Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದೊಂದಿಗೆ ಗಡಿ ವಿವಾದ: ಮಧ್ಯಸ್ಥಿಕೆಗಾಗಿ ಚೀನಾ ಮತ್ತು ಯುಕೆ ಮೊರೆ ಹೋದ ನೇಪಾಳ ಪ್ರಧಾನಿ!

ಕೇವಲ 15 ವರ್ಷಕ್ಕೆ 5 ಪ್ರಶಸ್ತಿ : ಕಾರು ಜೊತೆಗೆ ವೈಭವ್ ಸೂರ್ಯವಂಶಿ ಪಡೆದ ನಗದು ಬಹುಮಾನ ಎಷ್ಟು ಗೊತ್ತಾ?

ಸೊಳ್ಳೆಗಳ ವಿರುದ್ಧವೇ ಸೊಳ್ಳೆಗಳ ಯುದ್ಧ: ಗೂಗಲ್‌ನ ‘ಮಸ್ಕಿಟೋ ಆರ್ಮಿ’ ಯೋಜನೆಯಲ್ಲಿ 3.2 ಕೋಟಿ ಸೊಳ್ಳೆಗಳ ಬಳಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Highlights
KARNATAKA

ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Highlights

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ವಿವಿ ಚಾನ್ಸಲರ್ ಆಗಿ ರಾಜ್ಯಪಾಲರಿಗೆ ಇದ್ದಂತ ಅಧಿಕಾರವನ್ನು ಮೊಟಕಗೊಳಿಸಿ, ಮುಖ್ಯಮಂತ್ರಿಗೆ ನೀಡುವುದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ರಾಜ್ಯಪಾಲರಿಗೆ ಮರು ಪ್ರಾಸಿಕ್ಯೂಷನ್ ಗೆ ಅರ್ಜಿ ಸಲ್ಲಿಸುವುದು ಸೇರಿದಂತೆ ವಿವಿಧ ನಿರ್ಧಾರವನ್ನು ಕೈಗೊಳ್ಳಲಾಯಿತು. ಇದಷ್ಟೇ ಅಲ್ಲದೇ ಇನ್ನೂ ಏನೇನು ನಿರ್ಧಾರ ಕೈಗೊಳ್ಳಲಾಯಿತು ಎನ್ನುವ ಪ್ರಮುಖ ಹೈಲೈಟ್ಸ್ ಮುಂದೆ ಓದಿ.

ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್ ಕೆ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಇಂದಿ ಒಂಭತ್ತು ಬಿಲ್ ಗಳನ್ನ ಸಂಪುಟ ಅಂಗೀಕರಿಸಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ, 20:40: 20 ಇದ್ದ ಕಲ್ಯಾಣ ನಿಧಿ ರೂಪ 50:100: 50,ವಿಧಾನಕ್ಕೆ ಬದಲಾಗಲಿದೆ. ಕಂಪನಿ ಕಡೆ ವ್ಯಾಲ್ಯೂ ಹೆಚ್ಚು ಸಿಗಲಿದೆ ಎಂದರು.

ಕರ್ನಾಟಕ ಅಂತರ್ಜಲ ನಿಯಮಾವಳಿ ಅಭಿವೃದ್ಧಿ ಹಾಗೂ ನಿಯಮಾವಳಿ ತಿದ್ದುಪಡಿ ವಿಧೇಯಕಕ್ಕೆ ತಿದ್ದುಪಡಿ ತರಲಾಗುತ್ತಿದೆ. ಕೊಳವೆ ಬಾವಿ ಕೊರೆದು ನೀರು ಸಿಗದ ಸನ್ನಿವೇಶದಲ್ಲಿ ಅಂತಹ ಬೋರ್ ಗಳನ್ನ ಮುಚ್ಚೋದನ್ನ ಕಡ್ಡಾಯಗೊಳಿಸುವ ನಿಯಮ ಜಾರಿಗೊಳಿಸಲಾಗುತ್ತದೆ ಎಂದರು.

ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ 2024ಕ್ಕೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಖಾಸಗಿ ಯೂನಿವರ್ಸಿಟಿಗೆ ಸರ್ಕಾರಿ ಅಧಿಕಾರಿ ನಿಯೋಜನೆಗೆ ಅವಕಾಶ ಮಾಡಿಕೊಡಲಿದೆ. ಉಳಿದ ವಿವಿಗಳಲ್ಲಿ ಈ ನಿಯಮ ಪಾಲನೆಯಲ್ಲಿತ್ತು. ಆದರೆ ಚಾಣಕ್ಯ ದಲ್ಲಿ ಈ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಈ ತಿದ್ದುಪಡಿ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯಪಾಲರ ಬದಲು ಸಿಎಂ ಅವರನ್ನ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿವಿ ಗೆ ಚಾನ್ಸಲರ್ ಆಗಿ ನಿಯೋಜಿಸುವ ವಿಧೇಯಕಕ್ಕೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಯುನಿವರ್ಸಿಟಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ರಾಜ್ಯಪಾಲರು ಇಷ್ಟು ದಿನ ಚಾನ್ಸೆಲರ್ ಆಗಿದ್ದರು. ಸಿಎಂ ಇನ್ನು ಮುಂದೆ ಚಾನ್ಸಲರ್ ಆಗಲಿದ್ದಾರೆ. ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಮುಖ್ಯಮಂತ್ರಿಗಳಿಗೆ ನೀಡುವುದಕ್ಕೆ ಕ್ಯಾಬಿನೆಟ್ ಅನುಮೋದಿಸಿದೆ ಎಂದರು.

ಕರ್ನಾಟಕ ಪ್ರವಾಸೋಧ್ಯಮ ರೋಪ್ ವೇ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿದೆ. ರೋಪ್ ವೇ ಕಾರ್ಯ ಯೋಜನೆ ಹಾಗೂ ಸುರಕ್ಷತಾ ಜವಾಬ್ದಾರಿ ಹೊಣೆಗಾರಿಕೆಯನ್ನ ಒಳಗೊಂಡ ವಿಧೇಯಕವಾಗಿದೆ. ರಾಜ್ಯದ 12 ಕಡೆ ರೋಪ್ ವೇ ನಿರ್ಮಾಣದ ತಯಾರಿ ನಡೆದಿದೆ ಎಂದರು.

ಲಲಿತ್ ಮಹಲ್ ಹೋಟೆಲ್ ನಿರ್ವಹಣೆಗೆ ಟೆಂಡರ್ ಕರೆಯಲು ಸಂಪುಟ ಒಪ್ಪಿಗೆ ನೀಡಲಾಗಿದೆ. ಸರ್ಕಾರದ ಬದಲು ಮುಂದೆ ಖಾಸಗಿಯವರಿಂದ ಹೊಟೇಲ್ ನಿರ್ವಹಣೆಗೆ ಅವಕಾಶ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಈಗ ಕೆಎಸ್ ಟಿಡಿಸಿ ಹಾಗೂ ಅರಣ್ಯ ಇಲಾಖೆ ಇದರ ನಿರ್ವಹಣೆ ಮಾಡಲಾಗ್ತಿದೆ ಎಂದು ತಿಳಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರನ್ನ ಕೋರಲು ನಿರ್ಧರಿಸಲಾಗಿದೆ. ಬಿಎಸ್ ವೈ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಲಾಗಿದ್ದ ದೂರು. 2020ರ ನವೆಂಬರ್ ನಲ್ಲಿ ಟಿ ಜೆ ಅಬ್ರಹಾಂ ಎಸಿಬಿಗೆ ದೂರು ನೀಡಿದ್ರು. ಕ್ರಮಕ್ಕೆ ರಾಜ್ಯಪಾಲರನ್ನ ಕೋರಿದ್ರು. ಅದರೆ ಗವರ್ನರ್ ಅದಕ್ಕೆ ಅನುಮತಿ ಕೊಟ್ಟಿರಲಿಲ್ಲ. ಈಗ ಸರ್ಕಾರ ಇದರ ತನಿಖೆಗೆ ಒಪ್ಪಿಗೆ ನೀಡುವಂತೆ ಗವರ್ನರ್ ಗೆ ಮರು ಮನವಿ ಮಾಡಲು ನಿರ್ಧಾರಿಸಲಾಗಿದೆ ಎಂದರು.

