ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಗಾಯುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಿ ಡಿಸಿ ಆದೇಶಿಸಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ದಿನಾಂಕ 27-06-2025ರ ನಾಳೆ ರಜೆ ನೀಡಲಾಗಿದೆ ಎಂದಿದ್ದಾರೆ.
ನಾಳೆ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ನರಸಿಂಹರಾಜಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಇರಲಿದೆ. ಎಲ್ಲಾ ಶಾಲೆಗಳು ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿ ನಿರ್ವಹಿಸಲು ಸೂಚಿಸಿದ್ದಾರೆ.
ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!