Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಕೇಸ್: 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು

10/10/2025 7:05 PM

ಮಂಡ್ಯ: ಅ.13ರಂದು ಮದ್ದೂರಿನಲ್ಲಿ ಬೃಹತ್ ಉದ್ಯೋಗ ಮೇಳ – ಎಸ್.ಎಂ.ಗಂಗಾಧರ್

10/10/2025 6:51 PM

ಮುಂದಿನ 5 ವರ್ಷಗಳಲ್ಲಿ ‘ಟೈಡ್’ನಿಂದ ಭಾರತದಲ್ಲಿ 6,000 ಕೋಟಿ ರೂ. ಹೂಡಿಕೆ, 800 ಉದ್ಯೋಗ ಸೃಷ್ಟಿ

10/10/2025 6:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ: ಅ.13ರಂದು ಮದ್ದೂರಿನಲ್ಲಿ ಬೃಹತ್ ಉದ್ಯೋಗ ಮೇಳ – ಎಸ್.ಎಂ.ಗಂಗಾಧರ್
KARNATAKA

ಮಂಡ್ಯ: ಅ.13ರಂದು ಮದ್ದೂರಿನಲ್ಲಿ ಬೃಹತ್ ಉದ್ಯೋಗ ಮೇಳ – ಎಸ್.ಎಂ.ಗಂಗಾಧರ್

By kannadanewsnow0910/10/2025 6:51 PM

ಮಂಡ್ಯ : ಶರಣರ ಸಂಘಟನಾ ವೇದಿಕೆ ( ಮದ್ದೂರು ಘಟಕ ) ಹಾಗೂ ಉದ್ಯೋಗ ವಿನಿಮಯ ಕಛೇರಿ ಮಂಡ್ಯ ಅವರ ಸಹಯೋಗದೊಂದಿಗೆ ಅ.13 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶರಣರ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಂ.ಗಂಗಾಧರ್ ಹೇಳಿದರು‌.

ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅ.13 ಸೋಮವಾರದಂದು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮದ್ದೂರು ಕ್ಷೇತ್ರದ ಶಾಸಕರಾದ ಕೆ.ಎಂ.ಉದಯ್ ಅವರು ಉದ್ಘಾಟಿಸಲಿದ್ದಾರೆ ಎಂದರು.

ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ, ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಟರಾಜ್, ರೈತ ಮುಖಂಡ ಅಣ್ಣೂರು ಮಹೇಂದ್ರ, ನೈದಿಲೆ ಚಂದ್ರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ನೀಡುವುದಕ್ಕಾಗಿ ರಾಜ್ಯದ 30 ಕ್ಕೂ ಹೆಚ್ಚಿನ ಪ್ರತಿಷ್ಟಿತ ಕಂಪನಿಗಳು ಮೇಳದಲ್ಲಿ ಭಾಗವಹಿಸುತ್ತಿವೆ. ಡಿಪ್ಲೋಮಾ, ಐಟಿಐ, ಸ್ನಾತಕೋತ್ತರ, ಎಂಬಿಎ, ಎಂಜಿನಿಯರಿಂಗ್, ಇನ್ನಿತರ ಪದವೀಧರ ಉದ್ಯೋಗಾಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ಐಟಿ, ಬಿಟಿ, ಆಟೋಮೊಬೈಲ್, ಫಾರ್ಮಸಿ, ಇನ್ಸೂರೆನ್ಸ್, ಬ್ಯಾಂಕಿಂಗ್, ಹೋಟೆಲ್ ಮ್ಯಾನೇಜ್‌ಮೆಂಟ್, ಎಲೆಕ್ಟ್ರಿಕಲ್ಸ್, ಫಿಟ್ಟರ್, ನರ್ಸಿಂಗ್ ಸೇರಿದಂತೆ ಹಲವಾರು ಕ್ಷೇತ್ರಗಳ ಉದ್ಯೋಗಾವಕಾಶಗಳಿಗೆ ಈ ಮೇಳದಲ್ಲಿ ಆಯ್ಕೆ ನಡೆಯಲಿದ್ದು, ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ರೆಸ್ಯೂಮ್ ( ವೈಯುಕ್ತಿಕ ವಿವರ ಪತ್ರ )ಗಳನ್ನು ತರತಕ್ಕದ್ದು. ಅಭ್ಯರ್ಥಿಗಳು ಬಯಸಿದ ಕಂಪನಿಗೆ ಸಂದರ್ಶನ ನೀಡಲು ಅವಕಾಶವಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅದೇ ದಿನ ಕಂಪನಿಗಳು ನೇಮಕಾತಿ ಪತ್ರ ನೀಡಲಿವೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ, ಪದವಿಪೂರ್ವ ಕಾಲೇಜಿನ ಮತ್ತು ಪದವಿ ಕಾಲೇಜಿನ ಅಭ್ಯರ್ಥಿಗಳು ಭಾಗವಹಿಸಬಹುದು, ಅಲ್ಲದೆ ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಚಾರ ನೀಡಿ, ಉದ್ಯೋಗಾಕಾಂಕ್ಷಿಗಳಿಗೆ ಸಂದರ್ಶನಕ್ಕೆ ಬರುವಂತೆ ಮಾಡಬಹುದು ಎಂದು ಗಂಗಾಧರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ನಂದೀಶ್, ತಾಲೂಕು ಉಪಾಧ್ಯಕ್ಷ ಭೀಮನಕೆರೆ ಬಸವರಾಜ್, ನಗರ ಘಟಕ ಅಧ್ಯಕ್ಷ ಪರಮೇಶ್, ನಗರ ಮಹಿಳಾ ಘಟಕ ಅಧ್ಯಕ್ಷೆ ರಶ್ಮಿ ಗಿರೀಶ್, ಜಯ ಕರ್ನಾಟಕ ತಾ.ಅಧ್ಯಕ್ಷ ಹೆಚ್.ಎಸ್.ನಾಗೇಶ್, ಸಂಚಾಲಕ ಗಿರೀಶ್, ಕಲ್ಲೇಶ್ ಕುಮಾರ್ ಹಾಗೂ ಪದಾಧಿಕಾರಿಗಳು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Good News: ಕಿದ್ವಾಯಿ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಯೋಜನೆ: ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರಲ್ಲಿ ‘ರಸ್ತೆ ಗುಂಡಿ’ ಹೆಚ್ಚಾಗೋದಕ್ಕೆ ಇದೇ ಕಾರಣವೆಂದ ‘ಸಚಿವ ಪ್ರಿಯಾಂಕ್ ಖರ್ಗೆ’

