ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ಚಿಗುರಿಯುತ್ತಿದೆ. ಅದರಲ್ಲಿ ರೌಡಿಶೀಟರ್‌ ಗಳು ಬಿಜೆಪಿ ಸೇರುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ವಿರುದ್ಧ ಲೇವಡಿ ಮಾಡಿದೆ.

‘ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗೆ’ : ಡಿಕೆಶಿಗೆ ಸಚಿವ ಆರಗ ಜ್ಞಾನೇಂದ್ರ ತಿರುಗೇಟು

 

ಇತ್ತೀಚೆಗೆ ಸಿ.ಟಿ ರವಿ ಮಾಜಿ ರೌಡಿಶೀಟರ್​​ ಎಂದು ಕೂಡ ಕಾಂಗ್ರೆಸ್​ ಟ್ವೀಟ್​​ ಮಾಡಿತ್ತು. ಸದ್ಯ ಈ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ರಾಜಕೀಯ ಕಾರಣಕ್ಕಾಗಿ ನನ್ನ ಮೇಲೆ ರೌಡಿಶೀಟರ್​ ಹಾಕಲಾಗಿತ್ತು. ನಾನು ಯಾವುದೇ ಗೂಂಡಾಗಿರಿ ಮಾಡಿರಲಿಲ್ಲ.

‘ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗೆ’ : ಡಿಕೆಶಿಗೆ ಸಚಿವ ಆರಗ ಜ್ಞಾನೇಂದ್ರ ತಿರುಗೇಟು

 

ನನ್ನ ಮೇಲೆ ಇರುವುದೆಲ್ಲಾ ಸಾರ್ವಜನಿಕ ಹೋರಾಟದ ಕೇಸ್​ಗಳು. ನಾನು ಕೊತ್ವಾಲ್ ರಾಮಚಂದ್ರ​​, ಜಯರಾಜ್​ನ ಶಿಷ್ಯನಲ್ಲ. ನಾನು ಅವರ ಶಿಷ್ಯ ಎಂದು ಹೇಳಿ ಹೆಮ್ಮೆಪಡುವ ರಾಜಕೀಯ ನೇತಾರನೂ ನಾನಲ್ಲ ಎಂದು ಸಿ.ಟಿ.ರವಿ ಕಾಂಗ್ರೆಸ್​ ಟ್ವೀಟ್ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ.
ಎಲ್ಲಾ ರೌಡಿಶೀಟರ್​ಗಳು ರೌಡಿಗಳಲ್ಲ ಅಂತಾ ಹೇಳಿದ್ದೆ. ರೌಡಿಶೀಟರ್​​ನಲ್ಲಿರೋ ಎಲ್ಲರಿಗೂ ಕ್ಲೀನ್ ಚಿಟ್ ನಾನು ಕೊಟ್ಟಿಲ್ಲ. ನಿಮ್ಮ ಪಕ್ಷದ ಆರ್.ವಿ ದೇವರಾಜ್, ಹರಿಪ್ರಸಾದ್ ಬಗ್ಗೆ ಕಾಂಗ್ರೆಸ್ ಅವಲೋಕನ ಮಾಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

Share.
Exit mobile version