Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ, ಲೇಖಕ ಡಾ.ರಾಮಚಂದ್ರ ಗುಹಾ ಆಯ್ಕೆ

01/10/2025 10:02 PM

BREAKING : ಪಾಕ್’ನೊಂದಿಗೆ ಹ್ಯಾಂಡ್ ಶೇಕ್ ಮಾಡ್ಬೇಡಿ ; ಮಹಿಳಾ ವಿಶ್ವಕಪ್ ತಂಡಕ್ಕೆ ‘BCCI’ ಸೂಚನೆ

01/10/2025 9:31 PM

BREAKING : ಭಾರತದಿಂದ ವಿಶ್ವಸಂಸ್ಥೆಯ ‘ಶಾಂತಿಪಾಲಕರ ಸಮಾವೇಶ’ ಆಯೋಜನೆ ; ‘ಚೀನಾ, ಪಾಕ್’ಗಿಲ್ಲ ಆಹ್ವಾನ

01/10/2025 9:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ, ಲೇಖಕ ಡಾ.ರಾಮಚಂದ್ರ ಗುಹಾ ಆಯ್ಕೆ
KARNATAKA

2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ, ಲೇಖಕ ಡಾ.ರಾಮಚಂದ್ರ ಗುಹಾ ಆಯ್ಕೆ

By kannadanewsnow0901/10/2025 10:02 PM

ಬೆಂಗಳೂರು : ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ.ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕಕ್ಕೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು, ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡಲಾಗುತ್ತದೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಆಚರಿಸಲು ರಾಜ್ಯ ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಆಚರಣೆಯ ಅಂಗವಾಗಿ ಗಾಂಧೀಜಿಯವರ ತತ್ವ, ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಮಹತ್ವದ ಪಾತ್ರವಹಿಸಿರುವ ಡಾ. ರಾಮಚಂದ್ರ ಗುಹಾ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಾ. ಗುಹಾ ಅವರು ಭಾರತದ ಸಮಕಾಲೀನ ಇತಿಹಾಸ, ರಾಜಕೀಯ ಚಳವಳಿಗಳು, ಪರಿಸರ ಹೋರಾಟಗಳು ಹಾಗೂ ಕ್ರಿಕೆಟ್ ಕುರಿತ ತಮ್ಮ ಅಧ್ಯಯನ ಮತ್ತು ಗ್ರಂಥ ರಚನೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ.

ಅವರ ಪ್ರಮುಖ ಕೃತಿಗಳು:

India After Gandhi (ಸ್ವಾತಂತ್ರ್ಯಾನಂತರ ಭಾರತದ ಇತಿಹಾಸ)

A Corner of a Foreign Field (ಭಾರತೀಯ ಕ್ರಿಕೆಟ್‌ನ ಸಾಮಾಜಿಕ ಇತಿಹಾಸ)

Gandhi Before India (ಮಹಾತ್ಮ ಗಾಂಧೀಜಿಯವರ ಜೀವನಚರಿತ್ರೆಯ ಮೊದಲ ಭಾಗ)

Gandhi: The Years That Changed the World (ಜೀವನಚರಿತ್ರೆಯ ಎರಡನೇ ಭಾಗ)

The Unquiet Woods (ತಳಸ್ಥರದ ಪರಿಸರ ಚಳವಳಿಗಳ ಅಧ್ಯಯನ)

ಈ ಕೃತಿಗಳು ಇತಿಹಾಸ ಅಧ್ಯಯನವನ್ನು ಶ್ರೀಮಂತಗೊಳಿಸುವುದಷ್ಟೇ ಅಲ್ಲದೆ, ಸಾಮಾನ್ಯ ಓದುಗರಿಗೂ ಸುಲಭವಾಗಿ ತಲುಪುವ ಶೈಲಿಯಲ್ಲಿ ಬರೆದಿರುವುದರಿಂದ ಸಮಾಜದಲ್ಲಿ ಚಿಂತನ–ಮನನಕ್ಕೆ ಪ್ರೇರಣೆಯಾಗಿವೆ. ವಿಶೇಷವಾಗಿ ಗಾಂಧೀ ತತ್ವಗಳನ್ನು ಆಳವಾಗಿ ವಿಶ್ಲೇಷಿಸಿ ಅವನ್ನು ಸಮಕಾಲೀನ ಭಾರತಕ್ಕೆ ಸಂಬಂಧಿಸಿದಂತೆ ಅರ್ಥೈಸುವಲ್ಲಿ ಡಾ. ಗುಹಾ ಅವರಿಗೆ ಒಂದು ವಿಶಿಷ್ಟ ಸ್ಥಾನವಿದೆ. ಅವರ ಗಾಂಧೀಜಿಯವರ ಎರಡು ಸಂಪುಟಗಳ ಜೀವನಚರಿತ್ರೆ ಕನ್ನಡ ಸೇರಿದಂತೆ ಅನೇಕ ಭಾಷೆಗಳಿಗೆ ಅನುವಾದಗೊಂಡಿದೆ.

