Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರಪತಿಗಳ ಉಲ್ಲೇಖದ ಬಗ್ಗೆ ಇಂದು ಅಭಿಪ್ರಾಯ ನೀಡಲಿರುವ ಸುಪ್ರೀಂಕೋರ್ಟ್

20/11/2025 6:31 AM

BREAKING: ಧರ್ಮಸ್ಥಳ ಬುರುಡೆ ಕೇಸ್ : ಇಂದು `SIT’ಯಿಂದ ತಿಮರೋಡಿ, ಮಟ್ಟಣ್ಣನವರ್ ಸೇರಿ 6 ಜನರ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ.!

20/11/2025 6:31 AM

ಗಮನಿಸಿ : ನೀವು ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ? ಇಲ್ಲಿದೆ ಮಾಹಿತಿ

20/11/2025 6:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮೋದಿ’ಯವರ ಖಾಲಿ ಚೊಂಬು ‘ದೇವೇಗೌಡ’ರಿಗೆ ‘ಅಕ್ಷಯ ಪಾತ್ರೆ’ಯಂತೆ ಕಾಣಿಸಿದ್ದು ಹೇಗೆ: CM ಸಿದ್ದರಾಮಯ್ಯ ಪ್ರಶ್ನೆ
KARNATAKA

‘ಮೋದಿ’ಯವರ ಖಾಲಿ ಚೊಂಬು ‘ದೇವೇಗೌಡ’ರಿಗೆ ‘ಅಕ್ಷಯ ಪಾತ್ರೆ’ಯಂತೆ ಕಾಣಿಸಿದ್ದು ಹೇಗೆ: CM ಸಿದ್ದರಾಮಯ್ಯ ಪ್ರಶ್ನೆ

By kannadanewsnow0921/04/2024 2:29 PM

ಕೋಲಾರ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ. ಜಿಎಸ್ಟಿ ಪಾವತಿಯ ಹಣವನ್ನು ನೀಡಿಲ್ಲ. ಇದಕ್ಕಾಗೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಟ್ಟಿದೆ ಅಂತ ಹೇಳ್ತಿದ್ದೇವೆ. ಆದ್ರೇ ಮೋದಿಯವರ ಖಾಲಿ ಚೊಂಬು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಗೆ ಮಾತ್ರ ಅಕ್ಷಯ ಪಾತ್ರೆಯಂತೆ ಕಾಣಿಸಿದೆ. ಅದು ಹೇಗೆ ಅಂತ ಸಿಎಂ ಸಿದ್ಧರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕೋಲಾರ (ಬಂಗಾರಪೇಟೆ) ಯ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಭಾಷಣದ ಮಾಡಿದಂತ ಅವರು, ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ ಎಂದರು.

ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಸಿಎಂ ಪ್ರಶ್ನಿಸಿದರು

ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ? ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ? ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಅಲ್ವಾ ದೇವೇಗೌಡರೇ ಎಂದು ಸಿ.ಎಂ ಪ್ರಶ್ನಿಸಿದರು

ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15 ನೇ ಹಣಕಾಸು ಆಯೋಗದಲ್ಲಿ‌ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದರು.

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ. ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆ. ಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ಸಿ.ಎಂ ಕರೆ ನೀಡಿದರು

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೌತಮ್ ಗೆಲುವು ನಿಶ್ಚಿತವಾಗಿದೆ. ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಬಹುಮತ ನೀಡಿ ಶಾಸಕ ನಾರಾಯಣಸ್ವಾಮಿಯವರಿಗೆ ಹೆಚ್ಚಿನ ಶಕ್ತಿ ನೀಡಿ ಎಂದರು.

ರೋಡ್ ಶೋ ನಲ್ಲಿ ಚೊಂಬಿನ ಸದ್ದು

ಬಂಗಾರಪೇಟೆಯಲ್ಲಿ ಸಾರ್ವಜನಿಕ ರೋಡ್ ಶೋ ನಲ್ಲಿ ಕೇಂದ್ರ ಸರ್ಕಾರದ ಖಾಲಿ ಚೊಂಬು ಜೋರು ಸದ್ದು ಮಾಡಿತು. ಮುಖ್ಯಮಂತ್ರಿಗಳು ಸಾರ್ವಜನಿಕರಿಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಜನತೆ ಚೊಂಬು ಚೊಂಬು ಎಂದು ಕೂಗಿದರು.

ಮೋದಿಯವರು ನಿಮ್ಮ ಅಕೌಂಟಿಗೆ 15 ಲಕ್ಷ ಹಾಕ್ತೀನಿ ಎಂದಿದ್ದರಲ್ಲಾ , ಎಷ್ಟು ಹಣ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು

ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದಿದ್ದರಲ್ಲಾ , ಎಷ್ಟು ಜನರಿಗೆ ನೇಮಕಾತಿ ಆದೇಶ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು

ಮೋದಿಯವರು ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರಲ್ಲಾ , ಎಷ್ಟು ರೈತರಿಗೆ ದುಪ್ಪಟ್ಟು ಹಣ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು. ಹೀಗಾಗಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಕೈಗೆ ಅವರ ಖಾಲಿಚೊಂಬನ್ನು ಅವರಿಗೇ ವಾಪಾಸ್ ಕೊಡಿ ಎಂದು ಕರೆ ನೀಡಿದರು.

