Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಾಜಾ ಪುನರ್ನಿರ್ಮಾಣಕ್ಕೆ ಟ್ರಂಪ್ ಮಾಸ್ಟರ್ ಪ್ಲಾನ್: 5 ಬಿಲಿಯನ್ ಡಾಲರ್ ನೆರವು, ಸಾವಿರಾರು ಸೈನಿಕರ ನಿಯೋಜನೆ!

16/02/2026 8:37 AM

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : ಬೇಸಿಗೆಗೂ ಮುನ್ನವೇ `AC’ ಬೆಲೆಯಲ್ಲಿ ಭಾರೀ ಇಳಿಕೆ | AC price drop

16/02/2026 8:37 AM

ALERT : `ಹೃದಯಾಘಾತ’ದ ಸಂದರ್ಭದಲ್ಲಿ ನಿಮ್ಮನ್ನ ರಕ್ಷಿಸುತ್ತವೆ ಈ ಔಷಧಿಗಳು : ತಪ್ಪದೇ ಮನೆಯಲ್ಲಿ ಇಟ್ಟುಕೊಳ್ಳಿ.!

16/02/2026 8:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
KARNATAKA

BIG NEWS: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0903/05/2025 7:40 PM

ಬೆಂಗಳೂರು: ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ ಮಾಡಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ನಕ್ಸಲ್‌ ನಿಗ್ರಹ ಪಡೆ ಮಾದರಿಯಲ್ಲಿ ʼಕೋಮು ಹಿಂಸೆ ನಿಗ್ರಹ ಕಾರ್ಯಪಡೆʼಯನ್ನು ರಚಿಸಲಿದ್ದೇವೆ. ಇದು ಪೊಲೀಸರ ಸಹಯೋಗದಲ್ಲಿ ಕೆಲಸ ಮಾಡಲಿದೆ. ಯಾರು ಕೋಮು ಚಟುವಟಿಕೆಯನ್ನು ನಡೆಸುತ್ತಾರೆ, ಯಾರು ಅದನ್ನು ಬೆಂಬಲಿಸುತ್ತಾರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಅಧಿಕಾರವನ್ನು ಈ ಕಾರ್ಯಪಡೆಗೆ ಒದಗಿಸುತ್ತೇವೆ ಎಂದು ತಿಳಿಸಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ನಕ್ಸಲ್‌ ನಿಗ್ರಹ ಪಡೆ ಮಾದರಿಯಲ್ಲಿ ʼಕೋಮು ಹಿಂಸೆ ನಿಗ್ರಹ ಕಾರ್ಯಪಡೆʼಯನ್ನು ರಚಿಸಲಿದ್ದೇವೆ. ಇದು ಪೊಲೀಸರ ಸಹಯೋಗದಲ್ಲಿ ಕೆಲಸ ಮಾಡಲಿದೆ. ಯಾರು ಕೋಮು ಚಟುವಟಿಕೆಯನ್ನು ನಡೆಸುತ್ತಾರೆ, ಯಾರು ಅದನ್ನು ಬೆಂಬಲಿಸುತ್ತಾರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ… pic.twitter.com/OtfVyG8LyF

— DIPR Karnataka (@KarnatakaVarthe) May 3, 2025

ಮಂಗಳೂರು ಶಾಂತಿಗೆ ಬರುತ್ತಿತ್ತು. ಕಳೆದ ನಾಲ್ಕೈದು ದಿನದಿಂದ ಆದ ಘಟನೆ ಮತ್ತು ನಿನ್ನೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ನಾವು ಇದನ್ನು ಹೀಗೆ ಮುಂದುವರಿಯಲು ಯಾವುದೇ ಕಾರಣಕ್ಕು ಬಿಡುವುದಿಲ್ಲ. ಆರೋಪಿಗಳ ಪತ್ತೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು, ಶೋಧ ನಡೆಸಿದ್ದಾರೆ. ಇನ್ನು ಮುಂದೆಯೂ ಇಂತಹ ಘಟನೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.

