Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಸನ ಗಣೇಶ ಮೆರವಣಿಗೆ ದುರಂತ: 20 ಲಕ್ಷ ಪರಿಹಾರಕ್ಕೆ ಜೆಡಿಎಸ್ ಆಗ್ರಹ

13/09/2025 4:15 PM

ICC Women’s World Cup 2025 : ಭಾರತದಲ್ಲಿ ‘ಮಹಿಳಾ ವಿಶ್ವಕಪ್’ ಆಯೋಜನೆ ; ‘ಪಂದ್ಯ’ ನಡೆಯುವ ಸ್ಥಳಗಳ ಪಟ್ಟಿ ಇಲ್ಲಿದೆ!

13/09/2025 4:12 PM

2 ವರ್ಷ 3 ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ವೆಚ್ಚ: ಸಿಎಂ ಸಿದ್ಧರಾಮಯ್ಯ

13/09/2025 4:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ HPV ಲಸಿಕೆ: ಸಚಿವ ದಿನೇಶ್ ಗುಂಡೂರಾವ್
KARNATAKA

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ HPV ಲಸಿಕೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0927/03/2025 7:14 PM

ಬೆಂಗಳೂರು: ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟಲು ʼಎಚ್‌ಪಿವಿʼ ಲಸಿಕೆ ಸಹಕಾರಿಯಾಗಿದೆ. ಪ್ರಥಮ ಹಂತದಲ್ಲಿ ಗಣಿಬಾಧಿತ ಪ್ರದೇಶ ಮತ್ತು ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣು ಮಕ್ಕಳಿಗೆ ಈ ಲಸಿಕೆ ವಿತರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್  ಅವರು ತಿಳಿಸಿದ್ದಾರೆ.

ಆರೋಗ್ಯ ಸೇವೆಗಳನ್ನ ಬಡ ವರ್ಗದ ಜನರ ಬಳಿಗೆ ತರುವಲ್ಲಿ ಉಚಿತ ಆರೋಗ್ಯ ತಪಾಸಣಾ ಮೇಳಗಳು ಯಶಸ್ವಿಯಾಗುತ್ತಿವೆ. ದೊಡ್ಡ ಮಟ್ಟದ ಆರೋಗ್ಯ ಮೇಳಗಳನ್ನು ಗ್ರಾಮೀಣ ಪ್ತದೇಶದ ಜನರಿಗೆ ಅನುಕೂಲಪಡಿಸಲು ತಾಲೂಕುಗಳಲ್ಲಿ ನಡೆಸಲಾಗುತ್ತಿದೆ. ಕೊಳ್ಳೆಗಾಲ, ಮಾನ್ವಿ ಬಳಿಕ ಇದೀಗ ಸವದತ್ತಿಯಲ್ಲೂ ಆರೋಗ್ಯ ಮೇಳ ಯಶಸ್ವಿಯಾಗಿದೆ ಎಂದರು.‌

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನ ನೀಡುವುದರ ಜೊತೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಈ ಬಾರಿಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಿದ್ದಾರೆ. ಅಥಣಿಗೆ 50 ಹಾಸಿಗೆಯ ತಾಯಿ ಮಕ್ಕಳ‌ ಆಸ್ಪತ್ರೆ ನೀಡಿದ್ದೇವೆ. ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸುಧಾರಣೆ ತರುವತ್ತ ಸತತವಾಗಿ ಪ್ರಯತ್ನಿಸಲಾಗುತ್ತಿದೆ. ಬಡ ಜನರ ಪರ ಕಾಂಗ್ರೆಸ್ ಸರ್ಕಾರ ಪ್ರಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.‌

