Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್ ; 6 ತಿಂಗಳವರೆಗೆ ‘EMI ಪಾವತಿ’ ವಿನಾಯಿತಿಗೆ ಸರ್ಕಾರ ನಿರ್ಧಾರ!

30/03/2026 5:20 PM

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

30/03/2026 5:17 PM

ಪೋಸ್ಟ್ ಆಫೀಸ್ ಸೂಪರ್ ಸ್ಕೀಮ್: 1 ಲಕ್ಷ ಹೂಡಿಕೆ ಮಾಡಿ, 45,000 ಬಡ್ಡಿ ಪಡೆಯಿರಿ!

30/03/2026 5:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ಸಮಗ್ರ ತನಿಖೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
KARNATAKA

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ಸಮಗ್ರ ತನಿಖೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0921/04/2025 2:22 PM

ಬೆಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ಸಮಗ್ರ ತನಿಖೆ ಅಗುವವರೆಗೂ ಯಾವುದನ್ನು ಹೇಳಲು ಆಗುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೃತ್ತ ಡಿಜಿಪಿ ಓಂ ಪ್ರಕಾಶ ಹತ್ಯೆ ಪ್ರಕರಣವನ್ನು ತನಿಖೆ ನಡೆಸಲಾಗುತ್ತಿದೆ. ತನಿಖೆಯಲ್ಲಿ ಏನೆಲ್ಲ ಮಾಹಿತಿ ಸಿಗುತ್ತದೆ ಎಂಬುದನ್ನು ನೋಡಬೇಕಿದೆ. 2025ರಲ್ಲಿ ನಾನು ಗೃಹ ಸಚಿವನಾಗಿದ್ದ ವೇಳೆ ಓಂಪ್ರಕಾಶ್ ಅವರು ಡಿಜಿಪಿಯಾಗಿ ಕೆಲಸ ಮಾಡಿದ್ದರು. ಒಳ್ಳೆಯ ಅಧಿಕಾರಿ, ಒಳ್ಳೆಯ ವ್ಯಕ್ತಿ. ಈ ರೀತಿಯಾಗಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಕರಣದ ತನಿಖೆಯಾಗುವವರೆಗೂ ಘಟನೆಗೆ ಇದೇ ಕಾರಣ ಎಂದು ಹೇಳಲು ಆಗುವುದಿಲ್ಲ. ನಿರ್ಧಿಷ್ಟವಾಗಿ ಹೇಳಲು ಬರುವುದಿಲ್ಲ. ಕೌಟುಂಬಿಕ ಕಾರಣದ ಬಗ್ಗೆ ಹಿಂದೆ ದೂರು ಕೊಟ್ಟಿರುವುದನ್ನು ತನಿಖೆಯಲ್ಲಿ ಪರಿಶೀಲಿಸುತ್ತಾರೆ ಎಂದರು.

ಎಲ್ಲವನ್ನು ಸಮಗ್ರವಾಗಿ ತನಿಖೆ ಮಾಡುವವರೆಗೂ ಯಾವುದನ್ನು ಹೇಳಲು ಆಗುವುದಿಲ್ಲ‌. ಓಂಪ್ರಕಾಶ್ ಅವರ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪತ್ನಿಗೆ ಕಾಯಿಲೆ ಇತ್ತು ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ‌ ಎಂದು ಹೇಳಿದರು.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ದಾಳಿಗೆ ಯಾವ ಶಸ್ತ್ರವನ್ನು ಬಳಸಿದ್ದರು? ಅದಕ್ಕೆ ಏನಾದರು ಕುರುಹು ಸಿಗುತ್ತದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಗಂಭೀರವಾಗಿ ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಇಂತಹ ಘಟನೆಗಳನ್ನು ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಜಾತಿಗಣತಿ ವರದಿ ಮೂಲಪ್ರತಿ ನಾಪತ್ತೆ ಬಗ್ಗೆ ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರು ಎಲ್ಲ ವಿಷಯದಲ್ಲಿ ಆರೋಪಗಳನ್ನು ಮಾಡುತ್ತಾರೆ. ಸರ್ಕಾರದ ಬಗ್ಗೆ ಸಕಾರಾತ್ಮಕ ಟೀಕೆಗಳನ್ನು ಮಾಡುವಂತೆ ಹೇಳುತ್ತೇವೆ. ಆದರೆ, ಅನವಶ್ಯಕ ಆರೋಪಗಳನ್ನು ಮಾಡುವುದರಿಂದ ಪ್ರಯೋಜನವಿಲ್ಲ. ಮೂಲ ಪ್ರತಿ ಇಲ್ಲದೇ ವರದಿ ಸಿದ್ಧಪಡಿಸಲು ಹೇಗೆ ಸಾಧ್ಯ. ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುವಾಗ ವಿಪಕ್ಷದವರ ಆರೋಪಗಳನ್ನು ಗಮನಿಸುತ್ತೇವೆ. ಗಂಭೀರವಾದ ಆರೋಪಗಳಾಗಿರುವುದರಿಂದ ನಾವು ಚರ್ಚೆ ಮಾಡುತ್ತೇವೆ‌ ಎಂದರು‌.

ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂಬ ನಿಟ್ಟಿನಲ್ಲಿ ಈವರೆಗೆ ಹತ್ತು ಸಮಿತಿಗಳಾಗಿವೆ. ಕೆಲವು ಸಮಿತಿಗಳು ಸಮೀಕ್ಷೆ ಮಾಡಿವೆ. ಕೆಲವು ಸ್ಯಾಂಪಲ್ ಡೇಟಾ ಸಂಗ್ರಹಿಸಿ ವರದಿ ಮಾಡಿದ್ದಾರೆ‌. ಇದೇ ಮೊದಲನೇ ಬಾರಿಗೆ ಸಂಪೂರ್ಣ ಡೇಟಾ ಸಂಗ್ರಹಿಸಿ ವರದಿ ನೀಡಿದ್ದಾರೆ. ಇದಕ್ಕೆ ಹೆಚ್ಚು ಮಹತ್ವ ಬರುತ್ತದೆಯೇ ವಿನಃ, ಬೇರೆ ಯಾವುದಕ್ಕು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾವು ಮೂಲವಾಗಿ ನೋಡಬೇಕಿರುವುದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ ವರದಿ ಕೊಡಬೇಕು ಎನ್ನುವುದು. ಆ ದೃಷ್ಟಿನಲ್ಲಿ ಸ್ವಾಭಾವಿಕವಾಗಿ ಜನಗಣತಿಯು ಆಗಬೇಕಾಗುತ್ತದೆ. ಸಮುದಾಯಗಳು ಹಿಂದುಳಿದಿದ್ದಾವೆಯೇ ಅಥವಾ ಮುಂದುವರಿದಿವೆಯೇ ಎಂಬುದನ್ನು ಅಧ್ಯಯನ ಮಾಡಿ ಹೇಳಬೇಕಾದರೆ, ಆ ಜಾತಿಯ ಸಂಖ್ಯೆಗಳನ್ನು ನೋಡಬೇಕಾಗುತ್ತದೆ. ಆ ಆಧಾರದ ಮೇಲೆ ವಿಶ್ಲೇಷಣೆಗಳಾಗುತ್ತಿವೆ. ಕೆಲವರು ಸರಿ ಇದೆ ಎನ್ನುತ್ತಾರೆ. ಕೆಲವರು ಸರಿ ಇಲ್ಲ ಎನ್ನುತ್ತಾರೆ. ಚರ್ಚೆ, ವಿಶ್ಲೇಷಣೆ, ತಪ್ಪು-ಒಪ್ಪುಗಳನ್ನು ಅಧ್ಯಯನ ಮಾಡಿ ಆನಂತರ ಸರ್ಕಾರ ಅಂತಿಮ ತೀರ್ಮಾನಕ್ಕೆ ಬರಬೇಕಾಗುತ್ತದೆ. ಆ ಪ್ರಕ್ರಿಯೆ ಪ್ರಾರಂಭವಾಗಿದೆ. ಕ್ಯಾಬಿನೆಟ್‌ಗೆ ತಂದು ಚರ್ಚೆಯಾಗಿದೆ. ಸಂಪೂರ್ಣವಾಗಿ ಚರ್ಚೆಯಾಗಿಲ್ಲ ಎಂಬ ಕಾರಣದಿಂದ ಮುಂದಕ್ಕೆ ಹಾಕಲಾಗಿದೆ. ಮುಂದೆ ಮತ್ತೊಂದು ದಿನ ಚರ್ಚೆ ಮಾಡುತ್ತೇವೆ. ಬಹಳಷ್ಟು ಮಂತ್ರಿಗಳು ತಮ್ಮ ಸಮುದಾಯಗಳ ಬಗ್ಗೆ ಮಾತನಾಡಿದ್ದಾರೆ. ಅದನ್ನು ಗಮನದಲ್ಲಿಟ್ಟು ಸರ್ಕಾರ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

