Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಬಡವಾಳ ಹೂಡಿಕೆ ಆಕರ್ಷಣೆ ಸಭೆ’ಯ ಪ್ರಮುಖ ಹೈಲೈಟ್ಸ್

24/10/2025 4:46 PM

ನನಗೂ ಸಚಿವನಾಗಬೇಕೆಂಬ ಆಸೆ ಇದೆ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

24/10/2025 4:35 PM

BREAKING : ಅಫ್ಘಾನಿಸ್ತಾನದಲ್ಲಿ 3.7 ತೀವ್ರತೆಯ ಭೂಕಂಪ, ಒಂದೇ ತಿಂಗಳಲ್ಲಿ ನಾಲ್ಕು ಬಾರಿ ಭೂಕಂಪ |Earthquake

24/10/2025 4:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನಗೂ ಸಚಿವನಾಗಬೇಕೆಂಬ ಆಸೆ ಇದೆ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು
KARNATAKA

ನನಗೂ ಸಚಿವನಾಗಬೇಕೆಂಬ ಆಸೆ ಇದೆ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0924/10/2025 4:35 PM

ಶಿವಮೊಗ್ಗ: ನನಗೂ ಸಚಿವನಾಗಬೇಕು ಎಂಬ ಆಸೆ ಇದೆ. ನಾನೇನು ರಾಜಕೀಯ ಸನ್ಯಾಸಿಯಲ್ಲ. ಆದರೇ ಹಾಗೆಂದ ಮಾತ್ರಕ್ಕೆ ನನಗೂ ಸಚಿವಸ್ಥಾನ ಕೊಟ್ಟು ಬಿಡ್ತಾರಾ? ಅದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವಾಗಿದೆ. ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಯತೀಂದ್ರ ಸಿದ್ಧರಾಮಯ್ಯನವರು ಸಿದ್ಧರಾಮಯ್ಯ ರಾಜಕೀಯದ ಅಂತಿಮ ಘಟ್ಟದಲ್ಲಿ ಇದ್ದಾರೆ ಎಂಬ ಹೇಳಿಕೆ ಯಾಕೆ ಕೊಟ್ಟಿದ್ದಾರೋ ಅಂತ ನನಗೆ ಗೊತ್ತಿಲ್ಲ. ಆದರೇ ನಮ್ಮಲ್ಲಿ ಮುಂದಿನ ಸಿಎಂ ಯಾರು ಎಂದು ಘೋಷಣೆ ಮಾಡೋದು ನಮ್ಮ ರಾಷ್ಟ್ರೀಯ ನಾಯಕರು. ನಮ್ಮ ಹೈಕಮಾಂಡ್ ಆದೇಶದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.

ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಹಾಗಂತ ಕೊಟ್ಟು ಬಿಡ್ತಾರಾ? ನಮ್ಮಲ್ಲಿ ಎಲ್ಲದಕ್ಕೂ ಕೇಂದ್ರದ ನಾಯಕರು ಸೂಚನೆ ಕೊಡಬೇಕು. ಅವರ ಸೂಚನೆಯಂತೆ ನಮ್ಮ ನಿರ್ಧಾರ ಇರುತ್ತದೆ. ನಾನು ಸಿಎಂ ಆಗಬೇಕು ಅಂತೀನಿ ಮಾಡಿ ಬಿಡ್ತಾರಾ? ಯಾರು ಯಾರು ಈ ರೀತಿ ಹೇಳಿಕೆ ನೀಡುತ್ತಿದ್ದಾರೋ ಅದೆಲ್ಲವೂ ವೈಯಕ್ತಿಕವಾದಂತ ಹೇಳಿಕೆಯಾಗಿವೆ. ಆ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ. ಕೇಂದ್ರದ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದರು.

ನಾನು ಯಾರ ಪರವಾಗಿಯೂ ಇಲ್ಲ. ನಾನು ಕಾಂಗ್ರೆಸ್ ಪಕ್ಷದ ಪರವಾಗಿದ್ದೇನೆ. ಯತೀಂದ್ರ ಅವರು ಯಾಕೆ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಅದನ್ನು ಅವರಿಗೆ ಕೇಳಬೇಕು. ಸಿದ್ಧರಾಮಯ್ಯ ಅವರು ಒಳ್ಳೆಯ ಆಡಳಿತ ನೀಡಿದ್ದಾರೆ. ಈಗ ಅವರ ಮಗನೇ ಯಾಕೆ ಈ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಅವರ ಮಗ ಹೇಳಿದ್ದು ನಡೆಯೋದಿಲ್ಲ. ನಮ್ಮ ಪಕ್ಷದ ವರಿಷ್ಠರ ತೀರ್ಮಾನ ನಡೆಯುತ್ತೆ ಎಂದರು.

