Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಯಾಣಿಕರಿಗೆ ಗುಡ್ ನ್ಯೂಸ್ ; ಈಗ ವಂದೇ ಭಾರತ್ ರೈಲುಗಳು 20 ಬೋಗಿಗಳನ್ನ ಹೊಂದಿರುತ್ವೆ ; ರೈಲ್ವೆ ಘೋಷಣೆ

28/08/2025 9:25 PM

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

28/08/2025 9:20 PM

ಇನ್ಮುಂದೆ ಯಾವುದೇ ಹೋರಾಟದಲ್ಲಿ RSS ಭಾಗವಹಿಸುವುದಿಲ್ಲ: ಮುಖ್ಯಸ್ಥ ಮೋಹನ್ ಭಾಗವತ್ ಘೋಷಣೆ

28/08/2025 9:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್
KARNATAKA

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

By kannadanewsnow0928/08/2025 9:20 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ.

• ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

• ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.

• ರಾಜ್ಯದಲ್ಲಿ 28516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.

• ಕನ್ನಡ ಸಾಹಿತ್ಯ ಪರಿಷತ್ನ ಅವ್ಯವಹಾರಗಳ ಕುರಿತು ಡಿಆರ್ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

• ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ.

• ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

• ರಾಜ್ಯದಲ್ಲಿ 7074ಗಿರವಿದಾರ ಸಂಸ್ಥೆಗಳು ಹಾಗೂ 1468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.

• ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇನ್ಮುಂದೆ ಯಾವುದೇ ಹೋರಾಟದಲ್ಲಿ RSS ಭಾಗವಹಿಸುವುದಿಲ್ಲ: ಮುಖ್ಯಸ್ಥ ಮೋಹನ್ ಭಾಗವತ್ ಘೋಷಣೆ

BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ಯ ಈ ಅಧಿಕಾರಿಗಳ ‘ನಿಯೋಜನೆ ರದ್ದು’: ರಾಜ್ಯ ಸರ್ಕಾರ ಮಹತ್ವದ ಆದೇಶ

Share. Facebook Twitter LinkedIn WhatsApp Email

Related Posts

high court

ಕುಡಿಯದಿದ್ದರೂ 10,000 ದಂಡ: ಹೈಕೋರ್ಟ್ ಮೆಟ್ಟಿಲೇರಿದ ಕಾರು ಮಾಲೀಕ, ರಾಜ್ಯ ಸರ್ಕಾರಕ್ಕೆ ನೋಟಿಸ್

28/08/2025 8:04 PM1 Min Read

BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ಯ ಈ ಅಧಿಕಾರಿಗಳ ‘ನಿಯೋಜನೆ ರದ್ದು’: ರಾಜ್ಯ ಸರ್ಕಾರ ಮಹತ್ವದ ಆದೇಶ

28/08/2025 7:49 PM2 Mins Read

‘ಶ್ರೀರಂಗಪಟ್ಟಣ ದಸರಾ’ಗೆ ಮುಹೂರ್ತ ಫಿಕ್ಸ್: ಸೆ.25ರಿಂದ ನಾಲ್ಕು ದಿನ ಆಚರಣೆ

28/08/2025 7:12 PM1 Min Read
Recent News

BREAKING : ಪ್ರಯಾಣಿಕರಿಗೆ ಗುಡ್ ನ್ಯೂಸ್ ; ಈಗ ವಂದೇ ಭಾರತ್ ರೈಲುಗಳು 20 ಬೋಗಿಗಳನ್ನ ಹೊಂದಿರುತ್ವೆ ; ರೈಲ್ವೆ ಘೋಷಣೆ

28/08/2025 9:25 PM

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

28/08/2025 9:20 PM

ಇನ್ಮುಂದೆ ಯಾವುದೇ ಹೋರಾಟದಲ್ಲಿ RSS ಭಾಗವಹಿಸುವುದಿಲ್ಲ: ಮುಖ್ಯಸ್ಥ ಮೋಹನ್ ಭಾಗವತ್ ಘೋಷಣೆ

28/08/2025 9:11 PM

75 ವರ್ಷಕ್ಕೆ ವಯಸ್ಸಿಗೆ ನಿವೃತ್ತಿಯಾಗ್ಬೇಕು ಎಂದು ನಾನು ಎಂದಿಗೂ ಹೇಳಿಲ್ಲ ; ಮೋಹನ್ ಭಾಗವತ್

28/08/2025 8:55 PM
State News
KARNATAKA

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

By kannadanewsnow0928/08/2025 9:20 PM KARNATAKA 2 Mins Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳನ್ನು ಮುಂದೆ…

high court

ಕುಡಿಯದಿದ್ದರೂ 10,000 ದಂಡ: ಹೈಕೋರ್ಟ್ ಮೆಟ್ಟಿಲೇರಿದ ಕಾರು ಮಾಲೀಕ, ರಾಜ್ಯ ಸರ್ಕಾರಕ್ಕೆ ನೋಟಿಸ್

28/08/2025 8:04 PM

BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ಯ ಈ ಅಧಿಕಾರಿಗಳ ‘ನಿಯೋಜನೆ ರದ್ದು’: ರಾಜ್ಯ ಸರ್ಕಾರ ಮಹತ್ವದ ಆದೇಶ

28/08/2025 7:49 PM

‘ಶ್ರೀರಂಗಪಟ್ಟಣ ದಸರಾ’ಗೆ ಮುಹೂರ್ತ ಫಿಕ್ಸ್: ಸೆ.25ರಿಂದ ನಾಲ್ಕು ದಿನ ಆಚರಣೆ

28/08/2025 7:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.