Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : 30X40 ಒಳಗಿರುವ ಮನೆಗೆ `OC’ ವಿನಾಯಿತಿ

17/10/2025 5:46 AM

BIG NEWS : ಸಾರ್ವಜನಿಕ ಸ್ಥಳಗಳಲ್ಲಿ `RSS’ ರೀತಿಯ ಚಟುವಟಿಕೆಗಳಿಗೆ ನಿರ್ಬಂಧ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

17/10/2025 5:36 AM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ‘ದೀಪಾವಳಿ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

17/10/2025 5:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಅಂಕುಶ: ಹೀಗಿದೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಹೈಲೈಟ್ಸ್
KARNATAKA

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಅಂಕುಶ: ಹೀಗಿದೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಹೈಲೈಟ್ಸ್

By kannadanewsnow0913/02/2025 4:36 PM

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅಂಕುಶ ಬಿದ್ದಿದೆ. ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ಬ್ರೇಕ್ ಹಾಕಿದೆ. ಇದೀಗ ಜಾರಿಗೊಳಿಸಿರುವಂತ ಸುಗ್ರೀವಾಜ್ಞೆಯ ಪ್ರಮುಖ ಹೈಲೈಟ್ಸ್ ಮುಂದೆ ಓದಿ.

ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:-

1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ.
2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.
3. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.
4. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.
5. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.
6. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಆಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.
7. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.
8. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾ ವಾಸದೊಂದಿಗೆ ಅಥವಾ ರೂ.10,000/- ಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.
9. ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.
10. ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.
11. ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. 5 ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.
12. ಪೋಲೀಸ್‌ ಉಪ ಅಧೀಕ್ಷಕರ (Dy SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suo moto) ಪ್ರಕರಣವನ್ನು ದಾಖಲಿಸಬಹುದು.
13. ಸರ್ಕಾರವು ಕಾಲಕಾಲಕ್ಕೆ ಈ ಆಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.
14. ಈ ಆಧ್ಯಾದೇಶದಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.

ಸಾಲ ವಸೂಲಾತಿ ವೇಳೆ ಮೈಕ್ರೋ ಫೈನಾನ್ಸ್‌ ಕಂಪನಿಗಳು ನಡೆಸುತ್ತಿದ್ದ ದೌರ್ಜನ್ಯಗಳನ್ನು ತಡೆಯಲು ರಾಜ್ಯ ಸರ್ಕಾರ ಜಾರಿಗೆ ತಂದ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶದ ಮುಖ್ಯಾಂಶಗಳು;#Microfinance pic.twitter.com/vdStiQDYXl

— DIPR Karnataka (@KarnatakaVarthe) February 13, 2025

ಜರ್ಮನಿಯಲ್ಲಿ ಜನರ ಗುಂಪಿನ ಮೇಲೆ ನುಗ್ಗಿದ ಕಾರು: 15 ಮಂದಿಗೆ ಗಾಯ

BREAKING: ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡನೆ | New Income Tax Bill

Share. Facebook Twitter LinkedIn WhatsApp Email

Related Posts

vidhana soudha

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : 30X40 ಒಳಗಿರುವ ಮನೆಗೆ `OC’ ವಿನಾಯಿತಿ

17/10/2025 5:46 AM1 Min Read

BIG NEWS : ಸಾರ್ವಜನಿಕ ಸ್ಥಳಗಳಲ್ಲಿ `RSS’ ರೀತಿಯ ಚಟುವಟಿಕೆಗಳಿಗೆ ನಿರ್ಬಂಧ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

17/10/2025 5:36 AM1 Min Read

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ‘ದೀಪಾವಳಿ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

17/10/2025 5:29 AM1 Min Read
Recent News
vidhana soudha

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : 30X40 ಒಳಗಿರುವ ಮನೆಗೆ `OC’ ವಿನಾಯಿತಿ

17/10/2025 5:46 AM

BIG NEWS : ಸಾರ್ವಜನಿಕ ಸ್ಥಳಗಳಲ್ಲಿ `RSS’ ರೀತಿಯ ಚಟುವಟಿಕೆಗಳಿಗೆ ನಿರ್ಬಂಧ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

17/10/2025 5:36 AM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ‘ದೀಪಾವಳಿ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

17/10/2025 5:29 AM

ತಲಕಾವೇರಿಯಲ್ಲಿ ಇಂದು ‘ಪವಿತ್ರ ತೀರ್ಥೋದ್ಭವ’: ತೀರ್ಥರೂಪಿಣಿಯಾಗಿ ‘ಕಾವೇರಿ ಮಾತೆ’ ದರ್ಶನ | Talakaveri Theerthodbhava

17/10/2025 5:24 AM
State News
vidhana soudha KARNATAKA

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : 30X40 ಒಳಗಿರುವ ಮನೆಗೆ `OC’ ವಿನಾಯಿತಿ

By kannadanewsnow5717/10/2025 5:46 AM KARNATAKA 1 Min Read

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ…

BIG NEWS : ಸಾರ್ವಜನಿಕ ಸ್ಥಳಗಳಲ್ಲಿ `RSS’ ರೀತಿಯ ಚಟುವಟಿಕೆಗಳಿಗೆ ನಿರ್ಬಂಧ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

17/10/2025 5:36 AM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ‘ದೀಪಾವಳಿ’ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

17/10/2025 5:29 AM

ತಲಕಾವೇರಿಯಲ್ಲಿ ಇಂದು ‘ಪವಿತ್ರ ತೀರ್ಥೋದ್ಭವ’: ತೀರ್ಥರೂಪಿಣಿಯಾಗಿ ‘ಕಾವೇರಿ ಮಾತೆ’ ದರ್ಶನ | Talakaveri Theerthodbhava

17/10/2025 5:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.