Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 3,000 ಕ್ಕೆ ಏರಿಕೆ | Covid in India

01/06/2025 7:08 AM

BIG NEWS : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

01/06/2025 7:06 AM

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

01/06/2025 7:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting
KARNATAKA

ಹೀಗಿದೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

By kannadanewsnow0924/04/2025 3:41 PM

ಚಾಮರಾಜನಗರ: ಇಂದು ಜಿಲ್ಲೆಯ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಯಾವೆಲ್ಲ ಮಹತ್ವದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಿದೆ ಎನ್ನುವ ಬಗ್ಗೆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು

  • ನಮ್ಮ ಸರ್ಕಾರ ರಾಜ್ಯವನ್ನು ಸಮಗ್ರ ಅಭಿವೃದ್ಧಿ ಮಾಡಬೇಕೆಂಬ ದೃಷ್ಟಿಯಿಂದ ಬೆಂಗಳೂರು ಕೇಂದ್ರಿತ ಆಡಳಿತ ಮಾದರಿಗೆ ಬದಲಾಗಿ ಕರ್ನಾಟಕದ ವಿಕೇಂದ್ರೀಕೃತ ಆಡಳಿತ ಮಾದರಿಯನ್ನು ಅಳವಡಿಸಿಕೊಳ್ಳಲು ಉದ್ದೇಶಿಸಿದೆ.
  • ಆದ್ದರಿಂದಲೇ ಕಲ್ಯಾಣ ಕರ್ನಾಟಕ ವಿಮೋಚನಾ ದಿವಸದಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಿ ಆ ಭಾಗದ ಅಭಿವೃದ್ಧಿಗೆ ತೀರ್ಮಾನಿಸಿದ್ದೆವು.
  • ಮೈಸೂರು ಕಂದಾಯ ವಿಭಾಗದ ಅಭಿವೃದ್ಧಿಗಾಗಿ ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಿ 82ಕ್ಕೂ ಹೆಚ್ಚ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಜೊತೆಗೆ ಸುಮಾರು 3647 ಕೋಟಿ ರೂ.ಗಳನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿನಿಯೋಗಿಸಲು ತೀರ್ಮಾನಿಸಲಾಯಿತು.
  • ಜಮ್ಮು ಕಾಶ್ಮೀರದ ಪಹಲ್ಗಾಮದಲ್ಲಿ ಉಗ್ರರ ದಾಳಿಗೆ ಬಲಿಯಾದವರ ಗೌರವಾರ್ಥ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
  • ಸಣ್ಣ ನೀರಾವರಿ ಮತ್ತು ಜಲ ಸಂಪನ್ಮೂಲ ಇಲಾಖೆಗಳ ವತಿಯಿಂದ 29 ಕಾಮಗಾರಿಗಳನ್ನು 1787.87 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಯಿತು.
  • ಇದರಿಂದ ಮೈಸೂರು ಕಂದಾಯ ವಿಭಾಗದ ಜಿಲ್ಲೆಗಳ ಜಲಾಶಯ, ಕೆರೆಗಳು, ಕಾಲುವೆಗಳ ಅಭಿವೃದ್ಧಿ ಮಾಡುವುದರಿಂದ ಈ ಭಾಗದ ನೀರಾವರಿ ಚಟುವಟಿಕೆಗಳನ್ನು ಸಮಗ್ರವಾಗಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತದೆ.
  • ಪರಿಶಿಷ್ಟ ಪಂಗಡದ ಜನರು ವಾಸಿಸುವ ಪ್ರದೇಶಗಳ ಅಭಿವೃದ್ಧಿಗಾಗಿ ಪ್ರಮುಖವಾಗಿ ನಾಲ್ಕು ವಿಷಯಗಳಿಗೆ 203.2 ಕೋಟಿ ರೂ.ಗಳನ್ನು ವಿನಿಯೋಗಿಸಿ ಈ ವರ್ಗಗಳ ಜನರ ಬದುಕಿನ ಸುಧಾರಣೆಗೆ ಮತ್ತು ಏಳಿಗೆಗಾಗಿ ತೀರ್ಮಾನಿಸಲಾಗಿದೆ.
  • ಪರೋಕ್ಷವಾಗಿ ಮಾನವ-ಆನೆ ಸಂಘರ್ಷ ತಡೆಗಟ್ಟಲು 210.2 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