ಕೋಲಾರದಲ್ಲಿ ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಪಾರ್ಕ್, ಟೌನ್ ಶಿಪ್ ಮಾಡುವ ಬೇಡಿಕೆ ಇದೆ. ಈ ಬಗ್ಗೆ ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

‘ನನ್ನ ಜೊತೆ ಮಾತಾಡಲ್ಲ ಅಂದಳು ಅದಕ್ಕೆ ಚಾಕು ಇರಿದೆ’ : ಸಿಬ್ಬಂದಿ ಎದುರು ಬಾಯಿಬಿಟ್ಟ ಆರೋಪಿ ಫಯಾಜ್

ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!

Share. Facebook Twitter LinkedIn WhatsApp Email

Related Posts

BREAKING: ಧರ್ಮಸ್ಥಳ ಬುರುಡೆ ಕೇಸ್ : ಇಂದು `SIT’ಯಿಂದ ತಿಮರೋಡಿ, ಮಟ್ಟಣ್ಣನವರ್ ಸೇರಿ 6 ಜನರ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ.!

20/11/2025 6:31 AM1 Min Read

ಗಮನಿಸಿ : ನೀವು ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ? ಇಲ್ಲಿದೆ ಮಾಹಿತಿ

20/11/2025 6:30 AM2 Mins Read

GOOD NEWS : ರಾಜ್ಯದ `ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಫೆಬ್ರವರಿಗೆ ‘ಇಂದಿರಾ ಕಿಟ್’ ಯೋಜನೆ ಜಾರಿ.!

20/11/2025 6:28 AM1 Min Read
Recent News

ರಾಷ್ಟ್ರಪತಿಗಳ ಉಲ್ಲೇಖದ ಬಗ್ಗೆ ಇಂದು ಅಭಿಪ್ರಾಯ ನೀಡಲಿರುವ ಸುಪ್ರೀಂಕೋರ್ಟ್

20/11/2025 6:31 AM

BREAKING: ಧರ್ಮಸ್ಥಳ ಬುರುಡೆ ಕೇಸ್ : ಇಂದು `SIT’ಯಿಂದ ತಿಮರೋಡಿ, ಮಟ್ಟಣ್ಣನವರ್ ಸೇರಿ 6 ಜನರ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ.!

20/11/2025 6:31 AM

ಗಮನಿಸಿ : ನೀವು ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ? ಇಲ್ಲಿದೆ ಮಾಹಿತಿ

20/11/2025 6:30 AM

GOOD NEWS : ರಾಜ್ಯದ `ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಫೆಬ್ರವರಿಗೆ ‘ಇಂದಿರಾ ಕಿಟ್’ ಯೋಜನೆ ಜಾರಿ.!

20/11/2025 6:28 AM
State News
KARNATAKA

BREAKING: ಧರ್ಮಸ್ಥಳ ಬುರುಡೆ ಕೇಸ್ : ಇಂದು `SIT’ಯಿಂದ ತಿಮರೋಡಿ, ಮಟ್ಟಣ್ಣನವರ್ ಸೇರಿ 6 ಜನರ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ.!

By kannadanewsnow5720/11/2025 6:31 AM KARNATAKA 1 Min Read

ಬೆಂಗಳೂರು: ಇಂದು ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷಡ್ಯಂತ್ರ ರೂಪಿಸಿದವರ ವಿರುದ್ಧ ತನಿಖೆ ನಡೆಸುತ್ತಿರುವಂತ ವಿಶೇಷ ತನಿಖಾ ತಂಡ(SIT) ಚಾರ್ಜ್…

ಗಮನಿಸಿ : ನೀವು ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ? ಇಲ್ಲಿದೆ ಮಾಹಿತಿ

20/11/2025 6:30 AM

GOOD NEWS : ರಾಜ್ಯದ `ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಫೆಬ್ರವರಿಗೆ ‘ಇಂದಿರಾ ಕಿಟ್’ ಯೋಜನೆ ಜಾರಿ.!

20/11/2025 6:28 AM

BIG NEWS : ರಾಜ್ಯದಲ್ಲಿ ಇನ್ಮುಂದೆ ಹಾವು ಕಡಿತಕ್ಕೆ `ಕ್ಯಾಶ್ ಲೆಸ್’ ಚಿಕಿತ್ಸೆ : ಸರ್ಕಾರದಿಂದ ಮಹತ್ವದ ಆದೇಶ

20/11/2025 6:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.