Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಸ್ತಿತ್ವದಲ್ಲಿಲ್ಲದ ಬೆಂಗಳೂರು, ಪಾಟ್ನಾ ಬಂದರಿನ ನಾಶವನ್ನು ಸಂಭ್ರಮಿಸಿದ ಪಾಕಿಸ್ತಾನಿಗಳು !

11/05/2025 10:39 AM

NSA ದೋವಲ್ ಜೊತೆ ಮಾತನಾಡಿದ ಚೀನಾದ ವಿದೇಶಾಂಗ ಸಚಿವ ವಾಂಗ್, ಪಾಕಿಸ್ತಾನದೊಂದಿಗೆ ಕದನ ವಿರಾಮಕ್ಕೆ ಕರೆ

11/05/2025 10:27 AM

ಅಮೇರಿಕಾ ಮತ್ತು ಚೀನಾ ನಡುವೆ ಮೊದಲ ದಿನದ ಆರ್ಥಿಕ ಮಾತುಕತೆ ಅಂತ್ಯ | US -China

11/05/2025 10:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿವೆ ಇಂದಿನ ‘ಡಿಸಿಎಂ ಡಿಕೆಶಿ’ ಜರಗನಹಳ್ಳಿಯಲ್ಲಿ ನಡೆಸಿದ ‘ಜನಸ್ಪಂದನ ಕಾರ್ಯಕ್ರಮ’ದ ಹೈಲೈಟ್ಸ್
KARNATAKA

ಹೀಗಿವೆ ಇಂದಿನ ‘ಡಿಸಿಎಂ ಡಿಕೆಶಿ’ ಜರಗನಹಳ್ಳಿಯಲ್ಲಿ ನಡೆಸಿದ ‘ಜನಸ್ಪಂದನ ಕಾರ್ಯಕ್ರಮ’ದ ಹೈಲೈಟ್ಸ್

By kannadanewsnow0911/01/2024 6:14 PM

ಬೆಂಗಳೂರು : ವಿಧವಾ ವೇತನ ನೀಡಲು ವೃದ್ಧೆ ಬಳಿ 4 ಸಾವಿರ ಲಂಚ ಕೇಳಿದ ಅಧಿಕಾರಿ ವಿರುದ್ಧ ಕ್ರಮ, ಸರ್ಕಾರಿ ಪ್ರೌಢಶಾಲಾ ಶಾಲೆ ಕಟ್ಟಿಸಿಕೊಡಿ, ನಮ್ಮ ಏರಿಯಾ ಜನರಿಗೆ ಕುಡಿಯುವ ನೀರು, ಸ್ಮಶಾನಕ್ಕೆ ಜಾಗ ಬೇಕು, ಅಂಗನವಾಡಿ, ಸಂಚಾರ ದಟ್ಟಣೆ, ಪಾರ್ಕ್ ಸಮಸ್ಯೆ ಬಗೆಹರಿಸಿ ಎಂದು ಸಲ್ಲಿಸಿದ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಿ ಕಾನೂನಾತ್ಮಕ ಪರಿಹಾರದ ಭರವಸೆ ನೀಡಿದ ಡಿಸಿಎಂ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ, ಜರಗನಹಳ್ಳಿ ಸರ್ಕಾರಿ ಶಾಲಾ ಆಟದ ಮೈದಾನದಲ್ಲಿ ನಡೆದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.

ಒಂದಷ್ಟು ಹೊತ್ತು ವೇದಿಕೆಯ ಮೇಲೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಡಿಸಿಎಂ ಅವರು, ಅಪಾರ ಸಂಖ್ಯೆಯಲ್ಲಿ ಜನರು ಅಹವಾಲು ಸಲ್ಲಿಸಲು ಬಂದಿದ್ದನ್ನು ಕಂಡು ವೇದಿಕೆಯಿಂದ ಇಳಿದು ಜನರು ಇದ್ದಲಿಯೇ ತೆರಳಿ ಅವರ ಮನವಿಗಳನ್ನು ಆಲಿಸಿ ಪರಿಹಾರ ಸೂಚಿಸಿದರು. ಸುಮಾರು 5 ಗಂಟೆಯ ಹೊತ್ತಿಗೆ ಊಟಕ್ಕೆ ತೆರಳಿದ ಡಿಸಿಎಂ ಅವರು ಆನಂತರ ಮತ್ತೆ ಅಹವಾಲು ಸ್ವೀಕರಿಸಲು ಪ್ರಾರಂಭಿಸಿದರು.

