Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ ಸಂಭ್ರಮಾಚರಣೆಯ ವೇಳೆ ಅಗ್ನಿ ಅವಘಡ, 9 ಜನರಿಗೆ ಗಾಯ | Firebreaks

22/12/2025 7:13 AM

ದಟ್ಟವಾದ ಮಂಜು : ದೆಹಲಿ ವಿಮಾನ ನಿಲ್ದಾಣದಲ್ಲಿ ಸತತ ಎರಡನೇ ದಿನ 100 ಕ್ಕೂ ಹೆಚ್ಚು ವಿಮಾನಗಳು ರದ್ದು

22/12/2025 7:08 AM

ಕನ್ನಡಿಗರಿಗೆ ಗುಡ್ ನ್ಯೂಸ್ : ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಸಮ್ಮತಿ : ವಿ.ಸೋಮಣ್ಣ

22/12/2025 7:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting
KARNATAKA

ಹೀಗಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

By kannadanewsnow0918/09/2025 8:01 PM

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ/ಪರಿಶಿಷ್ಠ ವರ್ಗಕ್ಕೆ ಸೇರಿದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ನಿರ್ಧರಿಸಲಾಗಿದೆ. ಆ ಎಲ್ಲಾ ಪ್ರಮುಖ ಸಚಿವ ಸಂಪುಟ ಸಭೆಯ ಹೈಲೈಟ್ಸ್ ಮುಂದಿದೆ ಓದಿ.

· ಸಹಕಾರ ಇಲಾಖೆಯಡಿ ಬೆಂಗಳೂರಿನ ದಾಸನಪುರ,ಕೋಲಾರ, ಮೈಸೂರು ಎಪಿಎಂಸಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ಬಯೋ ಸಿಎನ್ ಜಿ ಪ್ಲಾಂಟ್ ಗಳನ್ನು 74.88 ಕೋಟಿ ರೂ. ಪ್ರತಿಘಟಕಕ್ಕೆ 24.96 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತು.

· ವಿಜಯಪುರ ಜಿಲ್ಲೆಯಲ್ಲಿ ವಿಜಯಪುರ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳ 618.75 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಯಿತು.

· ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಡಿಯಾಕ್ ಯೂನಿಟ್ ನ ಅಗತ್ಯ ವೈದ್ಯಕೀಯ ಉಪಕರಣಗಳ ಖರೀದಿಗೆ 10.89 ಕೋಟಿ ರೂ. ಖರೀದಿಸಲು ನಿರ್ಣಯಿಸಲಾಯಿತು.

· ಆರ್ ಡಿ ಪಿ ಆರ್ ವಿಶ್ವವಿದ್ಯಾಲಯ ಆವರಣದಲ್ಲಿ ಪ್ಯಾಕೇಜ್ 1 ಹಾಗೂ 2 ಅಡಿಯಲ್ಲಿ ಪರಿಷ್ಕೃತ ಅಂದಾಜು ಮೊತ್ತ 48.43 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಗದಗ ಜಿಲ್ಲೆಯ ರೋಣ ತಾಲ್ಲೂಕಿನ 9 ಸಣ್ಣ ನೀರಾವರಿ ಜಿ.ಪಂ.ಕೆರೆಗಳಿಗೆ ಮಲಪ್ರಭಾ ಬಲದಂಡೆ ಕಾಲುವೆ 129.0 ಕಿ.ಮೀ ನಿಂದ ನೀರನ್ನು ಎತ್ತಿ ತುಂಬಿಸುವ ಯೋಜನೆಯನ್ನು 43.50 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮಲಪ್ರಭಾ ಬಲದಂಡೆ ಕಾಲುವೆಯ 56ಎ, 56ಬಿ, 56 ಸಿ, 57 ಮತ್ತು ಇಟಗಿ ವಿತರಣಾ ಕಾಲುವೆಗಳ ಮೊದಲನೇ ಹಂತದ ಆಧುನೀಕರಣ ಕಾಮಗಾರಿಗಳನ್ನು 31.08 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

