ಬೆಳಗಾವಿ: ಹಸಿವು, ತಾಯಿಯ ಕಷ್ಟ ನೋಡಲಾಗದೆ ಯುವಕನೊಬ್ಬ ಆತ್ಮಹತ್ಯೆಗೆ ಶರಣರಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಖಾನಾಪುರ ತಾಲ್ಲೂಕಿನ ನಂದಗಡ ಪೊಲೀಸ್ ಠಾಣೆಯಲ್ಲಿ ಬುಧವಾರ ನಡೆದ ಯುವಕನ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ ಎನ್ನಲಾಗಿದೆ.
ಮೂಲತಃ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ (30) ಆತ್ಮಹತ್ಯೆ ಮಾಡಿಕೊಂಡ ಯುವಕರಾಗಿದ್ದಾರೆ. ಜ.31ರಂದು ನಡೆದಿದ್ದ ಯುವಕನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿತ್ತು. ಈ ನಡುವೆ ಹೊಟ್ಟೆಗೆ ಅನ್ನವಿಲ್ಲದೇ ತಾಯಿಯನ್ನು ನೋಡಿಕೊಳ್ಳಲಾಗದೇ ಆ ವ್ಯಕ್ತಿ ಕೊನೆಯುಸಿರು ಎಳೆದಿದ್ದಾನೆ ಎನ್ನುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಕಳೆದ ವಾರ ತಾಯಿ–ಮಗ ಹುಬ್ಬಳ್ಳಿಯಿಂದ ರೈಲನ್ನೇರಿ ಗೋವಾ ರಾಜ್ಯಕ್ಕೆ ತೆರಳಿದ್ದರು. ಅಲ್ಲಿಯೂ ಕೆಲಸ ಸಿಗದ ಕಾರಣ ಜ.30ರಂದು ಮರಳಿ ಹುಬ್ಬಳ್ಳಿಯತ್ತ ಹೊರಟಿದ್ದರು. ಇವರ ಬಳಿ ಟಿಕೆಟ್ ಇಲ್ಲದ ಕಾರಣ ಪೊಲೀಸರು ಅಳ್ನಾವರ ನಿಲ್ದಾಣದಲ್ಲಿ ರೈಲಿನಿಂದ ಕೆಳಗಿಳಿಸಿದ್ದರಂತೆ. ಈ ನಡುವೆ ಅಳ್ನಾವರದಲ್ಲಿ ಕೆಲಸಕ್ಕಾಗಿ, ಊಟಕ್ಕಾಗಿ ಎಷ್ಟೇ ಅಲೆದರೂ ತುತ್ತು ಅನ್ನ ಸಿಗಲಿಲ್ಲ. ಹೆತ್ತ ತಾಯಿಗೆ ತುತ್ತು ಅನ್ನ ಹಾಕಲು ಆಗಲಿಲ್ಲ ಎಂದು ಭಾರವಾದ ಮನಸ್ಸಿನಿಂದ ಯುವಕ ದಿಕ್ಕು ತೋಚದೇ ಪರದಾಡಿದರು. ದುಃಖ ತಾಳದೇ ಲಿಂಗನಮಠ ಗ್ರಾಮದ ಬಳಿ ಮಾವಿನ ಮರಕ್ಕೆ ನೇಣು ಹಾಕಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜನ ತಾಯಿ ಶಾಂತಮ್ಮ ಅವರನ್ನು ಶುಕ್ರವಾರ ಖಾನಾಪುರದ ಸಾಮಾಜಿಕ ಕಾರ್ಯಕರ್ತರು ಬೆಳಗಾವಿಯ ಅನಾಥಾಶ್ರಮಕ್ಕೆ ಸ್ಥಳಾಂತರಿಸಿದ್ದಾರೆ.