ಶಾಂತಿಯನ್ನು ಕಾಪಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಮನವಿ‌ ಮಾಡುತ್ತೇನೆ. ಸರ್ಕಾರ ಮತ್ತು‌ ಪೊಲೀಸ್ ಇಲಾಖೆ ನಿಮ್ಮ ಜೊತೆಯಲ್ಲಿದೆ. ಶಾಂತಿ‌ ಕಾಪಾಡಲು ಎಲ್ಲ ರೀತಿಯ ಪ್ರಯತ್ನವನ್ನು ನಾವು ಮಾಡುತ್ತೇವೆ. ಈಗಾಗಲೇ‌ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗಬಾರದು ಎಂಬ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.

ನಿನ್ನೆಯ ಘಟನೆಯ ಕುರಿತು ಸಂಪೂರ್ಣ ವರದಿ ಕೇಳಿದ್ದೇನೆ. ತನಿಖೆ ಆರಂಭಿಸಲಾಗಿದ್ದು ಆರೋಪಿಗಳನ್ನು ಬಿಡುವುದಿಲ್ಲ‌. ಇದನ್ನು ಹತ್ತಿಕ್ಕಲು ಎಲ್ಲ ರೀತಿಯ ಪ್ರಯತ್ನ, ಕ್ರಮ ಕೈಗೊಂಡಿದ್ದು, ಬೆಳೆಯಲು ಬಿಡುವುದಿಲ್ಲ. ಯಾವುದೇ ಪಕ್ಷ, ಸಂಘಟನೆಯವರು ಅಥವಾ ಬೇರೆ ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಎಚ್ಚರಿಸಿದರು‌.

ಬಿಜೆಪಿ ಮುಖಂಡರ ಆರೋಪಗಳ ಕುರಿತು ಪ್ರತಿಕ್ರಿಯಿಸಿ, ಯಾರು ಕೂಡ ಕೊಲೆ ಆಗಬೇಕು ಎಂದು ಬಯಸುವುದಿಲ್ಲ. ಜವಾಬ್ಧಾರಿಯುತ ಸರ್ಕಾರವಾಗಿ ಶಾಂತಿ ಸುವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ಧಾರಿ. ಈ ಜವಾಬ್ಧಾರಿಯಿಂದ ನಾವು ನುಣುಚಿಕೊಳ್ಳುವುದಿಲ್ಲ. ಈಗಾಗಲೇ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಘಟನೆಗಳಾದಾಗ ಕಾನೂನು‌ ಪ್ರಕಾರ ಏನೆಲ್ಲ‌ ಕ್ರಮ ತೆಗೆದುಕೊಳ್ಳಬೇಕು ಅದೆಲ್ಲವನ್ನು ಮಾಡಿದ್ದೇವೆ. ಇದನ್ನು ಬಿಡುವುದಿಲ್ಲ ಎಂದು ಹೇಳಿದರು

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಹಿಂದು ಕಾರ್ಯಕರ್ತರಿಗೆ ಜೀವಭಯವಿದೆ, ಉಳಿಗಾಲವಿಲ್ಲ ಎಂದಿರುವ ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಬೇರೆಯವರಿದ್ದಾರ? ಹಿಂದುಗಳಿಲ್ಲವೇ? ನಾವೆಲ್ಲ ಹಿಂದುಗಳಲ್ಲವ? ನಾವು ಬೇರೆಯವರ? ಆ ರೀತಿ ವಿಶ್ಲೇಷಣೆ ಮಾಡುವುದು ಸರಿಯಲ್ಲ. ಕೊಲೆಯಾಗಿದೆ ಆರೋಪಿಗಳನ್ನು ಹಿಡಿದು ಹಾಕುತ್ತೇವೆ. ಘಟನೆಗೆ ಬೇರೆಬೇರೆ ಬಣ್ಣಕಟ್ಟುವುದು ಬೇಡ. ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ.? ಈ ಫ್ಯಾಶನ್ ಡಿಸೈನ್ ಪದವಿ ಕೋರ್ಸ್ ಗೆ ಅರ್ಜಿ ಸಲ್ಲಿಸಿ