ಬನಶಂಕರಿ ತಾಲ್ಲೂಕು ಕಚೇರಿಯಲ್ಲಿ ಪಿಂಚಣಿ ಪಡೆಯಲು ಗೊಟ್ಟಿಗೆರೆಯ ಮಣಿಯಮ್ಮ ಅವರು ಹೋದಾಗ ಅಧಿಕಾರಿಗಳೇ ಏಜೆಂಟರ ಬಳಿ ಕಳುಹಿಸುತ್ತಾರೆ. ಗೇಟ್ ಬಳಿ ರಮೇಶ್ ಎಂಬುವವರು ಹಾಗು ಕೊಠಡಿ ಸಂಖ್ಯೆ 24 ರಲ್ಲಿರುವ ಅಧಿಕಾರಿ ನಾಲ್ಕು ಸಾವಿರ ಲಂಚ ಕೇಳುತ್ತಾರೆ ಎಂದು ದೂರು ನೀಡಿದಾಗ, ಬನಶಂಕರಿ ಉಪ ತಹಶೀಲ್ದಾರರನ್ನು ಕರೆದ ಶಿವಕುಮಾರ್ ಅವರು ಕೂಡಲೇ ಆ ಮಹಿಳೆಯಿಂದ ಲಂಚ ಕೇಳಿದ ಅಧಿಕಾರಿ ಮಾಹಿತಿ ಪಡೆದು ಆತನನ್ನು ಅಮಾನತು ಮಾಡಿ ಎಂದು ಸೂಚಿಸಿದರು.

ಅಧಿಕಾರಿಗಳ ಕಾರ್ಯವೈಖರಿಯಲ್ಲಿ ಬದಲಾವಣೆಯಾಗಿದೆ

ಈ ಮೊದಲು ಯಾವ ಅಧಿಕಾರಿಗಳೂ ತಮ್ಮ ಹುದ್ದೆ ಮತ್ತು ಹೆಸರಿನ ಬೋರ್ಡನ್ನು ಹಾಕಿಕೊಳ್ಳುತ್ತಿರಲಿಲ್ಲ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದನಂತರ ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಜೆ.ಪಿ.ನಗರದ ಸುರೇಂದ್ರನಾಥ್ ಅವರು ಸರ್ಕಾರ ಮತ್ತು ಡಿಸಿಎಂ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಕೊರೋನಾ ಸಮಯದಲ್ಲಿ ಮುಚ್ಚಿರುವ ಉದ್ಯಾನಗಳನ್ನು ತೆರೆಯಿರಿ ಎಂದು ಸುರೇಂದ್ರನಾಥ ಅವರು ಮನವಿ ನೀಡಿದಾಗ. “ಉದ್ಯಾನಗಳನ್ನು ಸಾರ್ವಜನಿಕರ ಬಳಕೆಗೆ ತೆರೆಯಿರಿ” ಎಂದು ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದರು.

ಎಸ್‌ಡಿಎಂಸಿ, ಸಿಡಿಸಿ ಸಮಿತಿಗಳಲ್ಲಿ ಕಳೆದ 15 ವರ್ಷಗಳಿಂದ ಒಂದೇ ಪಕ್ಷದವರು ಆಡಳಿತ ಮಾಡುತ್ತಿದ್ದಾರೆ. ನಮಗೂ ಅವಕಾಶ ನೀಡಿ ಎಂಬ ಬೊಮ್ಮನಹಳ್ಳಿಯ ಅನಿಲ್ ಅವರ ಮನವಿಗೆ “ಸಮಿತಿಗಳಿಗಳಲ್ಲಿ ಎಲ್ಲಾ ಸಾರ್ವಜನಿಕರಿಗೂ ಅವಕಾಶ ಕಲ್ಪಿಸುವಂತೆ ನೋಡಿಕೊಳ್ಳಲಾಗುವುದು” ಎಂದರು ಡಿಸಿಎಂ.