ಹಳ್ಳಿಗಾಡಿನ ಜನರು ಬಡವರು ತಮ್ಮ ಆರೋಗ್ಯ ತಪಾಸಣೆ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಬಾರದು.. ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳ ವಿಚಾರದಲ್ಲಿ ನಮ್ಮ ಜನರು ಎಚ್ಚರಿಕೆ ವಹಿಸುವ ಅಗತ್ಯತೆ ಇದೆ. ಆರಂಭಿಕ ಹಂತದಲ್ಲಿ ಈ ಕಾಯಿಲೆಗಳನ್ನ ಪತ್ತೆ ಹಚ್ಚಿದರೆ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ಅಲ್ಲದೇ ಮುಂದೆ ಈ ಕಾಯಿಲೆಗಳಿಂದ ಎದುರಾಗುವ ಆಪತ್ತುಗಳಿಂದ ಬಡ ಜನರನ್ನ ಪಾರು ಮಾಡಬಹುದಾಗಿದೆ. ಹೀಗಾಗಿಯೇ ನಮ್ಮ ಕಾಂಗ್ರೆಸ್ ಸರ್ಕಾರ ಗೃಹ ಆರೋಗ್ಯ ಯೋಜನೆ ಜಾರಿಗೆ ತಂದಿದೆ. 30 ವರ್ಷ ಮೇಲ್ಪಟ್ಟ ರಾಜ್ಯದ ಎಲ್ಲ ಜನರನ್ನು ತಪಾಸಣೆಗೆ ಒಳಪಡಿಸಿ, ಉಚಿತವಾಗಿ ಔಷಧಿಗಳನ್ನ ಜನರ ಬಳಿಗೆ ಒದಗಿಸುವ ಯೋಜನೆ ಇದಾಗಿದೆ.

ಈಗಾಗಲೇ ಗೃಹ ಆರೋಗ್ಯ ಯೋಜನೆಯನ್ನ ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ. ನಮ್ಮ ಜನರು ಯೋಜನೆಯ ಲಾಭ ಪಡೆದುಕೊಳ್ಳಬೇಕು. ಜನರ ಮನೆ ಬಾಗಿಲಿಗೆ ಆರೋಗ್ಯ ಸಿಬ್ಬಂದಿಗಳು ಭೇಟಿ ನೀಡಿ, ರಕ್ತದೊತ್ತಡ, ಮಧುಮೇಹ ಕ್ಯಾನ್ಸರ್ ಸೇರಿದಂತೆ ಮಾನಸಿಕ ಕಾಯಿಲೆಗಳ ಬಗ್ಗೆ ತಪಾಸಣೆ ನಡೆಸಲಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಗೃಹ ಆರೋಗ್ಯ ಯೋಜನೆ ದೊಡ್ಡ ಬದಲಾವಣೆಯನ್ನ ತರುವ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟಲು ʼಎಚ್‌ಪಿವಿʼ ಲಸಿಕೆ ಸಹಕಾರಿಯಾಗಿದೆ. ಪ್ರಥಮ ಹಂತದಲ್ಲಿ ಗಣಿಬಾಧಿತ ಪ್ರದೇಶ ಮತ್ತು ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣು ಮಕ್ಕಳಿಗೆ ಈ ಲಸಿಕೆ ವಿತರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವರಾದ @dineshgrao ಅವರು ತಿಳಿಸಿದ್ದಾರೆ. #CervicalCancerPrevention… pic.twitter.com/my2Z2r4wsp

— DIPR Karnataka (@KarnatakaVarthe) March 27, 2025

BREAKING NEWS: ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ: ಐವರು ಯೋಧರಿಗೆ ಗಾಯ

ಶಿವಮೊಗ್ಗ: ಕರವೇ ಶಿವರಾಮೇಗೌಡ ಬಣದ ಜಿಲ್ಲಾ, ತಾಲ್ಲೂಕು ಘಟಕದ ಅಧ್ಯಕ್ಷ ಸೇರಿ ಎಲ್ಲಾ ಪದಾಧಿಕಾರಿಗಳು ವಜಾ

Share. Facebook Twitter LinkedIn WhatsApp Email

Related Posts

ಹಾಸನ ಗಣೇಶ ಮೆರವಣಿಗೆ ದುರಂತ: 20 ಲಕ್ಷ ಪರಿಹಾರಕ್ಕೆ ಜೆಡಿಎಸ್ ಆಗ್ರಹ

13/09/2025 4:15 PM1 Min Read

2 ವರ್ಷ 3 ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ವೆಚ್ಚ: ಸಿಎಂ ಸಿದ್ಧರಾಮಯ್ಯ

