ತುಮಕೂರು : ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿಗಳಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಿಕೆಟ್ ನೀಡಿದ್ದು ನಾನು ಹಿಂದೂ ಧರ್ಮ ಸೇರಿದಂತೆ ಎಲ್ಲಾ ಧರ್ಮ ಹಾಗೂ ವರ್ಗಗಳನ್ನು ಪ್ರೀತಿಸುತ್ತೇನೆ ಎಂದು ತಿಳಿಸಿದರು.
ಈ ಕುರಿತಂತೆ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದೂ ವಿರೋಧಿ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಅವರಿಗೆ ನನ್ನ ಬಗ್ಗೆ ಮಾತನಾಡಲು ಯಾವುದೇ ವಿಚಾರಗಳು ಇಲ್ಲ. ಹಾಗಾಗಿ ಅವರು ನನ್ನನ್ನು ಹಿಂದೂ ವಿರೋಧಿ ಎಂದು ಕರೆಯುತ್ತಾರೆ ಎಂದರು.
ನಾನು ಹಿಂದೂ ಹಾಗೂ ಎಲ್ಲಾ ಧರ್ಮ ವರ್ಗದವರನ್ನು ಕೂಡ ನಾನು ಪ್ರೀತಿಸುತ್ತೇನೆ ಜಾತ್ಯಾತೀತ ಎಂದರೇನು,? ಸಂವಿಧಾನದಲ್ಲಿ ಏನು ಹೇಳಿದ್ದಾರೆ? ಸಹಬಾಳ್ವೆ ಸಹಿಷ್ಣುತೆಯಲ್ಲಿ ನಂಬಿಕೆ ಇಟ್ಟವನು ನಾನು ಎಂದು ಅವರು ಬಿಜೆಪಿಗೆ ತಿರುಗೇಟು ನೀಡಿದರು.
ತುಮಕೂರಿನ ಸರ್ಕಾರಿ ಬಸ್ ನಿಲ್ದಾಣದ ಮೊದಲ ಹಂತವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.
ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ಬಸ್ ನಿಲ್ದಾಣ ನಿರ್ಮಿಸಸಲಾಗಿತ್ತು. ಇದೀಗ ಮೊದಲ ಅಂತ ಲೋಕಾರ್ಪಣೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.
ಇದೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ್, ಸಚಿವರಾದ ರಾಮಲಿಂಗ ರೆಡ್ಡಿ, ಕೆ ಎನ್ ರಾಜಣ್ಣ, ಲಕ್ಷ್ಮಿ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ಜಯಚಂದ್ರ, ಷಡಕ್ಷರಿ ಸಾಥ್ ನೀಡಿದ್ದಾರೆ.ನಂತರ ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ಹಕ್ಕುಪತ್ರ ವಿತರಿಸಿದಸಿದರು.