‘ರೋಗ- ರುಜಿನಗಳು, ಅಂಗವಿಕಲವಾಗಿರುವ ಪ್ರಾಣಿಗಳನ್ನು ಸಾಕಲು ಒಂದು ಜಾಗ ನೀಡಿ’ ಎಂದು ವೀಣಾ ಕೇಶವಮೂರ್ತಿ ಎಂಬುವರು ಮನವಿ ಸಲ್ಲಿಸಿದಾಗ “ಜಾಗ ನೀಡುವ ಕುರಿತು ಪರಿಶೀಲನೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಜರಗನಹಳ್ಳಿಯಲ್ಲಿ ಸರ್ಕಾರಿ ಪ್ರೌಢಶಾಲೆ ನಿರ್ಮಾಣ ಮಾಡಬೇಕು ಎಂದು ಸತ್ಯನಾರಾಯಣ ಅವರು ಮನವಿ ನೀಡಿದಾಗ “ಜಾಗ ಇದೆಯೇ” ಎಂದು ಡಿಸಿಎಂ ಕೇಳಿದರು. “ಪ್ರಸ್ತುತ ಕಾರ್ಯಕ್ರಮ ನಡೆಯುತ್ತಿರುವ ಜಾಗದಲ್ಲೇ ನಿರ್ಮಾಣ ಮಾಡಬಹುದು” ಎಂದು ಮನವಿದಾರರು ತಿಳಿಸಿದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ಶೀಘ್ರದಲ್ಲಿಯೇ ಮಾಡೋಣ” ಎಂದರು.

ಭುವನೇಶ್ವರಿ ನಗರದ ಕೇಶವರೆಡ್ಡಿ ಮನೆ ಬೇಕು ಎಂದು ಮನವಿ ಸಲ್ಲಿಸಿದರೆ, ಪ್ರೇಮನಾಥ ಎಂಬುವರು ನಮ್ಮ ಮೊಮ್ಮಗನಿಗೆ ವಿದ್ಯಾರ್ಥಿ ವೇತನ ಬರುತ್ತಿಲ್ಲ, ಅಕ್ಕಿ ದುಡ್ಡು ಬರುತ್ತಿಲ್ಲ ಎಂದು ಲಕ್ಷಮ್ಮ, ಹಕ್ಕುಪತ್ರ ನೀಡುತ್ತಿಲ್ಲ ಎಂದು ಜಬೀವುಲ್ಲಾ ಅವರು ಮನವಿ ನೀಡಿದರು‌.

ಕಾರ್ಯಕ್ರಮದ ವೇಳೆ ಮಾಧ್ಯಮಗಳಿಗೆ ಡಿಸಿಎಂ ಪ್ರತಿಕ್ರಿಯೆ

ಈ ಭಾಗದಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ, ಖಾತೆ ಸಮಸ್ಯೆ, ತೆರಿಗೆ ಹೊರೆ ಹೆಚ್ಚಾಗಿದೆ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬಂದಿವೆ. ಜನರ ತೆರಿಗೆ ಹೊರೆ ಇಳಿಸುವ ವಿಚಾರದಲ್ಲಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಪರಿಶೀಲಿಸಿ ಕಾನೂನಿಗೆ ತಿದ್ದುಪಡಿ ತರಬೇಕಾಗಿದೆ. 2020ರಲ್ಲಿ ಜಾರಿಗೆ ತಂದಿರುವ ಕಾಯ್ದೆಯಲ್ಲಿ ದುಪ್ಪಟ್ಟು ದಂಡ ಕಟ್ಟುವಂತಾಗಿದೆ. ಇದನ್ನು ಕಡಿಮೆ ಮಾಡಲು ಚರ್ಚೆ ಮಾಡುತ್ತಿದ್ದೇವೆ. ಈ ವಿಚಾರವಾಗಿ ಜನರಿಗೆ ಕಾಲಾವಕಾಶ ನೀಡಿ, ಪರಿಹಾರವನ್ನು ನೀಡಬೇಕಿದೆ.

ವಸತಿ ಪಡೆಯಲು ಹಣ ಕಟ್ಟಿದ್ದರು ಹಲವರಿಗೆ ಮನೆ ಸಿಕ್ಕಿಲ್ಲ. ಮತ್ತೆ ಕೆಲವರು ವೈಯಕ್ತಿಕ ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಿದ್ದಾರೆ. ಇವರೆಲ್ಲರನ್ನು ಭೇಟಿ ಮಾಡಿ ಅವರ ಅಹವಾಲು ಸ್ವೀಕಾರ ಮಾಡುತ್ತೇನೆ.

110 ಹಳ್ಳಿಗಳ ಅಭಿವೃದ್ಧಿ ವಿಚಾರವಾಗಿ ಸ್ಥಳೀಯ ಶಾಸಕರು ಹಾಗೂ ಸಂಸದರು ಬೇಡಿಕೆ ಇಟ್ಟಿರುವ ಬಗ್ಗೆ ಕೇಳಿದಾಗ, “ಈ ಭಾಗದಲ್ಲಿ ಸಂಪರ್ಕ ಹಾಗೂ ಕುಡಿಯುವ ನೀರಿನ ಯೋಜನೆಗೆ ಆದ್ಯತೆ ನೀಡುತ್ತೇವೆ” ಎಂದು ತಿಳಿಸಿದರು.

