Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ ; ‘ಬೆಳ್ಳಿ’ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ, ಕೆಜಿಗೆ 2 ಲಕ್ಷ ರೂ.

12/12/2025 6:10 PM

ರಾಜ್ಯದ ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

12/12/2025 5:44 PM

ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ‘ವೇತನ ಪಾವತಿ’ಗೆ ಚಿಂತನೆ

12/12/2025 5:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡ್ರಗ್ಸ್ ವಿರುದ್ಧ ಕ್ರಮಕೈಗೊಳ್ಳಲು ನಿರ್ಲಕ್ಷಿಸಿದರೆ ಅಧಿಕಾರಿಗಳ ತಲೆದಂಡ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ
KARNATAKA

ಡ್ರಗ್ಸ್ ವಿರುದ್ಧ ಕ್ರಮಕೈಗೊಳ್ಳಲು ನಿರ್ಲಕ್ಷಿಸಿದರೆ ಅಧಿಕಾರಿಗಳ ತಲೆದಂಡ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ

By kannadanewsnow0930/11/2024 3:42 PM

ಮಂಗಳೂರು : ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಸ್ಪೆಷಲ್ ಟಾಸ್ಕ್ ಫೋರ್ಸ್ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ‌ ಮಾಡಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಮಂಗಳೂರಿನ ಅತ್ತಾವರದಲ್ಲಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯಗಳು ಹಾಗೂ ಸುಬ್ರಹ್ಮಣ್ಯ ಮತ್ತು ಬಂಟ್ವಾಳ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯಲ್ಲಿ ಬಹಳ ಸವಾಲುಗಳಿವೆ. ಸಮಾಜಕ್ಕೆ ಅತ್ಯಂತ ಅಪಾಯಕಾರಿ ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡಬಾರದು.‌ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ‌ ನೀಡಿದ್ದೇನೆ ಎಂದರು.

ಪಕ್ಷವು ಚುನಾವಣಾ ಪ್ರಣಾಳಿಕೆಯನ್ನು ಬರೆಯುವ ಜವಾಬ್ದಾರಿಯನ್ನು ನನಗೆ ವಹಿಸಿದ್ದರು. ಪ್ರತಿ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಮಂಗಳೂರಿಗೆ ಆಗಮಿಸಿದ್ದಾಗ ವಿದ್ಯಾರ್ಥಿಗಳು, ಸಾರ್ವಜನಿಕರು ಭೇಟಿ ಮಾಡಿದ್ದರು. ಮಕ್ಕಳನ್ನು ಓದಿಸಲು ಬೇರೆ ಕಡೆ ಕಳುಹಿಸುವ ಪರಿಸ್ಥಿತಿ ಬಂದಿದೆ. ಉದ್ಯಮಗಳಿಗೆ ಹೂಡಿಕೆ ಮಾಡಲು ಬರುತ್ತಿಲ್ಲ ಎಂಬುದು ಗಮನಕ್ಕೆ ತಂದರು. ಕೋಮುವಾದಿಗಳನ್ನು ಹತ್ತಿಕ್ಕಲು ಕೆಲಸ ಮಾಡದೇ ಇದ್ದರೆ ಕಷ್ಟವಾಗುತ್ತದೆ ಎಂಬುದನ್ನು ಅರಿತು ಸ್ಪೇಷಲ್ ಟಾಸ್ಕ್ ಫೋರ್ಸ್ ರಚಿಸಲಾಯಿತು‌ ಎಂದು ತಿಳಿಸಿದರು.

ಇಲ್ಲಿನ ಜನರು ಶಾಂತಿಯಿಂದ ಬಾಳುವಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಶಾಂತಿಯ ತೋಟವಾಗಬೇಕು. ಈ ನಿಟ್ಟಿನಲ್ಲಿ ಪೊಲೀಸರು ಮತ್ತಷ್ಟು ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಸಬೇಕು ಎಂದು ಹೇಳಿದರು.

ದೇಶದಲ್ಲಿ ಪೊಲೀಸರಿಗೆ ಸುಸಜ್ಜಿತ ಮನೆಗಳನ್ನು ಯಾವ ರಾಜ್ಯಗಳು ನಿರ್ಮಿಸಿಲ್ಲ. ನಮ್ಮ ಸರ್ಕಾರವು ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿ ಕೊಡುತ್ತಿದೆ. ಆರಂಭದಲ್ಲಿ ಒಂದು ಮನೆ ನಿರ್ಮಿಸಲು 16 ಲಕ್ಷ ರೂ. ಖರ್ಚು ಆಗುತ್ತಿತ್ತು. ಪ್ರಸ್ತುತ 20 ಲಕ್ಷ ರೂ. ಖರ್ಚಾಗುತ್ತಿದೆ. ಇಲಾಖೆಯ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೆ ವಸತಿ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ. ಕಳೆದ ಜೂನ್‌ನಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿ, ರಾಜ್ಯ ಪೊಲೀಸರಿಗೆ ಮನೆ ಕಟ್ಟಿಸಲು 5000 ಕೋಟಿ ರೂ. ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

ಪ್ರತಿಯೊಬ್ಬರಿಗು ಮನೆ ಕಲ್ಪಿಸಬೇಕು ಎಂಬ ಚಿಂತನೆ ಇದೆ. ಪ್ರಸಕ್ತ ವರ್ಷ 1600 ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಮುಂದಿನ ವರ್ಷ 500 ರಿಂದ 1000 ಕೋಟಿ ರೂ‌. ಮೀಸಲಿಡಲಾಗುವುದು ಎಂದರು.

