Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM

‘ಬ್ಯಾಂಕ್ ಖಾತೆ’ಯಲ್ಲಿ ಗರಿಷ್ಠ ಎಷ್ಟು ‘ಹಣ’ ಇಡ್ಬೋದು.? ನಿಯಮಗಳೇನು ಹೇಳೋದೇನು ಗೊತ್ತಾ?

27/02/2026 2:42 PM

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

27/02/2026 2:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಹೀಟ್ ವೇವ್’ ಹಿನ್ನಲೆ: ಈ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ‘ಹವಾಮಾನ ಇಲಾಖೆ’
KARNATAKA

‘ಹೀಟ್ ವೇವ್’ ಹಿನ್ನಲೆ: ಈ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ‘ಹವಾಮಾನ ಇಲಾಖೆ’

By kannadanewsnow0914/03/2025 8:09 PM

ಬೆಂಗಳೂರು: ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಹೀಟ್ ವೇವ್ ಸ್ಟ್ರೋಕ್ ತಪ್ಪಿಸಲು ಅನುಸರಿಸಬೇಕಾದ ಕ್ರಮಗಳು:

ಸಾರ್ವಜನಿಕರು ಹೀಟ್ ವೇವ್ ಕುರಿತು ಸದಾ ಎಚ್ಚರಿಕೆಯಿಂದ ಇರಬೇಕು. ರೇಡಿಯೋ,ಟಿವಿ,ದಿನ ಪತ್ರಿಕೆಗಳಲ್ಲಿ ಬರುವ ಮುನ್ಸೂಚನೆಗಳನ್ನು ತಿಳಿದುಕೊಂಡು ಅವುಗಳನ್ನು ಪಾಲಿಸಬೇಕು. ಬಾಯಾರಿಕೆಯಿಲ್ಲದಿದ್ದರೂ ಹೆಚ್ಚಾಗಿ ನೀರನ್ನು ಕುಡಿಯುಬೇಕು. ಹಗುರ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ರಕ್ಷಣಾತ್ಮಕ ಕನ್ನಡಕಗಳು, ಛತ್ರಿ,ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸಿಬೇಕು.

ರಾತ್ರಿ ವೇಳೆ ಬಸ್ಸಿನಲ್ಲಿ ದೂರದ ಪ್ರಯಾಣ ಉತ್ತಮ, ಒಂದು ವೇಳೆ ಹಗಲಿನಲ್ಲಿ ಪ್ರಯಾಣ ಮಾಡುವ ಸಂದರ್ಭ ಬಂದರೆ, ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಿ ಕುಡಿಯಬೇಕು. ಬಿಸಿನಲ್ಲಿ ಹೊರಗೆ ಕೆಲಸ ಮಾಡುವವರು, ಟೋಪಿ ಧರಿಸಬೇಕು. ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ದೇಹವನ್ನು ತಂಪಾಗಿಡಲು ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಸೇವನೆ ಮಾಡಬೇಕು. ಸಾಕು ಪ್ರಾಣಿ, ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಸಾಕಷ್ಟು ಕುಡಿಯಲು ಸಾಕಷ್ಟು ನೀರು ಕೊಡಬೇಕು.

ಫ್ಯಾನ್ ಗಳನ್ನು ಬಳಸಿ, ತಣ್ಣೀರಿನಲ್ಲಿ ಸ್ನಾನ ಮಾಡಿ, ಒದ್ದೆಯಾದ ಬಟ್ಟೆಗಳನ್ನು ಬಳಸಬೇಕು. ತಂಪಾದ ಸಮಯ ಹಾಗೂ ಸ್ಥಳದಲ್ಲಿ ಕೆಲಸ ನಿರ್ವಹಿಸಬೇಕು. ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು. ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.

ಇವುಗಳನ್ನು ಮಾಡಬೇಡಿ

ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬೇಡಿ. ವಾಹನಗಳ ಒಳಗಡೆ ತಾಪಮಾನವು ಹೆಚ್ಚಿ ಮಕ್ಕಳಿಗೆ ಅಪಾಯಕಾರಿಯಾಗಬಹುದು. ಕಪ್ಪುಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸಬಾರದು. ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಹಾಗೂ ಶ್ರಮದಾಯಕ ಚಟುವಟಿಕೆಗಳನ್ನು ಮಾಡಬಾರದು. ಬಿಸಿಲಿನ ಸಮಯದಲ್ಲಿ ಅಡುಗೆ ಮಾಡಬಾರದು. ಅಡಿಗೆ ಮಾಡುವ ಸ್ಥಳದಲ್ಲಿ ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಡಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ. ಇವು ಹೊಟ್ಟೆ ನೋವನ್ನು ಉಂಟು ಮಾಡುತ್ತವೆ. ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬೇಡಿ. ಚಪ್ಪಲಿ ಧರಿಸದೆ ಹೊರಗಡೆ ಹೋಗಬಾರದು. ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ನೀಡಿರುವ ಈ ಸೂಚನೆಗಳನ್ನು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಾರ್ವಜನಿಕರಲ್ಲಿ ಕೋರಿದ್ದಾರೆ.

ಮಾ.16ರಂದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ: ಕ್ಷಣ ಗಣನೆ ಆರಂಭ

BIG UPDATE: ಅಪಘಾತದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ: ದಾವಣಗೆರೆ SS ಆಸ್ಪತ್ರೆಗೆ ದಾಖಲು

ಭಾರತದಲ್ಲಿ ಶೇ.57ರಷ್ಟು ಕಾರ್ಪೊರೇಟ್ ಪುರುಷರು ವಿಟಮಿನ್ ಬಿ12 ಕೊರತೆ ಎದುರಿಸುತ್ತಿದ್ದಾರೆ: ಸಮೀಕ್ಷೆ

Share. Facebook Twitter LinkedIn WhatsApp Email

Related Posts

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM2 Mins Read

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

27/02/2026 2:40 PM2 Mins Read

SHOCKING: ಬೇರೆ ಹುಡುಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕುವಿನಿಂದ ಇರಿದ ಪ್ರೇಯಸಿ

27/02/2026 2:35 PM1 Min Read
Recent News

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM

‘ಬ್ಯಾಂಕ್ ಖಾತೆ’ಯಲ್ಲಿ ಗರಿಷ್ಠ ಎಷ್ಟು ‘ಹಣ’ ಇಡ್ಬೋದು.? ನಿಯಮಗಳೇನು ಹೇಳೋದೇನು ಗೊತ್ತಾ?

27/02/2026 2:42 PM

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

27/02/2026 2:40 PM

SHOCKING: ಬೇರೆ ಹುಡುಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕುವಿನಿಂದ ಇರಿದ ಪ್ರೇಯಸಿ

27/02/2026 2:35 PM
State News
KARNATAKA

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

By kannadanewsnow0927/02/2026 2:48 PM KARNATAKA 2 Mins Read

ಬೆಂಗಳೂರು: ಬೆಂಗಳೂರು ಮೂಲದ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ ಸಂಸ್ಥೆಯಾಗಿದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಎಚ್ಚರಿಸಿದ್ದು, ವಿದ್ಯಾರ್ಥಿಗಳು…

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

27/02/2026 2:40 PM

SHOCKING: ಬೇರೆ ಹುಡುಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕುವಿನಿಂದ ಇರಿದ ಪ್ರೇಯಸಿ

27/02/2026 2:35 PM

BIG NEWS : ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿ | Bangalore Karaga

27/02/2026 2:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.