ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆಯಡಿ ರೈತರ ಆಹಾರ ಧಾನ್ಯ ಖರೀದಿಸಲು ಖರೀದಿ ಕೇಂದ್ರ ಆರಂಭಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.
ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲ್ಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸುವಂತೆ ಸೂಚಿಸಿದೆ.
ಇನ್ನೂ ನಿಗದಿತ ಅವಧಿಗಿಂತ ಕನಿಷ್ಠ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂಬುದಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದಂತ ನ್ಯಾಯಪೀಠ ಆದೇಶಿಸಿದೆ.
ಅಂದಹಾಗೇ ರೈತ ಸೇನೆ ಕರ್ನಾಟಕ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿ, ಈ ಆದೇಶವನ್ನು ಕರ್ನಾಟಕ ಹೈಕೋರ್ಟ್ ಮಾಡಿದೆ.
ಭಾನುವಾರವೂ ಪರಿಶಿಷ್ಟ ಜಾತಿ ಸಮೀಕ್ಷೆ ನಡೆಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ
ನಾಳೆ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು-ಕಾಶ್ಮೀರದಲ್ಲಿ ಅಣಕು ಕವಾಯತು | Mega security drill