ಕುಣಿಗಲ್ ತಾಲೂಕಿನ ಎಲ್ಲಾ ಗ್ರಾಮಗಳಿಗೂ ‘ಹೇಮಾವತಿ’ ನೀರು : ಸಿಎಂ ಬೊಮ್ಮಾಯಿ ಘೋಷಣೆ

ತುಮಕೂರು : ಕುಣಿಗಲ್ ತಾಲೂಕಿನ ಎಲ್ಲಾ ಗ್ರಾಮಗಳಿಗೂ ಹೇಮಾವತಿ ನೀರು ಒದಗಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದರು. ತುಮಕೂರಿನ ಕುಣಿಗಲ್ ನಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಹೇಮಾವತಿ ಕಾಲುವೆ ಮೂಲಕ ನೀರು ಪೂರೈಸಲಾಗುತ್ತದೆ, ಮಾರ್ಕೋನಹಳ್ಳಿ ಜಲಾಶಯದಿಂದ ಮಂಗಳ ಜಲಾಶಯಕ್ಕೆ ನೀರು ಹರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಬೊಮ್ಮಾಯಿ ಹೇಳಿದರು. ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ.ಜನಸಂಕಲ್ಪ ಯಾತ್ರೆ … Continue reading ಕುಣಿಗಲ್ ತಾಲೂಕಿನ ಎಲ್ಲಾ ಗ್ರಾಮಗಳಿಗೂ ‘ಹೇಮಾವತಿ’ ನೀರು : ಸಿಎಂ ಬೊಮ್ಮಾಯಿ ಘೋಷಣೆ