ಸತೀಶ್ ಜಾರಕಿಹೊಳಿಯವರು ಈ ಹಿಂದಿನ ಚುನಾವಣೆಯಲ್ಲೇ ಹೇಳಿದ್ದರು. 2028ರ ಚುನಾವಣೆ ನನ್ನ ಸಾರಥ್ಯದಲ್ಲಿ ನಡೆಯಬೇಕೆಂದು ಆಗ ಹೇಳಿದ್ದರು. ಆದರೇ ಕೇಂದ್ರದ ನಾಯಕರು ಹೇಳಿದ್ದು ಅಂತಿಮವಾಗುತ್ತದೆ. ಯಾರು ಯಾರೋ ಹೇಳಿದ್ದಕ್ಕೆ ನಮ್ಮಲ್ಲಿ ಬೆಲೆಯಿಲ್ಲ. ಅನೇಕ ಶಾಸಕರು ಅನೇಕ ಹೇಳಿಕೆ ನೀಡಿದ್ದಾರೆ. ಆದರೇ ಆ ಹೇಳಿಕೆಗಳು ಅವರ ವೈಯಕ್ತಿಕವಾದಂತ ಹೇಳಿಕೆಯಾಗಿವೆ. ಪಕ್ಷದ ನಾಯಕರ ನಿರ್ಧಾರಕ್ಕೆ ನಾವು ಜೈ ಎನ್ನುತ್ತೇವೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

‘ಶರಾವತಿ ಪಂಪ್ಡ್ ಸ್ಟೋರೇಜ್’ ನಿರ್ಮಾಣವು ‘ಬಿಜೆಪಿ ಸರ್ಕಾರ’ದ ತೀರ್ಮಾನ: ಶಾಸಕ ಗೋಪಾಲಕೃಷ್ಣ ಬೇಳೂರು

ಬೆಂಗಳೂರು ಜನತೆ ಗಮನಕ್ಕೆ : ನಾಳೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

Share. Facebook Twitter LinkedIn WhatsApp Email

Related Posts

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಬಡವಾಳ ಹೂಡಿಕೆ ಆಕರ್ಷಣೆ ಸಭೆ’ಯ ಪ್ರಮುಖ ಹೈಲೈಟ್ಸ್

24/10/2025 4:46 PM2 Mins Read

BIG NEWS : ನಿಮ್ಮ ಆಡಳಿತ ಸಾಮರ್ಥ್ಯದ ಸಾಬೀತಿಗೆ ಇದು ಸಕಾಲ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ

24/10/2025 4:29 PM2 Mins Read

‘ಶರಾವತಿ ಪಂಪ್ಡ್ ಸ್ಟೋರೇಜ್’ ನಿರ್ಮಾಣವು ‘ಬಿಜೆಪಿ ಸರ್ಕಾರ’ದ ತೀರ್ಮಾನ: ಶಾಸಕ ಗೋಪಾಲಕೃಷ್ಣ ಬೇಳೂರು

24/10/2025 4:24 PM1 Min Read
Recent News

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಬಡವಾಳ ಹೂಡಿಕೆ ಆಕರ್ಷಣೆ ಸಭೆ’ಯ ಪ್ರಮುಖ ಹೈಲೈಟ್ಸ್

24/10/2025 4:46 PM

ನನಗೂ ಸಚಿವನಾಗಬೇಕೆಂಬ ಆಸೆ ಇದೆ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

24/10/2025 4:35 PM

BREAKING : ಅಫ್ಘಾನಿಸ್ತಾನದಲ್ಲಿ 3.7 ತೀವ್ರತೆಯ ಭೂಕಂಪ, ಒಂದೇ ತಿಂಗಳಲ್ಲಿ ನಾಲ್ಕು ಬಾರಿ ಭೂಕಂಪ |Earthquake

24/10/2025 4:31 PM

BIG NEWS : ನಿಮ್ಮ ಆಡಳಿತ ಸಾಮರ್ಥ್ಯದ ಸಾಬೀತಿಗೆ ಇದು ಸಕಾಲ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ

24/10/2025 4:29 PM
State News
KARNATAKA

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಬಡವಾಳ ಹೂಡಿಕೆ ಆಕರ್ಷಣೆ ಸಭೆ’ಯ ಪ್ರಮುಖ ಹೈಲೈಟ್ಸ್

By kannadanewsnow0924/10/2025 4:46 PM KARNATAKA 2 Mins Read

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ನಡೆಯಿತು. ಈ ಸಭೆಯಲ್ಲಿ ನಿರ್ಣಯಗಳನ್ನು ಸಕಾಲದಲ್ಲಿ…

ನನಗೂ ಸಚಿವನಾಗಬೇಕೆಂಬ ಆಸೆ ಇದೆ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

24/10/2025 4:35 PM

BIG NEWS : ನಿಮ್ಮ ಆಡಳಿತ ಸಾಮರ್ಥ್ಯದ ಸಾಬೀತಿಗೆ ಇದು ಸಕಾಲ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ

24/10/2025 4:29 PM

‘ಶರಾವತಿ ಪಂಪ್ಡ್ ಸ್ಟೋರೇಜ್’ ನಿರ್ಮಾಣವು ‘ಬಿಜೆಪಿ ಸರ್ಕಾರ’ದ ತೀರ್ಮಾನ: ಶಾಸಕ ಗೋಪಾಲಕೃಷ್ಣ ಬೇಳೂರು

24/10/2025 4:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.