ಹುಬ್ಬಳ್ಳಿ-ಬೆಳಗಾವಿಯಲ್ಲಿ ವರುಣಾರ್ಭಟ : ಭಾರಿ ಮಳೆಯಿಂದ ವಾಹನ ಸವಾರರ ಪರದಾಟ

ಬೆಳಗಾವಿ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ವರುಣ ತನ್ನ ಅಬ್ಬರವನ್ನು ಮುಂದುವರಿಸಿದ್ದಾನೆ. ಇದೀಗ ಹುಬ್ಬಳ್ಳಿ ಮಹಾನಗರ ಹಾಗೂ ಬೆಳಗಾವಿಯಲ್ಲೂ ಭಾರಿ ಮಳೆಯಾಗಿದ್ದು, ಮಳೆ ಬಂದಹಳ್ಳಿಯಲ್ಲಿ ನಿಂತ ನೀರಿನಲ್ಲಿ ವಾಹನ ಸವಾರರು ಪರದಾಟ ನಡೆಸಿದರು. ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದು, ಕೆಲವು ಪ್ರದೇಶಗಳಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಹೀಗಾಗಿ ಇದೀಗ ಮುಂಗಾರು ಹಂಗಾಮಿಗೆ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ. … Continue reading ಹುಬ್ಬಳ್ಳಿ-ಬೆಳಗಾವಿಯಲ್ಲಿ ವರುಣಾರ್ಭಟ : ಭಾರಿ ಮಳೆಯಿಂದ ವಾಹನ ಸವಾರರ ಪರದಾಟ