Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM

BREAKING : ಪಾಕಿಸ್ತಾನದ F-16 ಎರಡು, F-17 ಎರಡು ಫೈಟರ್ ಜೆಟ್ ವಿಮಾನಗಳನ್ನು ಹೊಡೆದುರುಳಿಸಿದ ಭಾರತ

09/05/2025 9:35 AM

BREAKING : ಭಾರತ-ಪಾಕ್ ಮಧ್ಯ ಪರಿಸ್ಥಿತಿ ಉದ್ವಿಗ್ನ : ಜಮ್ಮು ಕಾಶ್ಮೀರದಲ್ಲಿ 2 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

09/05/2025 9:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ಹೆಚ್ಚು ತಾಪಮಾನ’: ಪರಿಣಾಮ ತಡೆಗೆ ಈ ಸಲಹೆ, ಸೂಚನೆ ಪಾಲಿಸುವಂತೆ ‘ರಾಜ್ಯ ಸರ್ಕಾರ’ ಆದೇಶ
KARNATAKA

ರಾಜ್ಯದಲ್ಲಿ ‘ಹೆಚ್ಚು ತಾಪಮಾನ’: ಪರಿಣಾಮ ತಡೆಗೆ ಈ ಸಲಹೆ, ಸೂಚನೆ ಪಾಲಿಸುವಂತೆ ‘ರಾಜ್ಯ ಸರ್ಕಾರ’ ಆದೇಶ

By kannadanewsnow0921/03/2025 2:49 PM

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕರ ಮೇಲೆ ಬೀರುವಂತ ಪ್ರತಿಕೂಲ ಪರಿಣಾಮಗಳನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಈ ಸಲಹೆ, ಸೂಚನೆ ಪಾಲಿಸುವಂತೆ ಆದೇಶದಲ್ಲಿ ತಿಳಿಸಿದೆ.

ಈ ಕುರಿತಂತೆ ಕಂದಾಯ ಇಲಾಖೆಯ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಆಯುಕ್ತಾಲಯದ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಭಾರತ ಹವಾಮಾನ ಇಲಾಖೆ (IMD) ಯು ಉಲ್ಲೇಖಿತ ಪತ್ರಿಕಾ ಪ್ರಕಟಣೆಯಲ್ಲಿ 2025ರ ಬಿಸಿ ವಾತಾವರಣ ಅವಧಿಯಲ್ಲಿ (ಮಾರ್ಚ್‌ನಿಂದ ಮೇ (MAM)), ಉತ್ತರ ಒಳನಾಡು ಜಿಲ್ಲೆಗಳಿಗೆ ಹೆಚ್ಚಿನ ಭಾಗಗಳಲ್ಲಿ ಮತ್ತು ಕರಾವಳಿ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದೆ. ಆದರೆ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಬಹುತೇಕ ಭಾಗಗಳಲ್ಲಿ ಮತ್ತು ಮಲೆನಾಡು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ತಾಪಮಾನದಿಂದ ಗರಿಷ್ಠ ತಾಪಮಾನದ ಸಾಧ್ಯತೆಗಳಿದೆ ಎಂದು. ಹಾಗೂ ಬಿಸಿಗಾಳಿ ದಿನಗಳ ಬಗ್ಗೆ 2025ರ ಬೇಸಿಗೆ (ಮಾರ್ಚ್ – ಮೇ) ಅವಧಿಗೆ ರಾಜ್ಯದ ಹಲವೆಡೆ 2 ರಿಂದ 14 ದಿನಗಳು ಬಿಸಿಗಾಳಿ ದಿನಗಳು ಕಾಣಬರುವ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಭವಿಸುವ ಸಾಧ್ಯತೆಯಿದೆ ಎಂದು ತಿಳಿಸಿರುತ್ತಾರೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಆದುದರಿಂದ, ಅತೀ ಹೆಚ್ಚು ತಾಪಮಾನ (heat wave) ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಸಲಹೆಗಳನ್ನು ನೀಡುವುದು ಅವಶ್ಯವಿರುತ್ತದೆಂದು ತೀರ್ಮಾನಿಸಿ, ಕೆಳಕಂಡ ಸಲಹೆ/ಸೂಚನೆಗಳನ್ನು ನೀಡಲಾಗಿದೆ:

ಅತೀ ಹೆಚ್ಚು ತಾಪಮಾನದಿಂದ(heat wave) ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು:

