ಶಿಲ್ಲಾಂಗ್: ಇಂದೋರ್ ಉದ್ಯಮಿ ರಾಜಾ ರಘುವಂಶಿ ಅವರನ್ನು ಕೊಲೆ ಮಾಡಿದ ಮೂವರು ಹಿಟ್ಮ್ಯಾನ್ಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಸೋನಮ್ ರಘುವಂಶಿ ಮತ್ತು ಆಕೆಯ ಗೆಳೆಯ ರಾಜ್ ಕುಶ್ವಾಹ ಅವರ ಪೊಲೀಸ್ ಕಸ್ಟಡಿಯನ್ನು ಶಿಲ್ಲಾಂಗ್ನ ನ್ಯಾಯಾಲಯ ಗುರುವಾರ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿದೆ.
ಮೇ 23ರಂದು ಮೇಘಾಲಯದ ಸೊಹ್ರಾ ಪ್ರದೇಶದಲ್ಲಿ ಮಧುಚಂದ್ರಕ್ಕೆ ತೆರಳಿದ್ದ ರಘುವಂಶಿ ಮತ್ತು ಅವರ ಪತ್ನಿ ನಾಪತ್ತೆಯಾಗಿದ್ದರು. ಜೂನ್ 2ರಂದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು.
ರಾಜ್ ಮತ್ತು ಮೂವರು ಹಿಟ್ಮ್ಯಾನ್ಗಳಾದ ಆಕಾಶ್ ರಜಪೂತ್ (19), ವಿಶಾಲ್ ಸಿಂಗ್ ಚೌಹಾಣ್ (22) ಮತ್ತು ರಾಜ್ ಸಿಂಗ್ ಕುಶ್ವಾಹ (21) ಅವರನ್ನು ಯುಪಿ ಮತ್ತು ಮಧ್ಯಪ್ರದೇಶದ ವಿವಿಧ ಭಾಗಗಳಿಂದ ಬಂಧಿಸಲಾಗಿದೆ.
ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಾನ್ ಕಿಟ್ಬೋರ್ ಕೋಶಿ ಮಿಹ್ಸಿಲ್ ಅವರ ನ್ಯಾಯಾಲಯವು ಜೂನ್ 11 ರಂದು ಐದು ಆರೋಪಿಗಳಿಗೆ ಎಂಟು ದಿನಗಳ ಪೊಲೀಸ್ ಕಸ್ಟಡಿಯನ್ನು ನೀಡಿತ್ತು.
ಇದಕ್ಕೂ ಮುನ್ನ ಐವರು ಆರೋಪಿಗಳನ್ನು ಶಿಲ್ಲಾಂಗ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು