Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಕಾಂತಾರ’ ದೈವದ ಕುರಿತು ಹೇಳಿಕೆ: ಕ್ರಿಮಿನಲ್ ಕೇಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರಣವೀರ್ ಸಿಂಗ್

23/02/2026 5:49 PM

ಬಲ್ಡೊಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಹಿನ್ನೆಲೆ : ನಾಳೆ ಎಲ್ಲ ಶಾಲಾ ಕಾಲೇಜುಗಳಿ ರಜೆ ಘೋಷಣೆ!

23/02/2026 5:46 PM

BIG NEWS : ಧಾರವಾಡ KDP ಸಭೆಯಲ್ಲಿ ಸಚಿವ ಲಾಡ್-ಎಂಎಲ್ಸಿ ಜಕ್ಕಪ್ಪನವರ ನಡುವೆ ಜಟಾಪಟಿ

23/02/2026 5:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ತ್ಯಾಜ್ಯ ನಿರ್ವಹಣೆಗೆ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಜಾರಿ ಮಾಡಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
KARNATAKA

ಬೆಂಗಳೂರಿನ ತ್ಯಾಜ್ಯ ನಿರ್ವಹಣೆಗೆ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಜಾರಿ ಮಾಡಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

By kannadanewsnow0508/11/2025 6:26 AM

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ವಿಲೇವಾರಿಗಾಗಿ ವೈಜ್ಞಾನಿಕ ರೀತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ (ಎಸ್​​​ಡಬ್ಲೂಎಂ) ಮಾಡಲು ಏಕರೂಪ ಮತ್ತು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಜಾರಿಗೆ ತರುವಂತೆ ಹೈಕೋರ್ಟ್‌ ಸರ್ಕಾರ ಮತ್ತು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ)ಕ್ಕೆ ನಿರ್ದೇಶನ ನೀಡಿದೆ.

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (ಬಿಎಸ್ ಡಬ್ಲೂಎಂಎಲ್) 2025ರ ಜುಲೈ 30ರಂದು ಬೆಂಗಳೂರು ಮಹಾನಗರದಲ್ಲಿ ಘನತ್ಯಾಜ್ಯ ವಿಲೇವಾರಿಗೆ 33 ಪ್ಯಾಕೇಜ್​​ಗಳಿಗೆ ಹೊರಡಿಸಿದ್ದ ಟೆಂಡರ್ ಪ್ರಶ್ನಿಸಿ ಹಲವು ಘನತ್ಯಾಜ್ಯ ನಿರ್ವಹಣೆಯ ಗುತ್ತಿಗೆದಾರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದ ರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು, ಎಲ್ಲ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.

ಬೆಂಗಳೂರಿನಲ್ಲಿ ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವು ನಿರ್ದೇಶನಗಳನ್ನು ನೀಡಿರುವ ಪೀಠ, ಡಿಜಿಟಲ್ ಡ್ಯಾಶ್​​ಬೋರ್ಡ್​, ಮೊಬೈಲ್ ಅಪ್ಲಿಕೇಶನ್, ಜಿಪಿಎಸ್ ಟ್ರ್ಯಾಕಿಂಗ್, ವೇಯ್ಟ್ ಬ್ರಿಡ್ಜ್ ಏಕೀಕರಣ ಮತ್ತು ಸಿಸಿಟಿವಿ ಕಣ್ಗಾವಲುಗಳನ್ನು ಒಳಗೊಂಡಿರಬೇಕು. ಅವುಗಳನ್ನು ಪ್ರತ್ಯೇಕ ಅಥವಾ ಸ್ವತಂತ್ರ ಯೋಜನೆಗಳಾಗಿ ನೋಡದೆ ಒಂದೇ, ಸುಸಂಘಟಿತ ಆಡಳಿತ ವ್ಯವಸ್ಥೆಯ ಆಂತರಿಕವಾಗಿ ಸಂಪರ್ಕ ಹೊಂದಿದ ಘಟಕಗಳಾಗಿರಬೇಕು ಎಂದು ತಿಳಿಸಿದೆ.

ಸಿಸಿಟಿವಿ ಕಣ್ಗಾವಲು ಜಾಲವು ಪ್ರಾಥಮಿಕ ದತ್ತಾಂಶ ಸಂಗ್ರಹಣೆ ಮತ್ತು ಜಾರಿ ಸಂವೇದಕ ಜಾಲವಾಗಿ ಕಾರ್ಯನಿರ್ವಹಿಸಬೇಕು. ಹೊಸ ವ್ಯವಸ್ಥೆ ವಿಶ್ಲೇಷಣಾತ್ಮಕ ಮತ್ತು ಕಾರ್ಯಾಚರಣೆಯ ಮಾಡ್ಯೂಲ್​ಗಳಿಗೆ ನಿರ್ಣಾಯಕ ಮತ್ತು ರಿಯಲ್ ಟೈಮ್ ಮಾಹಿತಿ ಇಡಬೇಕು. ನಗರದ ನಾಗರಿಕರು ಕಸವನ್ನು ಸುರಿಯುವ ಬ್ಲಾಕ್ ಸ್ಪಾಟ್​​ಗಳ ಬಗ್ಗೆ ಅಪ್ಲಿಕೇಶನ್ ಮೂಲಕ ಮಾಹಿತಿ ನೀಡಿದರೆ ಅದರ ಮೇಲೆ ಕಣ್ಗಾವಲು ಇಡುವ ವ್ಯವಸ್ಥೆಯಾಗಬೇಕು.