  1. ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12.00 ರಿಂದ 3.00 ರವರೆಗೆ).
  2. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಮ್ಮ ನೀರು ಕುಡಿಯುವುದು.
  3. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ‘ಪ್ಪಲಿಗಳನ್ನು ಬಳಸುವುದು.
  4. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕಲಸ ಮಾಡುವುದನ್ನು).
  5. ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು / ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ / ಪಂಡಾಲ್‌ನ ವ್ಯವಸ್ಥೆ ಮಾಡುವುದು, ಉತ್ತಮ ಗಾಳಿಯ (Air Circulation) ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು, ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವುದು.
  6. ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು.
  7. ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು.
  8. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.
  9. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು. ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡುವುದು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ORS ಅನ್ನು ಬಳಸುವುದು.
  10. ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
  11. ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.
  12. ಮನೆಯನ್ನು ತಂಪಾಗಿರಿಸಲು ವರದಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು.
  13. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕಾಪ್/ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ರಾನ್, ಎಲೆಕ್ಟೋಲೈಟ್/ಗೋಕೋಸ್/ ORS ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು(heat wave) ತಡೆಗಟ್ಟುವ ಕಿಟ್ ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.
  14. ಅತೀ ಹೆಚ್ಚು ತಾಪಮಾನ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವುದು.

ಅತೀ ಹೆಚ್ಚು ತಾಪಮಾನದಿಂದ(heat wave) ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ:

ಅತೀ ಹೆಚ್ಚು ತಾಪಮಾನದಿಂದ(heat wave) ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸಳತ, ಶಾಖದ ಬಳಲಿಕೆ ಮತ್ತು/ ಅಥವಾ ಶಾಖದ ಅಘಾತದಂತಹ (sun stroke) ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅವುಗಳ ರೋಗ ಲಕ್ಷಣಗಳು ಈ ಕಳಕಂಡಂತಿವೆ.

  1. ಶಾಖ ಸೆಳೆತಗಳು: ಎಡೆರ್ನಾ (ಊತ) ಮತ್ತು ಮೂರ್ಛೆ ಸಾಮಾನ್ಯವಾಗಿ 39c ಅಂದರೆ 102 ಫ್ಯಾರಾ ಹೀಟ್ ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.
  2. ಶಾಖದ ಬಳಲಿಕೆ: ಆಯಾಸ, ದೌರ್ಬಲ್ಯ, ತಲೆತಿರುಗುವಿಕೆ, ತಲೆನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.
  3. ಶಾಖಾಘಾತ: ದೇಹದ ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ಅಂದರೆ 104 ಫ್ಯಾರಾ ಹೀಟ್ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.

ಅತೀ ಹೆಚ್ಚು ತಾಪಮಾನ(heat wave)ಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ:

ಅತೀ ಹೆಚ್ಚು ತಾಪಮಾನದಿಂದ(heat wave) ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸುವುದು. ಒದ್ದೆಯಾದ ಬಟ್ಟೆಯಿಂದ ಮೈಒರಸುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು.

  1. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‌ಎಸ್, ನಿಂಬೆವಾನಕ ನೀಡುವುದು (ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ)
    ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು.
  2. ರೋಗ ಲಕ್ಷಣಗಳು ಉಲ್ಬಣಗೊಂಡರ ಅಥವಾ ದೀರ್ಘಕಾಲದವರೆಗೆ ಇದರ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸುವುದು.
  3. ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.
  4. ಅತೀ ಹೆಚ್ಚು ತಾಪಮಾನದಿಂದ(heat wave)ತುತ್ತಾದವರ ಮೇಲೆ ತಂಪಾದ ಒದ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿಸುವುದು.
  5. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು.
  6. ರೋಗಲಕ್ಷಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವುದು.

ಅತೀ ಹೆಚ್ಚು ತಾಪಮಾನಕ್ಕೆ (heat wave) ಸಂಬಂಧಿತ ಅನಾರೋಗ್ಯವನ್ನು ತಡೆಗಟ್ಟಲು/ಕಡಿಮೆಗೊಳಿಸಲು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳು

  • ಅತೀ ಹೆಚ್ಚು ತಾಪಮಾನಕ್ಕೆ (heat wave) ಸಂಬಂಧಿಸಿದಂತೆ IMD ಮತ್ತು KSNDMC ಯಿಂದ ನೀಡಿದ ಮುನ್ಸೂಚನೆ/ ಎಚ್ಚರಿಕೆಗಳು/ಎಚ್ಚರಿಕೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವುದು.
  • ಅತೀ ಹೆಚ್ಚು ತಾಪಮಾನದ(heat wave) ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ(heat wave) ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆ (ವಿ.ನಿ) ಯಿಂದ ತಯಾರಿಸಿರುವ TEC ಸಕ್ರಿಯಗೊಳಿಸುವುದು.
  • ನಗರ, ಪಟ್ಟಣ, ಕೊಳಚೆ ಪ್ರದೇಶಗಳು, ಅತೀ ಹೆಚ್ಚು ತಾಪಮಾನಕ್ಕೆ (heat wave) ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಲಭ್ಯತೆಯನ್ನು ಸಂಬಂಧಪಟ್ಟ ಇಲಾಖೆಗಳು (RDPR & UD) ಖಚಿತಪಡಿಸಿಕೊಳ್ಳುವುದು. iv. ಮಾರುಕಟ್ಟೆಗಳು, ಬಸ್ ನಿಲ್ದಾಣಗಳು ಮತ್ತು ಜನರು ಸೇರುವ ಇತರ ಆಯಕಟ್ಟಿನ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನರಳಿನ ಸೌಲಭ್ಯ ಕಲ್ಪಿಸುವುದು.
  • ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿಲೆಯ ಚಿಕಿತ್ಸೆಗೆ ಸಂಬಂಧಿಸಿದ ಪಶುವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡುವುದು.
  • ವಾಹನ ಚಾಲಕರಿಗೆ ಅವಶ್ಯ ಕುಡಿಯುವ ನೀರನ್ನು ಒದಗಿಸುವುದು ಹಾಗೂ ರಾಜ್ಯದಲ್ಲಿ ಅತೀ ಹೆಚ್ಚು ತಾಪಮಾನದ (HEAT WAVE) ಪರಿಸ್ಥಿತಿಗಳ ಬಗ್ಗೆ ಪ್ರವಾಸಿಗರಿಗೆ ಸಲಹೆಗಳನ್ನು ಪ್ರಚಾರ ಮಾಡುವುದು.
  • ಸಾಮೂಹಿಕ ಸಭೆಯ ಹೊರಾಂಗಣ ಸ್ಥಳಗಳಲ್ಲಿ ಜನರಿಗೆ ತಾತ್ಕಾಲಿಕ ನರಳಿನ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು, ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಬೇಕು, ಆಸನಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರಬೇಕು, ಸಾಕಷ್ಟು ORS ಮತ್ತು ಇತರ ಔಷಧಿಗಳ ದಾಸ್ತಾನು ಮತ್ತು ವೈದ್ಯಕೀಯ ಸಿಬ್ಬಂದಿ ಇರಬೇಕು. ಅತೀ ಹೆಚ್ಚು ತಾಪಮಾನಕ್ಕೆ (heat wave) ತುತ್ತಾದ ವ್ಯಕ್ತಿಗೆ ಪ್ರತ್ಯೇಕ ವಿಶ್ರಾಂತಿ ಸ್ಥಳವನ್ನು ಖಚಿತಪಡಿಸಿಕೊಳ್ಳಬೇಕು. ಅನುಕೂಲಕರ ತಾಪಮಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳದಲ್ಲಿ ಸಾಕಷ್ಟು ಗಾಳಿ ಸಂಚಾರ ಇರುವುದನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಸಂಖ್ಯೆಯ ಫ್ಯಾನ್/ಏರ್ ಕೂಲರ್‌ಗಳು ಇರಬೇಕು. ಸಾಧ್ಯವಾದಷ್ಟು ಮಟ್ಟಿಗೆ ಸಭೆ/ಸಮಾರಂಭಗಳನ್ನು ತಂಪಾದ ವಾತಾವರಣವಿರುವ ಅವಧಿಯಲ್ಲಿ (ಬೆಳಗ್ಗೆ ಅಥವಾ ಸಂಜೆ) ನಿಗದಿಪಡಿಸುವುದು.