ರಾಜ್ಯ ಸರ್ಕಾರವು ಈ ಪ್ರಶಸ್ತಿಯ ಮೂಲಕ ಯುವ ಪೀಳಿಗೆಗೆ ಗಾಂಧೀಜಿಯವರ ಆದರ್ಶಗಳನ್ನು ಪರಿಚಯಿಸಿ, ಸತ್ಯ, ಅಹಿಂಸೆ, ಶಾಂತಿ ಮತ್ತು ಸೇವಾ ಮನೋಭಾವನೆಗಳನ್ನು ಬಲಪಡಿಸಲು ಬದ್ಧವಾಗಿದೆ. ಡಾ. ರಾಮಚಂದ್ರ ಗುಹಾ ಅವರಿಗೆ ಈ ಪ್ರಶಸ್ತಿ ಪ್ರದಾನವಾಗುವುದು, ಸಮಾಜದಲ್ಲಿ ಗಾಂಧೀಜಿಯವರ ಆದರ್ಶಗಳ ಪ್ರಚುರತೆ, ಸಂವಾದ ಮತ್ತು ಅಧ್ಯಯನಕ್ಕೆ ಪ್ರೇರಣೆಯಾದಂತಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಗರದ ‘ಲಯನ್ಸ್ ಕ್ಲಬ್’ವತಿಯಿಂದ ನವರಾತ್ರಿ ಸಂಭಮ್ರ: ‘ದಾಂಡಿಯಾ ಫೆಸ್ಟ್’ನಲ್ಲಿ ನೃತ್ಯ ವೈಭವ

01/10/2025 8:01 PM1 Min Read

ಶಿವಮೊಗ್ಗ: ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ- ರಾಘವೇಶ್ವರ ಶ್ರೀ

01/10/2025 7:57 PM1 Min Read

ಸಂಕ್ರಾಂತಿವರೆಗೂ ‘ಸಿದ್ಧರಾಮಯ್ಯ ಸರ್ಕಾರ’ಕ್ಕೆ ಯಾವುದೇ ತೊಂದರೆ ಇಲ್ಲ: ಕೋಡಿಮಠ ಶ್ರೀ ಭವಿಷ್ಯ | Kodi Matta Swamiji

01/10/2025 7:28 PM1 Min Read
Recent News

2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ, ಲೇಖಕ ಡಾ.ರಾಮಚಂದ್ರ ಗುಹಾ ಆಯ್ಕೆ

01/10/2025 10:02 PM

BREAKING : ಪಾಕ್’ನೊಂದಿಗೆ ಹ್ಯಾಂಡ್ ಶೇಕ್ ಮಾಡ್ಬೇಡಿ ; ಮಹಿಳಾ ವಿಶ್ವಕಪ್ ತಂಡಕ್ಕೆ ‘BCCI’ ಸೂಚನೆ

01/10/2025 9:31 PM

BREAKING : ಭಾರತದಿಂದ ವಿಶ್ವಸಂಸ್ಥೆಯ ‘ಶಾಂತಿಪಾಲಕರ ಸಮಾವೇಶ’ ಆಯೋಜನೆ ; ‘ಚೀನಾ, ಪಾಕ್’ಗಿಲ್ಲ ಆಹ್ವಾನ

01/10/2025 9:02 PM

ಸಾಗರದ ‘ಲಯನ್ಸ್ ಕ್ಲಬ್’ವತಿಯಿಂದ ನವರಾತ್ರಿ ಸಂಭಮ್ರ: ‘ದಾಂಡಿಯಾ ಫೆಸ್ಟ್’ನಲ್ಲಿ ನೃತ್ಯ ವೈಭವ

01/10/2025 8:01 PM
State News

2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ, ಲೇಖಕ ಡಾ.ರಾಮಚಂದ್ರ ಗುಹಾ ಆಯ್ಕೆ

By kannadanewsnow0901/10/2025 10:02 PM KARNATAKA 2 Mins Read

ಬೆಂಗಳೂರು : ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ.ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ…

ಸಾಗರದ ‘ಲಯನ್ಸ್ ಕ್ಲಬ್’ವತಿಯಿಂದ ನವರಾತ್ರಿ ಸಂಭಮ್ರ: ‘ದಾಂಡಿಯಾ ಫೆಸ್ಟ್’ನಲ್ಲಿ ನೃತ್ಯ ವೈಭವ

01/10/2025 8:01 PM

ಶಿವಮೊಗ್ಗ: ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ- ರಾಘವೇಶ್ವರ ಶ್ರೀ

01/10/2025 7:57 PM

ಸಂಕ್ರಾಂತಿವರೆಗೂ ‘ಸಿದ್ಧರಾಮಯ್ಯ ಸರ್ಕಾರ’ಕ್ಕೆ ಯಾವುದೇ ತೊಂದರೆ ಇಲ್ಲ: ಕೋಡಿಮಠ ಶ್ರೀ ಭವಿಷ್ಯ | Kodi Matta Swamiji

01/10/2025 7:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.