· ಕೇಂದ್ರ ಕಾರಾಗೃಹಗಳಾದ ಬಳ್ಳಾರಿ, ವಿಜಯಪುರ, ಧಾರವಾಡ, ಶಿವಮೊಗ್ಗ, ಬೆಳಗಾವಿ, ಮೈಸೂರು, ಕಲಬುರಗಿ ಮತ್ತು ತುಮಕೂರು ಜಿಲ್ಲಾ ಕಾರಾಗೃಹಗಳಲ್ಲಿ ಒಟ್ಟು 16.75 ಕೋಟಿ ಮೊತ್ತದಲ್ಲಿ 10 ಸಂಖ್ಯೆಯ Towers of the Harmonius Call Blocking System ಮೊಬೈಲ್ ಟವರ್ ಗಳನ್ನು ಅಳವಡಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಬೆಂಗಳೂರು ದಕ್ಷಿಣ ತಾಲ್ಲೂಕು ಸರ್.ಎಂ.ವಿಶ್ವೇಶ್ವರಯ್ಯ ನಗರದಲ್ಲಿ ಛಲವಾದಿ ಮಹಾಸಭಾ ವತಿಯಿಂದ ನಿರ್ಮಿಸುತ್ತಿರುವ ಛಲವಾದಿ ಸಮುದಾಯ ಭವನದ 22.33 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· 90 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅನುಷ್ಠಾನಗೊಂಡಿರುವ ಫಿಟ್ಟರ್ ಮತ್ತು ಎಲೆಕ್ಟ್ರಿಷಿಯನ್ ವೃತ್ತಿಗಳಿಗೆ ಡಿಜಿಟಿ ಪಠ್ಯಕ್ರಮದಂತೆ ಅಗತ್ಯವಿರುವ ಉಪಕರಣ ಮತ್ತು ಯಂತ್ರೋಪಕರಣಗಳನ್ನು 50 ಕೋಟಿಗಳ ಅಂದಾಜು ವೆಚ್ಚದಲ್ಲಿ ಖರೀದಿಸಿ ಒದಗಿಸಲು ಅನುಮೋದನೆ ನೀಡಲಾಗಿದೆ.

· ಬೆಂಗಳೂರು ಕೇಂದ್ರ ನಗರಪಾಲಿಕೆ ವ್ಯಾಪ್ತಿಯಲ್ಲಿ Comprehensive development of roads by providing white topping in Gandhi Nagar Constituency under GOK grants 2023-24 ಪ್ಯಾಕೇಜಿನ ಕಾಮಗಾರಿಗಳ 58.44 ಕೋಟಿ ರೂ.ಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

· ಕೋಲಾರ ಜಿಲ್ಲೆಯ ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿತು.

· ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿನ ಕರ್ನಾಳ್ ಏತನೀರಾವರಿ ಯೋಜನೆಯನ್ನು 50.75 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

· ರಾಜ್ಯದ 9337 ಶಾಲೆಗಳಲ್ಲಿ ಬಿಸಿಯೂಟ ಸಿದ್ಧಪಡಿಸಲು ಹೊಸ ಪಾತ್ರೆ ಪರಿಕರಗಳನ್ನು ಸಿದ್ದಪಡಿಸಲು ಅಗತ್ಯವಿರುವ ಅನುದಾನವನ್ನು ರಾಜ್ಯ ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಒಟ್ಟಾರೆ 21.55 ಕೋಟಿ ಅಂದಾಜು ಮೊತ್ತದಲ್ಲಿ ಭರಿಸಲು ಸಚಿವ ಸಂಪುಟ ಅನುಮತಿ ನೀಡಿದೆ.

· ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ/ಪರಿಶಿಷ್ಠ ವರ್ಗಕ್ಕೆ ಸೇರಿದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ಸಚಿವ ಸಂಪುಟ ಅನುಮತಿ ನೀಡಿದೆ.