  • ಜಿಲ್ಲಾಧಿಕಾರಿಗಳೂ/ಜಿಲ್ಲಾ ಅಧಿಕಾರಿಗಳು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯದೊಂದಿಗೆ ತಮ್ಮ ಜಿಲ್ಲೆಗೆ ಸಂಬಂಧಿಸಿದ ಅತೀ ಹೆಚ್ಚು ತಾಪಮಾನ (HEAT WAVE) ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು.
  1. ಕುಡಿಯುವ ನೀರಿನ ಲಭ್ಯತೆ:
    1. ಪ್ರಾದೇಶಿಕ ಆಯುಕ್ತರು ಹಾಗು ಜಿಲ್ಲಾಧಿಕಾರಿಗಳು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಜಲಾಶಯಗಳಲ್ಲಿ
    ಇರುವ ನೀರಿನ ಸಂಗ್ರಹಣೆಯನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಆಧ್ಯತೆಯ ಮೇರೆಗ ಕಾಯ್ದಿರಿಸುವುದು.
  2. ಹಿಂದಿನ ವರ್ಷಗಳ ಮಾಹಿತಿಯ ಆಧಾರದ ಮೇಲೆ ಕುಡಿಯುವ ನೀರಿನ ಕೊರತ ಉಂಟಾಗುವ ಗ್ರಾಮಗಳನ್ನು ಗುರುತಿಸುವುದು.
  3. ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮತ್ತು ಖಾಸಗಿ ಬೋರ್‌ವಲ್ ಗುರುತಿಸಿ ಅವುಗಳ ಮೂಲಕ ಕುಡಿಯುವ ನೀರಿನ ಕೊರತೆಯನ್ನು ನೀಗಿಸಲು ಸಂಬಂಧಪಟ್ಟ ಇಲಾಖೆಗಳು (RDPR & UD) ಪರ್ಯಾಯ ಕಾರ್ಯತಂತ್ರವನ್ನು (ಕಾಂಟಿಂಜೆನ್ಸಿ ಯೋಜನೆ) ರೂಪಿಸುವುದು.
  4. ಕುಡಿಯುವ ನೀರಿನ ಉದ್ದೇಶಕ್ಕಾಗಿ ಗ್ರಾಮ ಅಥವಾ ಪಟ್ಟಣಕ್ಕೆ ಅಗತ್ಯವಿರುವಷ್ಟು ನೀರನ್ನು ಪೈಪ್‌ಲೈನ್ ಮೂಲಕ ಸಂಬಂಧಪಟ್ಟ ಇಲಾಖೆಗಳು (RDPR & UD) ಪೂರೈಸುವುದು.
  5. ಅಸ್ತಿತ್ವದಲ್ಲಿರುವ ನೀರು ಸರಬರಾಜು ಯೋಜನಗಳ ವಿದ್ಯುತ್ ಪಂಪ್‌ಗಳು, ಕೈಪಂವುಗಳ ದುರಸ್ತಿ, ಕಡಿಮ ನೀರಿನ ಲಭ್ಯತೆ ಇರುವ ಬೋರ್‌ವಲ್‌ಗಳನ್ನು ಫ್ಲಶಿಂಗ್ ಮಾಡುವುದು ಮತ್ತು ಅಳಗೊಳಿಸುವುದು ಮತ್ತು ಆರ್‌ ಪ್ಲಾಂಟ್‌ಗಳ ನಿರ್ವಹಣೆ ಇತ್ಯಾದಿಗಳನ್ನು ಸಂಬಂಧಪಟ್ಟ ಇಲಾಖೆಗಳು (RDPR, UD & ENERGY) ಆದ್ಯತೆಯ ಮೇಲೆ ತೆಗೆದುಕೊಳ್ಳುವುದು.
  6. ಕುಡಿಯುವ ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಲು/ಮೌಲ್ಯಮಾಪನ ಮಾಡಲು ತಹಶೀಲ್ದಾರ್, ತಾಲ್ಲೂಕು ಕಾರ್ಯ ನಿರ್ವಾಹಕಾಧಿಕಾರಿ ಮತ್ತು ಪಶುಸಂಗೋಪನ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತಿ ವಾರ ಸಭೆ ನಡೆಸುವುದು.
  7. ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರಿಶೀಲಿಸುವುದು, ಮತ್ತು ಕಲುಷಿತವಾಗಿದ್ದಲ್ಲಿ ಅಗತ್ಯ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವುದು.

ಅತೀ ಹೆಚ್ಚು ತಾಪಮಾನ(heat wave) ಸಮಯದಲ್ಲಿ ಬೆಂಕಿಯ ತಡೆಗಟ್ಟುವಿಕೆ:

  • ಆಸ್ಪತ್ರೆಗಳು, ಕೈಗಾರಿಕೆಗಳು, ಜನಸಂದಣಿ ಸ್ಥಳಗಳು ಇತ್ಯಾದಿಗಳಲ್ಲಿ ಅಗ್ನಿ ಸುರಕ್ಷತೆಯ ವಿವಿಧ ಅಂಶಗಳ ಮೇಲೆ ಆಗಾಗ್ಗೆ ತಪಾಸಣೆ ಕೈಗೊಳ್ಳುವುದು, ಅಗ್ನಿ ಸುರಕ್ಷತೆಗೆ ತರಬೇತಿಗಳನ್ನು ಕೈಗೊಳ್ಳುವುದು.
  • ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್ ಕಡ್ಡಾಯವಾಗಿ ನಡೆಸುವುದು.
  • ಅತೀ ಹೆಚ್ಚು ತಾಪಮಾನ(heat wave) ತಡೆಗಟ್ಟುವ ಕುರಿತಂತೆ ಇಲಾಖಾವಾರು ಕರ್ತವ್ಯ/ ಜವಾಬ್ದಾರಿಗಳನ್ನು ಅತೀ ಹೆಚ್ಚು ತಾಪಮಾನದ (heat wave) ಕ್ರಿಯಾ ಯೋಜನೆಗಳಲ್ಲಿ ನಿಗದಿಪಡಿಸಲಾಗಿರುತ್ತದ. ಮೇಲೆ ವಿವರಿಸಿರುವ ಸಲಹ ಸೂಚನೆಗಳೊಂದಿಗೆ ಕ್ರಿಯಾ ಯೋಜನೆಗಳಡಿಯಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವಂತೆ ಕ್ರಮಗಳನ್ನು ಕೈಗೊಳ್ಳುವುದು.

BIG NEWS: ರಾಜ್ಯದಲ್ಲಿ ‘ಮನಿ ಕ್ರೈಸಿಸ್’ ಇತ್ತು, ಈಗ ‘ಹನಿ ಕ್ರೈಸಿಸ್’ ಶುರುವಾಗಿದೆ: ಸಂಸದ ಬೊಮ್ಮಾಯಿ

BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM1 Min Read

BREAKING : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ : ಬೆಂಗಳೂರು ಕಮಿಷನರ್ ಬಿ.ದಯಾನಂದ್

09/05/2025 9:13 AM1 Min Read

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

09/05/2025 8:52 AM1 Min Read
Recent News

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

09/05/2025 9:48 AM

BREAKING : ಪಾಕಿಸ್ತಾನದ F-16 ಎರಡು, F-17 ಎರಡು ಫೈಟರ್ ಜೆಟ್ ವಿಮಾನಗಳನ್ನು ಹೊಡೆದುರುಳಿಸಿದ ಭಾರತ

09/05/2025 9:35 AM

BREAKING : ಭಾರತ-ಪಾಕ್ ಮಧ್ಯ ಪರಿಸ್ಥಿತಿ ಉದ್ವಿಗ್ನ : ಜಮ್ಮು ಕಾಶ್ಮೀರದಲ್ಲಿ 2 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

09/05/2025 9:19 AM

BREAKING: ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಪದಚ್ಯುತಗೊಳಿಸುವ ಪ್ರಕ್ರಿಯೆ ಆರಂಭಿಸಿದ ಸಿಜೆಐ, ರಾಷ್ಟ್ರಪತಿ ಪ್ರಧಾನಿಗೆ ಪತ್ರ

09/05/2025 9:14 AM
State News
KARNATAKA

BREAKING : ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

By kannadanewsnow0509/05/2025 9:48 AM KARNATAKA 1 Min Read

ಶಿವಮೊಗ್ಗ : ಇಂದು ಶಿವಮೊಗ್ಗದಲ್ಲಿ ಬೆಳಂ ಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವಾಕಿಂಗ್ ಗೆ ಎಂದು ತೆರಳಿದ ವ್ಯಕ್ತಿಯನ್ನು ದುಷ್ಕರ್ಮಿಗಳು…

BREAKING : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ : ಬೆಂಗಳೂರು ಕಮಿಷನರ್ ಬಿ.ದಯಾನಂದ್

09/05/2025 9:13 AM

BREAKING : ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು

09/05/2025 8:52 AM

BREAKING : ಯಾದಗಿರಿಯಲ್ಲಿ ಘೋರ ದುರಂತ : ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವು

09/05/2025 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.