ಅನುಕೂಲದ ರಾಜಕಾರಣಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಭಾವನನ್ನೇ ಬಿಜೆಪಿಯಿಂದ ಕಣಕ್ಕೆ ಇಳಿಸಿದರು.

ಚನ್ನಪಟ್ಟಣದ ಅಭಿವೃದ್ದಿ ನಮ್ಮಿಂದ ಸಾಧ್ಯ

ಚನ್ನಪಟ್ಟಣದ ಋಣವನ್ನು ತೀರಿಸಬೇಕು. ಈ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಜೊತೆ ಕೈ ಜೋಡಿಸಿ, ಜನಸೇವೆ ಮಾಡಬೇಕು ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಈ ಕೈ ಚನ್ನಪಟ್ಟಣದಲ್ಲಿ ಇದ್ದರೇ ಅಭಿವೃದ್ದಿ ಸಾಧ್ಯ.

Share. Facebook Twitter LinkedIn WhatsApp Email

Related Posts

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

06/04/2026 7:05 AM2 Mins Read

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

06/04/2026 6:58 AM2 Mins Read

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

06/04/2026 6:49 AM2 Mins Read
Recent News

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರ: ಸಿಎಸ್‌ಕೆ ವಿರುದ್ಧ ದಾಖಲೆಯ ಮೊತ್ತ; ಒಂದೇ ಓವರ್‌ನಲ್ಲಿ 30 ರನ್ ಚಚ್ಚಿದ ಟಿಮ್ ಡೇವಿಡ್!

06/04/2026 7:11 AM

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

06/04/2026 7:05 AM

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ: ಇನ್ಮುಂದೆ ವಿಳಾಸ ಪುರಾವೆ ಇಲ್ಲದೆಯೇ ಸಿಗಲಿದೆ 5 ಕೆಜಿ ಎಲ್‌ಪಿಜಿ ಸಿಲಿಂಡರ್!

06/04/2026 7:01 AM

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

06/04/2026 6:58 AM
State News
KARNATAKA

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

By kannadanewsnow5706/04/2026 7:05 AM KARNATAKA 2 Mins Read

ಪ್ರಸ್ತುತ ಜಾಗತಿಕ ವಿದ್ಯಮಾನಗಳಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಗ್ಯಾಸ್ ಮತ್ತು ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇದರಿಂದಾಗಿ ಎಲ್‌ಪಿಜಿ ಸಿಲಿಂಡರ್…

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

06/04/2026 6:58 AM

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

06/04/2026 6:49 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

06/04/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.