13/09/2025 4:11 PM3 Mins Read

ರಾಜ್ಯದಲ್ಲಿ ‘ಸೈಬರ್ ಕ್ರೈಂ’ ಕಡಿವಾಣಕ್ಕೆ ಸರ್ಕಾರ ದಿಟ್ಟಕ್ರಮ: ದೇಶದಲ್ಲೇ ಮೊದಲ ‘ಸೈಬರ್ ಕಮಾಂಡ್ ಸೆಂಟರ್’ ಸ್ಥಾಪನೆ

13/09/2025 3:52 PM1 Min Read
Recent News

ಹಾಸನ ಗಣೇಶ ಮೆರವಣಿಗೆ ದುರಂತ: 20 ಲಕ್ಷ ಪರಿಹಾರಕ್ಕೆ ಜೆಡಿಎಸ್ ಆಗ್ರಹ

13/09/2025 4:15 PM

ICC Women’s World Cup 2025 : ಭಾರತದಲ್ಲಿ ‘ಮಹಿಳಾ ವಿಶ್ವಕಪ್’ ಆಯೋಜನೆ ; ‘ಪಂದ್ಯ’ ನಡೆಯುವ ಸ್ಥಳಗಳ ಪಟ್ಟಿ ಇಲ್ಲಿದೆ!

13/09/2025 4:12 PM

2 ವರ್ಷ 3 ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ವೆಚ್ಚ: ಸಿಎಂ ಸಿದ್ಧರಾಮಯ್ಯ

13/09/2025 4:11 PM

ನಿಮ್ಮ ಬಳಿ ಈ 100 ರೂಪಾಯಿ ನೋಟು ಇದ್ದರೆ, ಸಿಗಲಿದೆ 21 ಲಕ್ಷ ರೂ.! ಹೇಗೆ ಗೊತ್ತಾ?

13/09/2025 4:04 PM
State News
KARNATAKA

ಹಾಸನ ಗಣೇಶ ಮೆರವಣಿಗೆ ದುರಂತ: 20 ಲಕ್ಷ ಪರಿಹಾರಕ್ಕೆ ಜೆಡಿಎಸ್ ಆಗ್ರಹ

By kannadanewsnow0913/09/2025 4:15 PM KARNATAKA 1 Min Read

ಬೆಂಗಳೂರು: ಮುಖ್ಯಮಂತ್ರಿಗಳೇ ತಾವು ಮಾನವೀಯತೆ, ಹೃದಯ ವೈಶಾಲ್ಯತೆ ತೋರಿ ಮೃತರ ಕುಟುಂಬದರವರಿಗೆ ತಲಾ 20 ಲಕ್ಷ ರೂ. ಪರಿಹಾರ ಕೊಡಬೇಕು…

2 ವರ್ಷ 3 ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ವೆಚ್ಚ: ಸಿಎಂ ಸಿದ್ಧರಾಮಯ್ಯ

13/09/2025 4:11 PM

ರಾಜ್ಯದಲ್ಲಿ ‘ಸೈಬರ್ ಕ್ರೈಂ’ ಕಡಿವಾಣಕ್ಕೆ ಸರ್ಕಾರ ದಿಟ್ಟಕ್ರಮ: ದೇಶದಲ್ಲೇ ಮೊದಲ ‘ಸೈಬರ್ ಕಮಾಂಡ್ ಸೆಂಟರ್’ ಸ್ಥಾಪನೆ

13/09/2025 3:52 PM

ಕರ್ನಾಟಕದಲ್ಲಿ 882 ಕೋಟಿ ವೆಚ್ಚದಲ್ಲಿ ಜಪಾನಿನ ಹೊಸೊಡಾದ ಸೌರಕೋಶ ಘಟಕ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ

13/09/2025 3:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.