Bengaluru Rain: ಬೆಂಗಳೂರಿನಲ್ಲಿ ಧಾರಾಕಾರ ಮಳೆ: ರಸ್ತೆಗಳಲ್ಲಿ ಹರಿದ ನೀರು, ವಾಹನ ಸವಾರರು ಪರದಾಟ

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಮಳೆ ಆರ್ಭಟಿಸಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆಗೆ ನೀರು ನುಗ್ಗಿದ ಪರಿಣಾಮ, ವಾಹನ ಸವಾರರು ಪರದಾಡುವಂತಾಗಿದೆ. ಬೆಂಗಳೂರಿನ ವಿಧಾನಸೌಧ, ಮಲ್ಲೇಶ್ವರಂ, ಕೆ.ಆರ್ ಮಾರ್ಕೆಟ್, ಮೆಜೆಸ್ಟಿಕ್, ಮತ್ತಿಕೆರೆ, ಯಶವಂತಪುರ, ಗೋರಗುಂಟೆ ಪಾಳ್ಯ ಸೇರಿದಂತೆ ವಿವಿಧೆಡೆ ಮಳೆ ಆರ್ಭಟಿಸಿದೆ. ಮುಂಗಾರು ಪೂರ್ವ ಮಳೆಯ ಆರ್ಭಟದಿಂದಾಗಿ ಚರಂಡಿ ಬಿಟ್ಟು ರಸ್ತೆಗೆ ನೀರು ನುಗ್ಗಿದ ಪರಿಣಾಮ, ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಮಳೆಯ ನೀರು ರಸ್ತೆಗೆ ನುಗ್ಗಿದ ಪರಿಣಾಮ ವಾಹನ ಸವಾರರು ರಸ್ತೆ ಯಾವುದು, ಗುಂಡಿ ಯಾವುದು ಅಂತ ಕಾಣದೇ ಪರದಾಡುವಂತಾಗಿದೆ. … Continue reading Bengaluru Rain: ಬೆಂಗಳೂರಿನಲ್ಲಿ ಧಾರಾಕಾರ ಮಳೆ: ರಸ್ತೆಗಳಲ್ಲಿ ಹರಿದ ನೀರು, ವಾಹನ ಸವಾರರು ಪರದಾಟ