ಹಾಸನ : ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಮುಂದುವರೆದಿದೆ. ವರುಣ ಅಬ್ಬರಕ್ಕೆ ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಸಿತಗೊಂಡಿದೆ.
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಸಮೀಪ ಘಟನೆ ನಡೆದಿದೆ. ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ಚತುಷ್ಪತ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಮೊದಲ ಮಳೆಗೆ ನೂರು ಮೀಟರ್ ವರೆಗೆ ರಸ್ತೆ ಕುಸಿದಿದೆ.
ಬಾಳ್ಳುಪೇಟೆ ಗ್ರಾಮದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ವೇಳೆ ಕುಸಿತಗೊಂಡಿದೆ. ಇದೀಗ ಸಂಪೂರ್ಣ ರಸ್ತೆಯೇ ಕೊಚ್ಚಿ ಹೋಗುವ ಆತಂಕ ಜನರಲ್ಲಿ ಶುರುವಾಗಿದೆ. ನಿತ್ಯ ಸಾವಿರಾರು ವಾಹನಗಳು ಓಡಾಡುವ ರಸ್ತೆಯಲ್ಲಿ ಹೀಗೆ ಆದ್ರೆ ಜನರು ಭಯಪಡುತ್ತಿದ್ದಾರೆ.
ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಳಪೆ ಕಾಮಗಾರಿಯಾಗಿದೆ ಎಂದು ಆರೋಪಿಸಿದ್ದಾರೆ. ಅವೈಜ್ಞಾನಿಕ ಕಾಮಗಾರಿಯಿಂದ ಮೊದಲ ಮಳೆಗೆ ರಸ್ತೆ ಕೊಚ್ಚಿ ಹೋಗಿರುವ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.