ವರದಿ: ವಸಂತ ಬಿ ಈಶ್ವರಗೆರೆ

ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ‘ಕೌಶಲ್ಯಾಭಿವೃದ್ಧಿ ತರಬೇತಿ’ಗೆ ಅರ್ಜಿ ಆಹ್ವಾನ – Kannada News | India News | Breaking news | Live news | Kannada | Kannada News | Karnataka News | Karnataka News

Good News: ದಕ್ಷಿಣ ಮಧ್ಯ ರೈಲ್ವೆ 10 ಪ್ಯಾಸೆಂಜರ್ ವಿಶೇಷ ರೈಲುಗಳನ್ನು ಸಾಮಾನ್ಯ ರೈಲಾಗಿ ಮರು ಸಂಖ್ಯೆ ನೀಡಲು ಅಧಿಸೂಚನೆ – Kannada News | India News | Breaking news | Live news | Kannada | Kannada News | Karnataka News | Karnataka News

‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಡ್ರೋನ್ ತರಬೇತಿ’ ಪಡೆಯಲು ಅರ್ಜಿ ಆಹ್ವಾನ – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

ಗುರು ರಾಶ್ಯಾಂತರ ಫಲ – ಗುರು ಅತಿಚಾರ ಯೋಗ

2 Mins Read

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷದ ಸಾಮಾನ್ಯ ಕಾರ್ಯಕರ್ತರೇ ಸಿಎಂ ಆಗುತ್ತಿದ್ದಾರೆ: ಡಿಕೆ ಶಿವಕುಮಾರ್

2 Mins Read

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

2 Mins Read
Recent News

ಭಾರತದೊಂದಿಗೆ ಗಡಿ ವಿವಾದ: ಮಧ್ಯಸ್ಥಿಕೆಗಾಗಿ ಚೀನಾ ಮತ್ತು ಯುಕೆ ಮೊರೆ ಹೋದ ನೇಪಾಳ ಪ್ರಧಾನಿ!

ಕೇವಲ 15 ವರ್ಷಕ್ಕೆ 5 ಪ್ರಶಸ್ತಿ : ಕಾರು ಜೊತೆಗೆ ವೈಭವ್ ಸೂರ್ಯವಂಶಿ ಪಡೆದ ನಗದು ಬಹುಮಾನ ಎಷ್ಟು ಗೊತ್ತಾ?

ಸೊಳ್ಳೆಗಳ ವಿರುದ್ಧವೇ ಸೊಳ್ಳೆಗಳ ಯುದ್ಧ: ಗೂಗಲ್‌ನ ‘ಮಸ್ಕಿಟೋ ಆರ್ಮಿ’ ಯೋಜನೆಯಲ್ಲಿ 3.2 ಕೋಟಿ ಸೊಳ್ಳೆಗಳ ಬಳಕೆ!

ಗುರು ರಾಶ್ಯಾಂತರ ಫಲ – ಗುರು ಅತಿಚಾರ ಯೋಗ

State News
KARNATAKA

ಗುರು ರಾಶ್ಯಾಂತರ ಫಲ – ಗುರು ಅತಿಚಾರ ಯೋಗ

By ಸುರೇಶ್‌ KARNATAKA 2 Mins Read

ಶ್ರೀ ಸಾಕ್ಷಿ ಪಂಚ ಎರಡನೇ ಬಾರಿಗೆ ಗುರು ಅತಿಚಾರಯೋಗ ಆಗಲಿದೆ. ಅತಿಚಾರ ಯೋಗ ಎಂದರೆ ಗುರುಗ್ರಹದ ಚಲನೆ ಅತಿ ವೇಗವಾಗಿ…

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷದ ಸಾಮಾನ್ಯ ಕಾರ್ಯಕರ್ತರೇ ಸಿಎಂ ಆಗುತ್ತಿದ್ದಾರೆ: ಡಿಕೆ ಶಿವಕುಮಾರ್

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.