ಡ್ರಗ್ಸ್ ಚಟುವಟಿಕೆಯನ್ನು‌ ಮಟ್ಟ ಹಾಕಲು ಯಾವುದೇ ರೀತಿಯ ಕಾನೂನು ಕ್ರಮ ತೆಗೆದುಕೊಂಡರು ಪೊಲೀಸರ ಜೊತೆಗೆ ಇರುತ್ತೇನೆ‌. ಕಳೆದ ಒಂದು ವರ್ಷದ ಅವಧಿಯಲ್ಲಿ ಕಾರ್ಯಾಚರಣೆ 200 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಿದ್ದಾರೆ. ಪೊಲೀಸರು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸದೇ ಹೋಗಿದ್ದರೆ ಇಷ್ಟೊಂದು ಪ್ರಮಾಣದ ಡ್ರಗ್ಸ್ ಪತ್ತೆಯಾಗುತ್ತಿರಲಿಲ್ಲ. ಡ್ರಗ್ಸ್ ದಂಧೆಯನ್ನು ನಿಯಂತ್ರಿಸಲು ಸೂಕ್ತ‌ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ, ಆಯಾ ವ್ಯಾಪ್ತಿಯ ಇನ್‌ಸ್ಪೆಕ್ಟರ್, ಡಿವೈಎಸ್‌ಪಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೇಳಿದರು.

ಬಿಇ, ಎಮ್‌ಎಸ್ಸಿ, ಎಮ್‌ಎ ಪದವಿದರರು ಇಲಾಖೆಗೆ ಸೇರಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಬಹುದೊಡ್ಡ ಬದಲಾವಣೆಗಳು ಕಾಣುತ್ತಿವೆ. ರಾಜ್ಯ ಪೊಲೀಸ್ ಇಲಾಖೆಯು ಸಮರ್ಥವಾಗಿ ಕೆಲಸ ಮಾಡುತ್ತಿದೆ.‌ ಏನೆಲ್ಲ ಸವಲತ್ತುಗಳ ಅವಶ್ಯಕತೆ ಇದೆಯೋ ನೀಡಲಾಗುವುದು. ದೂರು ಕೊಡಲು ಬರುವ ಸಾರ್ವಜನಿಕರೊಂದಿಗೆ ಸಹನೆ, ಜನಸ್ನೇಹಿಯಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಅಶೋಕ್ ರೈ, ಐವಾನ್ ಡಿಸೋಜಾ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್, ಮಂಗಳೂರು ನಗರ ಡಿಸಿಪಿ ಸಿದ್ಧಾರ್ಥ್ ಗೋಯಲ್ ಉಪಸ್ಥಿತರಿದ್ದರು.

BREAKING: ಶಿವಮೊಗ್ಗದಲ್ಲಿ ಹಾಡ ಹಗಲೇ ವ್ಯಕ್ತಿಯೊಬ್ಬನನ್ನು ಬರ್ಬರ ಹತ್ಯೆ: ಬೆಚ್ಚಿ ಬಿದ್ದ ಜನತೆ

BIG NEWS : ಯಾರು ಕಣ್ಣೀರು ಹಾಕಬಾರದು, ನಾವು ಸತ್ತಿಲ್ಲ ಸೋತಿದ್ದೇವೆ ಅಷ್ಟೇ : ನಿಖಿಲ್ ಕುಮಾರಸ್ವಾಮಿ ಹೇಳಿಕೆ

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

12/12/2025 5:44 PM1 Min Read

ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ‘ವೇತನ ಪಾವತಿ’ಗೆ ಚಿಂತನೆ

12/12/2025 5:41 PM1 Min Read

ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ಭಾಗಶಃ ರದ್ದು

12/12/2025 5:36 PM1 Min Read
Recent News

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ ; ‘ಬೆಳ್ಳಿ’ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ, ಕೆಜಿಗೆ 2 ಲಕ್ಷ ರೂ.

12/12/2025 6:10 PM

ರಾಜ್ಯದ ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

12/12/2025 5:44 PM

ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ‘ವೇತನ ಪಾವತಿ’ಗೆ ಚಿಂತನೆ

12/12/2025 5:41 PM

BREAKING : ವರ್ಷಪೂರ್ತಿ ‘ವಿಮಾನ ಟಿಕೆಟ್ ದರ’ ಮಿತಿಗೊಳಿಸಲು ಸಾಧ್ಯವಿಲ್ಲ, ಹಬ್ಬಗಳ ಸಂದರ್ಭದಲ್ಲಿ ಬೆಲೆ ಏರಿಕೆ : ವಿಮಾನಯಾನ ಸಚಿವ

12/12/2025 5:39 PM
State News
KARNATAKA

ರಾಜ್ಯದ ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

By kannadanewsnow0912/12/2025 5:44 PM KARNATAKA 1 Min Read

ಬೆಳಗಾವಿ ಸುವರ್ಣಸೌಧ: ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ (6) ರಲ್ಲಿ ಹೊಸ ನ್ಯಾಯಬೆಲೆ…

ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ‘ವೇತನ ಪಾವತಿ’ಗೆ ಚಿಂತನೆ

12/12/2025 5:41 PM

ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ಭಾಗಶಃ ರದ್ದು

12/12/2025 5:36 PM

SHOCKING: ಆಸ್ಪತ್ರೆ ಆವರಣದಲ್ಲೇ ಮಾನವನ ತಲೆ ಬುರುಡೆ ಪತ್ತೆ

12/12/2025 5:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.