ವಿಜಯನಗರ: ಜಿಲ್ಲೆ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿಆರತಕ್ಷತೆ ವೇಳೆಯೇ ಮದುಮಗ ಹೃದಯಾಘಾತದಿಂದ ಮೃತಪಟ್ಟಿದ್ದು, ಮದುವೆಯಲ್ಲಿ ಸಂಭ್ರಮದಲ್ಲಿದ್ದ ಮದುಮಗಳು ಆಘಾತಕ್ಕೀಡಾದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. 

BIGG NEWS : ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು : ಶಾಸಕ ಜಮೀರ್ ಅಹ್ಮದ್ ಖಾನ್

ಹೊನ್ನೂರ ಸ್ವಾಮಿ(26) ಮೃತ ದುರ್ದೈವಿ, ಅದ್ದೂರಿ ಮದುವೆಯ ಸಂಭ್ರಮದಲ್ಲಿದ್ದ ಕುಟಂಬವರಿಗೆ ಶಾಕಿಂಗ್‌ ಎದುರಾಗಿದ್ದು, ಕುಟುಂಬಸ್ಥರಲ್ಲಿ ಮುಗಿಲು ಮುಟ್ಟಿದ ಆಕ್ರಂದನ ಗೋಳಾಟ ಮರುಗುತ್ತಿರುವ ಬಂಧುಗಳು ಮನದಲ್ಲೇ ವಿಧಿಯನ್ನೊಮ್ಮೆ ಶಪಿಸುತ್ತಿದ್ದಾರೆ.

BIGG NEWS : ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು : ಶಾಸಕ ಜಮೀರ್ ಅಹ್ಮದ್ ಖಾನ್

ಬುಧವಾರ ಸಂಜೆ ಹೊನ್ನೂರ ಸ್ವಾಮಿ ಅವರ ಮದುವೆ ಆರತಕ್ಷತೆ ನಡೆಯುತ್ತಿತ್ತು. ಈ ವೇಳೆ ಎದೆ ನೋವಿನಿಂದ ಕುಸಿದು ಬಿದ್ದು ಅಸ್ವಸ್ಥಗೊಂಡ ಹೊನ್ನೂರ ಸ್ವಾಮಿ ಅವರನ್ನ ಕೂಡಲೇ ಸಮೀಪದ ಖಾಸಗಿ ಕ್ಲಿನಿಕ್​ಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮದುಮಗ ಕೊನೆಯುಸಿರೆಳೆದಿದ್ದಾನೆ.

Share.
Exit mobile version