ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಕೊಡಗಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರೋ ( Heavy Rain ) ಕಾರಣ, ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಅಲ್ಲದೇ ಭಾಗಮಂಡಲ-ನಾಪೋಕ್ಲು ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿರುವ ಪರಿಣಾಮ, ರಸ್ತೆ ಸಂಚಾರ ಕಡಿತಗೊಂಡಿದೆ.
ಭಾರಿ ಮಳೆ ಹೀಗೆ ಮುಂದುವರೆದ್ರೇ, ಮಡಿಕೇರಿ ಜೊತೆಯೂ ಭಾಗಮಂಡಲದ ಸಂಪರ್ಕ ಕಡಿತವಾಗೋ ಸಾದ್ಯತೆ ಎದುರಾಗಿದೆ. ಭಾಗಮಂಡಲ ದ್ವೀಪವಾಗಿ ಪರಿವರ್ತನೆಗೊಳ್ಳೋ ಆತಂಕ ಕಾಡುತ್ತಿದೆ.
BIG NEWS: ಔಷಧ ಬೆಲೆ ಪ್ರಾಧಿಕಾರದಿಂದ ಪ್ರಮುಖ ಅಗತ್ಯ ಔಷಧಿಗಳ ಚಿಲ್ಲರೆ ಬೆಲೆ ನಿಗದಿ | Essential Medicines
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಅಮ್ಮತ್ತಿ, ಮಾದಾಪುರ, ಗರಗಂದೂರು, ಕೂಡಿಗೆ ಸೇರಿದಂತೆ ವಿವಿಧ ಕಡೆಗಳಲ್ಲಿ ವಿದ್ಯುತ್ ಮಾರ್ಗಗಳಿಗೆ ಹಾನಿಯುಂಟಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ಸೆಸ್ಕಾಂನಿಂದ ಸಿಬ್ಬಂದಿಗಳು ಮರಳಿ ವಿದ್ಯುತ್ ಸಂಪರ್ಕ ಕಲ್ಪಿಸೋದಕ್ಕೆ ಹರಸಾಹಸ ಪಡುವಂತೆ ಆಗಿದೆ.
ಇನ್ನೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಗಾಜನೂರು ಜಲಾಶಯದ ಆರು ಕ್ರಸ್ಟ್ ಗೇಟ್ ಗಳನ್ನು ತೆರೆದು 17,300 ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ.
Job Alert: ವಾಯುಪಡೆಯ ಆಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ
ಭಟ್ಕಳ ಸಮೀಪದ ಮಠದಕೇರಿಯಲ್ಲಿ ಮಳೆಯಿಂದಾಗಿ ಬೃಹತ್ ಗಾತ್ರದ ಬಂಡೆಯೊಂದು ರಸ್ತೆಗೆ ಜಾರಿಬಿದ್ದ ಪರಿಣಾಮ, ಜನರು ರಸ್ತೆ ಸಂಪರ್ಕವಿಲ್ಲದೇ ಓಡಾಡಲು ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಸತತ 5 ಗಂಟೆಯ ಕಾರ್ಯಾಚರಣೆ ಬಳಿಕ ರಸ್ತೆಯಿಂದ ಕಲ್ಲನ್ನು ತೆರವುಗೊಳಿಸಲಾಗಿದೆ.