ಧರ್ಮ ವಿಚಾರದಲ್ಲಿ ರಾಜಕೀಯ ಮಾಡಬಾರದು

ರಾಮ ಮಂದಿರ ವಿಚಾರದಲ್ಲಿ ರಾಜಕೀಯ ನಡೆಯುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, “ರಾಜಕೀಯದಲ್ಲಿ ಧರ್ಮ ಪಾಲನೆ ಮಾಡಬೇಕು, ಆದರೆ ಧರ್ಮದಲ್ಲಿ ರಾಜಕಾರಣ ಮಾಡಬಾರದು. ಈ ವಿಚಾರವನ್ನು ಹಿಂದೆಯೂ ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ” ಎಂದು ತಿಳಿಸಿದರು.

ಕರ್ನಾಟಕದ ‘ರಾಮನ ಭಕ್ತ’ರಿಗೆ ಶಾಕ್: ‘ಬೆಂಗಳೂರು-ಅಯೋಧ್ಯೆ’ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ

‘ಯುವನಿಧಿ ಯೋಜನೆ’ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ‘ಶಿವಮೊಗ್ಗ ಸಜ್ಜು’

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಬೀದಿನಾಯಿಗಳ ದಾಳಿಗೆ ಮತ್ತೊಂದು ಬಲಿ : ಗಂಜೇಂದ್ರಗಡದಲ್ಲಿ ಮಹಿಳೆ ಸಾವು.!

11/05/2025 10:06 AM1 Min Read

Rain Alert : ರಾಜ್ಯದಲ್ಲಿ ಇಂದು, ನಾಳೆ ಭಾರೀ `ಮಳೆ’ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ.!

11/05/2025 9:50 AM1 Min Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `HRMS’ ತಂತ್ರಾಂಶದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

11/05/2025 9:36 AM1 Min Read
Recent News

ಅಸ್ತಿತ್ವದಲ್ಲಿಲ್ಲದ ಬೆಂಗಳೂರು, ಪಾಟ್ನಾ ಬಂದರಿನ ನಾಶವನ್ನು ಸಂಭ್ರಮಿಸಿದ ಪಾಕಿಸ್ತಾನಿಗಳು !

11/05/2025 10:39 AM

NSA ದೋವಲ್ ಜೊತೆ ಮಾತನಾಡಿದ ಚೀನಾದ ವಿದೇಶಾಂಗ ಸಚಿವ ವಾಂಗ್, ಪಾಕಿಸ್ತಾನದೊಂದಿಗೆ ಕದನ ವಿರಾಮಕ್ಕೆ ಕರೆ

11/05/2025 10:27 AM

ಅಮೇರಿಕಾ ಮತ್ತು ಚೀನಾ ನಡುವೆ ಮೊದಲ ದಿನದ ಆರ್ಥಿಕ ಮಾತುಕತೆ ಅಂತ್ಯ | US -China

11/05/2025 10:24 AM

ಭಾರತ-ಪಾಕಿಸ್ತಾನ ಕದನ ವಿರಾಮ: ಕಾಶ್ಮೀರ ಪರಿಹಾರಕ್ಕೆ ಎರಡೂ ರಾಷ್ಟ್ರಗಳೊಂದಿಗೆ ಕೆಲಸ ಮಾಡುತ್ತೇವೆ: ಡೊನಾಲ್ಡ್ ಟ್ರಂಪ್

11/05/2025 10:20 AM
State News
KARNATAKA

BREAKING : ರಾಜ್ಯದಲ್ಲಿ ಬೀದಿನಾಯಿಗಳ ದಾಳಿಗೆ ಮತ್ತೊಂದು ಬಲಿ : ಗಂಜೇಂದ್ರಗಡದಲ್ಲಿ ಮಹಿಳೆ ಸಾವು.!

By kannadanewsnow5711/05/2025 10:06 AM KARNATAKA 1 Min Read

ಗದಗ : ಬೀದಿ ನಾಯಿಗಳ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಗಜೇಂದ್ರಗಡ ಪಟ್ಟಣದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.…

Rain Alert : ರಾಜ್ಯದಲ್ಲಿ ಇಂದು, ನಾಳೆ ಭಾರೀ `ಮಳೆ’ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ.!

11/05/2025 9:50 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `HRMS’ ತಂತ್ರಾಂಶದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

11/05/2025 9:36 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

11/05/2025 9:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.