  • ಈ ಭಾಗದ ನಗರಗಳ ಜನರ ಕುಡಿಯುವ ನೀರಿನ ಯೋಜನೆಗಳಿಗಾಗಿ ನಗರಾಭಿವೃದ್ಧಿ ಇಲಾಖೆ ವತಿಯಿಂದ 315 ಕೋಟಿ ರೂ.ಗಳನ್ನು ಒದಗಿಸಿ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲು ತೀರ್ಮಾನಿಸಲಾಯಿತು.
  • ಈ ಜಿಲ್ಲೆಗಳ ಜನರ ಆರೋಗ್ಯ ಸುಧಾರಣೆಗೆ 228.14 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನಿಸಲಾಯಿತು.
  • ಪ್ರವಾಸೋದ್ಯಮ ಇಲಾಖೆ ವತಿಯಿಂದ ಈ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಸುಮಾರು 300 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನಿಸಲಾಯಿತು.
  • ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕ ಕಲ್ಲೂರಿನಲ್ಲಿ ಶ್ರೀ ಮಂಟೇಸ್ವಾಮಿ, ಶ್ರೀ ರಾಚಪ್ಪಾಜಿ ಹಾಗೂ ಶ್ರೀ ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸಂಪುಟ ಸಭೆ ತೀರ್ಮಾನಿಸಿದೆ.
  • ಮೈಸೂರಿನ ಇಲವಾಲದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಿದೆ.
  • ಭಾರತ್‌ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್‌ ಗಾಂಧಿಯವರು ನಂಜನಗೂಡು ತಾಲೂಕಿನ ಬದನವಾಳು ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಗ್ರಾಮಕ್ಕೆ ಮಹಾತ್ಮ ಗಾಂಧಿಯವರೂ ಭೇಟಿ ಕೊಟ್ಟಿದ್ದರು. ಅದರ ನೆನಪಿಗಾಗಿ ಶತಮಾನೋತ್ಸವ ಭವನ ಮತ್ತು ಗ್ರಾಮೀಣ ಅಭಿವೃದ್ಧಿ ಕೇಂದ್ರವನ್ನು ನಿರ್ಮಿಸಲು ತೀರ್ಮಾನಿಸಿದೆ.
  • ರನ್‌ ವೇ ವಿಸ್ತರಣೆ ಸೇರಿದಂತೆ ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
  • ಬುಡಕಟ್ಟು ಸಮುದಾಯದ ಜನರು ವಾಸಿಸುವ ಪ್ರದೇಶದಲ್ಲಿ ರಸ್ತೆ, ಚರಂಡಿ, ವಿದ್ಯುತ್‌ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
  • ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕೆರೆಗಳನ್ನು ತುಂಬಿಸುವ, ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯವನ್ನು ವಿಸ್ತರಿಸುವ, ವಿವಿಧ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸುವ ತೀರ್ಮಾನವನ್ನೂ ಇಂದು ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ.
  • ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಸಂಪುಟ ಸಭೆಯಲ್ಲಿ ಇಂದು ಕೈಗೊಂಡ ನಿರ್ಣಯಗಳನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರಲಾಗುವುದು.

ಜಮ್ಮು ಕಾಶ್ಮೀರದ ಪಹಲ್ಗಾವ್‌ ನಲ್ಲಿ ನಡೆದ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ನೋವಿನ ಸಂತಾಪಗಳನ್ನು ಸಲ್ಲಿಸಲು ತೀರ್ಮಾನಿಸಿದೆ.

ಉಗ್ರರ ದಾಳಿಗಳು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು.