30/03/2026 5:17 PM1 Min Read

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಪಂಚ ಗ್ಯಾರಂಟಿಗಳಿಗಾಗಿ 524.14 ಕೋಟಿ ವ್ಯಯ: MLC ದಿನೇಶ್ ಗೂಳಿಗೌಡ

30/03/2026 4:51 PM3 Mins Read

ಜಾನಪದ ಸಂಗೀತವೇ ಎಲ್ಲ ಕಲೆಗಳಿಗೆ ಮೂಲ: ಕಾಂತಾರ ಸಿನಿಮಾ ಗಾಯಕ ವೆಂಕಟೇಶ್ ಡಿ.ಸಿ

30/03/2026 4:47 PM2 Mins Read
Recent News

Good News ; ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್ ; 6 ತಿಂಗಳವರೆಗೆ ‘EMI ಪಾವತಿ’ ವಿನಾಯಿತಿಗೆ ಸರ್ಕಾರ ನಿರ್ಧಾರ!

30/03/2026 5:20 PM

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

30/03/2026 5:17 PM

ಪೋಸ್ಟ್ ಆಫೀಸ್ ಸೂಪರ್ ಸ್ಕೀಮ್: 1 ಲಕ್ಷ ಹೂಡಿಕೆ ಮಾಡಿ, 45,000 ಬಡ್ಡಿ ಪಡೆಯಿರಿ!

30/03/2026 5:03 PM

BREAKING : ಅಮೆರಿಕಾಕ್ಕೆ ಬಿಗ್ ಶಾಕ್ ; ಯುಎಸ್ ವಿಮಾನಗಳಿಗೆ ‘ಸ್ಪೇನ್’ ವಾಯುಪ್ರದೇಶ ಕ್ಲೋಸ್, ಮಿಲಿಟರಿ ನೆಲೆ ಬಳಕೆಗೆ ನಿರಾಕರಣೆ

30/03/2026 4:52 PM
State News
KARNATAKA

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

By kannadanewsnow0530/03/2026 5:17 PM KARNATAKA 1 Min Read

ಬೆಂಗಳೂರು : ಐಪಿಎಲ್ ಟಿಕೆಟ್ ಗಾಗಿ ವಿಧಾನಸಭೆಯಲ್ಲಿ ಶಾಸಕರ ಬೇಡಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ…

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಪಂಚ ಗ್ಯಾರಂಟಿಗಳಿಗಾಗಿ 524.14 ಕೋಟಿ ವ್ಯಯ: MLC ದಿನೇಶ್ ಗೂಳಿಗೌಡ

30/03/2026 4:51 PM

ಜಾನಪದ ಸಂಗೀತವೇ ಎಲ್ಲ ಕಲೆಗಳಿಗೆ ಮೂಲ: ಕಾಂತಾರ ಸಿನಿಮಾ ಗಾಯಕ ವೆಂಕಟೇಶ್ ಡಿ.ಸಿ

30/03/2026 4:47 PM

ಮುಂದಿನ 5 ದಿನಗಳ ಕಾಲ ಬೆಂಗಳೂರು ಸೇರಿ, ರಾಜ್ಯದ ವಿವಿಧೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

30/03/2026 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.