Share. Facebook Twitter LinkedIn WhatsApp Email

Related Posts

BREAKING: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಕೇಸ್: 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು

10/10/2025 7:05 PM1 Min Read

Good News: ಕಿದ್ವಾಯಿ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಯೋಜನೆ: ಸಚಿವ ಶರಣಪ್ರಕಾಶ್ ಪಾಟೀಲ್

10/10/2025 5:56 PM1 Min Read

ಬೆಂಗಳೂರಲ್ಲಿ ‘ರಸ್ತೆ ಗುಂಡಿ’ ಹೆಚ್ಚಾಗೋದಕ್ಕೆ ಇದೇ ಕಾರಣವೆಂದ ‘ಸಚಿವ ಪ್ರಿಯಾಂಕ್ ಖರ್ಗೆ’

10/10/2025 5:49 PM1 Min Read
Recent News

BREAKING: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಕೇಸ್: 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು

10/10/2025 7:05 PM

ಮಂಡ್ಯ: ಅ.13ರಂದು ಮದ್ದೂರಿನಲ್ಲಿ ಬೃಹತ್ ಉದ್ಯೋಗ ಮೇಳ – ಎಸ್.ಎಂ.ಗಂಗಾಧರ್

10/10/2025 6:51 PM

ಮುಂದಿನ 5 ವರ್ಷಗಳಲ್ಲಿ ‘ಟೈಡ್’ನಿಂದ ಭಾರತದಲ್ಲಿ 6,000 ಕೋಟಿ ರೂ. ಹೂಡಿಕೆ, 800 ಉದ್ಯೋಗ ಸೃಷ್ಟಿ

10/10/2025 6:26 PM

Good News: ಕಿದ್ವಾಯಿ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಯೋಜನೆ: ಸಚಿವ ಶರಣಪ್ರಕಾಶ್ ಪಾಟೀಲ್

10/10/2025 5:56 PM
State News
KARNATAKA

BREAKING: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಕೇಸ್: 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು

By kannadanewsnow0910/10/2025 7:05 PM KARNATAKA 1 Min Read

ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಕೇಸಲ್ಲಿ ಜಾಮೀನು ಕೋರಿ…

ಮಂಡ್ಯ: ಅ.13ರಂದು ಮದ್ದೂರಿನಲ್ಲಿ ಬೃಹತ್ ಉದ್ಯೋಗ ಮೇಳ – ಎಸ್.ಎಂ.ಗಂಗಾಧರ್

10/10/2025 6:51 PM

Good News: ಕಿದ್ವಾಯಿ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಯೋಜನೆ: ಸಚಿವ ಶರಣಪ್ರಕಾಶ್ ಪಾಟೀಲ್

10/10/2025 5:56 PM

ಬೆಂಗಳೂರಲ್ಲಿ ‘ರಸ್ತೆ ಗುಂಡಿ’ ಹೆಚ್ಚಾಗೋದಕ್ಕೆ ಇದೇ ಕಾರಣವೆಂದ ‘ಸಚಿವ ಪ್ರಿಯಾಂಕ್ ಖರ್ಗೆ’

10/10/2025 5:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.