ಆದರೆ, ಪುಲ್ವಾಮದಿಂದ ಹಿಡಿದು ಪಹಲ್ಗಾವ್‌ ವರೆಗೆ ನಡೆದಿರುವ ಈ ಭೀಕರ ದಾಳಿಗಳಿಗೆ ಕೇಂದ್ರ ಗೃಹ ಇಲಾಖೆಯ ವೈಫಲ್ಯವೇ ಕಾರಣ. ಗುಪ್ತಚರ ಇಲಾಖೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ದೌರ್ಬ;ಲ್ಯ ಮತ್ತು ವೈಫಲ್ಯಗಳಿಗಾಗಿ ತಲೆ ತಗ್ಗಿಸುವಂತೆ ಆಗಿದೆ. ಜೊತೆಗೆ ನೂರಾರು ಕುಟುಂಬಗಳು ಅನಾಥವಾಗಿವೆ. ಗೃಹ ಇಲಾಖೆಯ ಈ ವೈಫಲ್ಯವನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ.

ಅಮಾಯಕರ ಮೇಲೆ ನಡೆಯುತ್ತಿರುವ ಉಗ್ರರ ದಾಳಿಗಳನ್ನು ಕೋಮು ಧ್ರುವೀಕರಣದ ದುಷ್ಟ ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿರುವುದು ಕೂಡ ಅಮಾನವೀಯ. ಉರಿಯುವ ಮನೆಯಲ್ಲಿ ಗಳ ಇರಿಯುವ ಹಾಗೂ ಬೆಂಕಿ ಕಾಯಿಸಿಕೊಳ್ಳುವ ಕೃತ್ಯ ಎಂದು ನಾವು ಭಾವಿಸಿದ್ದೇವೆ.

ಹಾಗೆಯೇ ಈ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತದೆ.

ಬೆಂಗಳೂರಲ್ಲಿ ಅನಧಿಕೃತ ಜಾಹೀರಾತುಗಳಿಗೆ ಬ್ರೇಕ್: ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ : ಪಹಲ್ಗಾಮ್ ನಲ್ಲಿ ಮೃತಟ್ಟವರಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಕೆ.!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

01/06/2025 7:06 AM2 Mins Read

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

01/06/2025 7:02 AM1 Min Read
Nandini

ಇಂದು `ವಿಶ್ವ ಹಾಲು ದಿನಾಚರಣೆ’ : ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್ ಗಳು ಮಾರುಕಟ್ಟೆಗೆ ಬಿಡುಗಡೆ.!

01/06/2025 6:44 AM2 Mins Read
Recent News

BREAKING: ಭಾರತದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 3,000 ಕ್ಕೆ ಏರಿಕೆ | Covid in India

01/06/2025 7:08 AM

BIG NEWS : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

01/06/2025 7:06 AM

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

01/06/2025 7:02 AM

ರಷ್ಯಾದಲ್ಲಿ ಸೇತುವೆ ಕುಸಿದು ಹಳಿ ತಪ್ಪಿದ ರೈಲು: 7 ಮಂದಿ ಸಾವು, 30 ಮಂದಿ ಆಸ್ಪತ್ರೆಗೆ ದಾಖಲು | Bridge collapse

01/06/2025 6:52 AM
State News
KARNATAKA

BIG NEWS : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

By kannadanewsnow5701/06/2025 7:06 AM KARNATAKA 2 Mins Read

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರವು ಹೊರಡಿಸಿದೆ. ಸರ್ಕಾರದ…

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

01/06/2025 7:02 AM
Nandini

ಇಂದು `ವಿಶ್ವ ಹಾಲು ದಿನಾಚರಣೆ’ : ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್ ಗಳು ಮಾರುಕಟ್ಟೆಗೆ ಬಿಡುಗಡೆ.!

01/06/2025 6:44 AM

BIG NEWS : ನಿಮ್ಮ ಬಳಿ ಈ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

01/06/2025 6:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.