Share. Facebook Twitter LinkedIn WhatsApp Email

Related Posts

ALERT : `ಹೃದಯಾಘಾತ’ದ ಸಂದರ್ಭದಲ್ಲಿ ನಿಮ್ಮನ್ನ ರಕ್ಷಿಸುತ್ತವೆ ಈ ಔಷಧಿಗಳು : ತಪ್ಪದೇ ಮನೆಯಲ್ಲಿ ಇಟ್ಟುಕೊಳ್ಳಿ.!

16/02/2026 8:16 AM2 Mins Read

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-1ಕ್ಕೆ KSRTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/02/2026 8:01 AM1 Min Read

ಆಸ್ತಿ ಖರೀದಿದಾರರೇ ಗಮನಿಸಿ : `ಆಸ್ತಿ ರಿಜಿಸ್ಟರ್​’ಗೆ ಈ 5 ದಾಖಲೆಗಳು ಕಡ್ಡಾಯ.!

16/02/2026 7:55 AM2 Mins Read
Recent News

ಗಾಜಾ ಪುನರ್ನಿರ್ಮಾಣಕ್ಕೆ ಟ್ರಂಪ್ ಮಾಸ್ಟರ್ ಪ್ಲಾನ್: 5 ಬಿಲಿಯನ್ ಡಾಲರ್ ನೆರವು, ಸಾವಿರಾರು ಸೈನಿಕರ ನಿಯೋಜನೆ!

16/02/2026 8:37 AM

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : ಬೇಸಿಗೆಗೂ ಮುನ್ನವೇ `AC’ ಬೆಲೆಯಲ್ಲಿ ಭಾರೀ ಇಳಿಕೆ | AC price drop

16/02/2026 8:37 AM

ALERT : `ಹೃದಯಾಘಾತ’ದ ಸಂದರ್ಭದಲ್ಲಿ ನಿಮ್ಮನ್ನ ರಕ್ಷಿಸುತ್ತವೆ ಈ ಔಷಧಿಗಳು : ತಪ್ಪದೇ ಮನೆಯಲ್ಲಿ ಇಟ್ಟುಕೊಳ್ಳಿ.!

16/02/2026 8:16 AM

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-1ಕ್ಕೆ KSRTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/02/2026 8:01 AM
State News
KARNATAKA

ALERT : `ಹೃದಯಾಘಾತ’ದ ಸಂದರ್ಭದಲ್ಲಿ ನಿಮ್ಮನ್ನ ರಕ್ಷಿಸುತ್ತವೆ ಈ ಔಷಧಿಗಳು : ತಪ್ಪದೇ ಮನೆಯಲ್ಲಿ ಇಟ್ಟುಕೊಳ್ಳಿ.!

By kannadanewsnow5716/02/2026 8:16 AM KARNATAKA 2 Mins Read

ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಹೊರತಾಗಿಯೂ ಹೃದಯ ಕಾಯಿಲೆಗಳ ಅಪಾಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಣ್ಣ ಲಕ್ಷಣಗಳನ್ನು ಸಹ ನಿರ್ಲಕ್ಷಿಸಬಾರದು ಎಂದು ವೈದ್ಯರು…

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-1ಕ್ಕೆ KSRTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/02/2026 8:01 AM

ಆಸ್ತಿ ಖರೀದಿದಾರರೇ ಗಮನಿಸಿ : `ಆಸ್ತಿ ರಿಜಿಸ್ಟರ್​’ಗೆ ಈ 5 ದಾಖಲೆಗಳು ಕಡ್ಡಾಯ.!

16/02/2026 7:55 AM

Private Jobs : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 5 ದಿನ ಕೆಲಸ, 13 ಲಕ್ಷ ಸಂಬಳ, ಈಗಲೇ ಅರ್ಜಿ ಸಲ್ಲಿಸಿ !

16/02/2026 7:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.