ಅಷ್ಟೇ ಅಲ್ಲದೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆಲವು ದಿನಗಳಲ್ಲಿ ‘ನೋಡಲ್ ಮೇಲ್ವಿಚಾರಣಾ ಮತ್ತು ಅನುಷ್ಠಾನ ಸಮಿತಿ’ಯನ್ನು ರಚಿಸಬೇಕು. ಅದರ ಸಂಯೋಜನೆಯು ನ್ಯಾಯವ್ಯಾಪ್ತಿಯ ಸಂಘರ್ಷಗಳನ್ನು ಪೂರ್ವಭಾವಿಯಾಗಿ ನಿವಾರಿಸಲು ಮತ್ತು ಸಂಕೀರ್ಣ ನಗರ ಯೋಜನೆಗಳಿಗೆ ಅಡ್ಡಿಯಾಗುವ ಅಧಿಕಾರಶಾಹಿ ಅಡೆತಡೆಗಳನ್ನು ನಿವಾರಿಸುವಂತೆ ರೂಪಿಸಬೇಕು ಎಂದು ಪೀಠ ಸೂಚನೆ ನೀಡಿದೆ

Share. Facebook Twitter LinkedIn WhatsApp Email

Related Posts

BREAKING : ‘ಕಾಂತಾರ’ ದೈವದ ಕುರಿತು ಹೇಳಿಕೆ: ಕ್ರಿಮಿನಲ್ ಕೇಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರಣವೀರ್ ಸಿಂಗ್

23/02/2026 5:49 PM1 Min Read

ಬಲ್ಡೊಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಹಿನ್ನೆಲೆ : ನಾಳೆ ಎಲ್ಲ ಶಾಲಾ ಕಾಲೇಜುಗಳಿ ರಜೆ ಘೋಷಣೆ!

23/02/2026 5:46 PM1 Min Read

BIG NEWS : ಧಾರವಾಡ KDP ಸಭೆಯಲ್ಲಿ ಸಚಿವ ಲಾಡ್-ಎಂಎಲ್ಸಿ ಜಕ್ಕಪ್ಪನವರ ನಡುವೆ ಜಟಾಪಟಿ

23/02/2026 5:40 PM1 Min Read
Recent News

BREAKING : ‘ಕಾಂತಾರ’ ದೈವದ ಕುರಿತು ಹೇಳಿಕೆ: ಕ್ರಿಮಿನಲ್ ಕೇಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರಣವೀರ್ ಸಿಂಗ್

23/02/2026 5:49 PM

ಬಲ್ಡೊಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಹಿನ್ನೆಲೆ : ನಾಳೆ ಎಲ್ಲ ಶಾಲಾ ಕಾಲೇಜುಗಳಿ ರಜೆ ಘೋಷಣೆ!

23/02/2026 5:46 PM

BIG NEWS : ಧಾರವಾಡ KDP ಸಭೆಯಲ್ಲಿ ಸಚಿವ ಲಾಡ್-ಎಂಎಲ್ಸಿ ಜಕ್ಕಪ್ಪನವರ ನಡುವೆ ಜಟಾಪಟಿ

23/02/2026 5:40 PM

ಶಿರಸಿ ಮಾರಿಕಾಂಬೆ ಜಾತ್ರೆ ಹಿನ್ನಲೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆ

23/02/2026 5:38 PM
State News
KARNATAKA

BREAKING : ‘ಕಾಂತಾರ’ ದೈವದ ಕುರಿತು ಹೇಳಿಕೆ: ಕ್ರಿಮಿನಲ್ ಕೇಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರಣವೀರ್ ಸಿಂಗ್

By kannadanewsnow0523/02/2026 5:49 PM KARNATAKA 1 Min Read

ಬೆಂಗಳೂರು : ‘ಕಾಂತಾರ’ ಚಿತ್ರದ ದೈವದ ಪಾತ್ರದ ಕುರಿತು ನೀಡಿದ ಹೇಳಿಕೆ ಮತ್ತು ಅನುಕರಣೆಗೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು…

ಬಲ್ಡೊಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಹಿನ್ನೆಲೆ : ನಾಳೆ ಎಲ್ಲ ಶಾಲಾ ಕಾಲೇಜುಗಳಿ ರಜೆ ಘೋಷಣೆ!

23/02/2026 5:46 PM

BIG NEWS : ಧಾರವಾಡ KDP ಸಭೆಯಲ್ಲಿ ಸಚಿವ ಲಾಡ್-ಎಂಎಲ್ಸಿ ಜಕ್ಕಪ್ಪನವರ ನಡುವೆ ಜಟಾಪಟಿ

23/02/2026 5:40 PM

ಶಿರಸಿ ಮಾರಿಕಾಂಬೆ ಜಾತ್ರೆ ಹಿನ್ನಲೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆ

23/02/2026 5:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.