ಕೆಸೆಟ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ | KSET Exam 2025

BREAKING: ಅಂಕೋಲಾದಲ್ಲಿ ಲಾರಿ-KSRTC ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

Share. Facebook Twitter LinkedIn WhatsApp Email

Related Posts

ಕನ್ನಡಿಗರಿಗೆ ಗುಡ್ ನ್ಯೂಸ್ : ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಸಮ್ಮತಿ : ವಿ.ಸೋಮಣ್ಣ

22/12/2025 7:08 AM1 Min Read

BREAKING : ಇ-ಖಾತಾದಲ್ಲೂ ಗೋಲ್ಮಾಲ್‌ : ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಕೂಸಿಗೆ ಕೊಳ್ಳಿ ಇಟ್ಟರಾ ‘GBA’ ಅಧಿಕಾರಿಗಳು?

22/12/2025 6:54 AM1 Min Read

BIG Alert: ರಾಜ್ಯದಲ್ಲಿ ತೀವ್ರ ‘ಶೀತಗಾಳಿ’ ಹಿನ್ನಲೆ: ಈ ಸಲಹೆಗಳನ್ನು ಪಾಲಿಸುವಂತೆ ಸರ್ಕಾರ ಸೂಚನೆ | Cold wave

22/12/2025 5:45 AM2 Mins Read
Recent News

BREAKING: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ ಸಂಭ್ರಮಾಚರಣೆಯ ವೇಳೆ ಅಗ್ನಿ ಅವಘಡ, 9 ಜನರಿಗೆ ಗಾಯ | Firebreaks

22/12/2025 7:13 AM

ದಟ್ಟವಾದ ಮಂಜು : ದೆಹಲಿ ವಿಮಾನ ನಿಲ್ದಾಣದಲ್ಲಿ ಸತತ ಎರಡನೇ ದಿನ 100 ಕ್ಕೂ ಹೆಚ್ಚು ವಿಮಾನಗಳು ರದ್ದು

22/12/2025 7:08 AM

ಕನ್ನಡಿಗರಿಗೆ ಗುಡ್ ನ್ಯೂಸ್ : ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಸಮ್ಮತಿ : ವಿ.ಸೋಮಣ್ಣ

22/12/2025 7:08 AM

BREAKING : ಇ-ಖಾತಾದಲ್ಲೂ ಗೋಲ್ಮಾಲ್‌ : ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಕೂಸಿಗೆ ಕೊಳ್ಳಿ ಇಟ್ಟರಾ ‘GBA’ ಅಧಿಕಾರಿಗಳು?

22/12/2025 6:54 AM
State News
KARNATAKA

ಕನ್ನಡಿಗರಿಗೆ ಗುಡ್ ನ್ಯೂಸ್ : ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಸಮ್ಮತಿ : ವಿ.ಸೋಮಣ್ಣ

By kannadanewsnow0522/12/2025 7:08 AM KARNATAKA 1 Min Read

ಕೋಲಾರ : ಕನ್ನಡಿಗರಿಗೆ ಇದೀಗ ಕೇಂದ್ರ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ರೈಲ್ವೆ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಪರೀಕ್ಷೆಯನ್ನು…

BREAKING : ಇ-ಖಾತಾದಲ್ಲೂ ಗೋಲ್ಮಾಲ್‌ : ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಕೂಸಿಗೆ ಕೊಳ್ಳಿ ಇಟ್ಟರಾ ‘GBA’ ಅಧಿಕಾರಿಗಳು?

22/12/2025 6:54 AM

BIG Alert: ರಾಜ್ಯದಲ್ಲಿ ತೀವ್ರ ‘ಶೀತಗಾಳಿ’ ಹಿನ್ನಲೆ: ಈ ಸಲಹೆಗಳನ್ನು ಪಾಲಿಸುವಂತೆ ಸರ್ಕಾರ ಸೂಚನೆ | Cold wave

22/12/2025 5:45 AM

BREAKING : ರಾಜ್ಯದಲ್ಲಿ ಮರ್ಯಾದಾ ಹತ್ಯೆ : ದಲಿತ ಯುವಕನನ್ನ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳನ್ನೆ ಕೊಂದ ಪೋಷಕರು!

22/12/2025 5:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.