ಹುಬ್ಬಳ್ಳಿ : ಇತ್ತೀಚಿಗೆ ಕಾರ್ಮಿಕರ ಮಕ್ಕಳಿಗೆ ನೀಡಬೇಕಾಗಿದ್ದ ಲ್ಯಾಪ್ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು ಇದುವರೆಗೂ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ 6 ಸಿಬ್ಬಂದಿಗಳು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯ ಲ್ಯಾಪ್ಟಾಪ್ ಕಳ್ಳತನ ಕೇಸ್ ಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾರ್ಮಿಕ ಇಲಾಖೆಯ 101 ಲ್ಯಾಪ್ಟಾಪ್ ಕಳ್ಳತನವಾಗಿದೆ. ಇಲಾಖೆಯ ಅಸಿಸ್ಟೆಂಟ್ ಕಮಿಷನರ್ ಈ ಸಂಬಂಧ ದೂರು ನೀಡಿದ್ದರು. ಬೆಳಗಾವಿಯಿಂದ ತಂದು ಇಲಾಖೆಯ ಕಚೇರಿಯಲ್ಲಿ ಇಟ್ಟಿದ್ದರು. ಅಲ್ಲಿಯೇ ಕೆಲಸ ಮಾಡುವ ದೀಪಕ್ ಮತ್ತು ಕೃಷ್ಣ ಎನ್ನುವವರು ಕಳವು ಮಾಡಿದ್ದಾರೆ.
ಇಬ್ಬರು SDA ಹಾಗೂ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನಾಲ್ವರು ಸಿಬ್ಬಂದಿ ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಮೊದಲಿಗೆ ನಾಲ್ಕು ಲ್ಯಾಪ್ಟಾಪ್ಗಳನ್ನು ಮಾರಾಟ ಮಾಡಿದ್ದಾರೆ.ಆರು ಇಲಾಖೆ ಸಿಬ್ಬಂದಿ ಸೇರಿ ಒಟ್ಟು 26 ಜನರನ್ನು ಒಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು.