Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ಇಂಟರ್ನೆಟ್ ಇಲ್ಲದೇ ಕಾರ್ಯ ನಿರ್ವಹಿಸುವ ಮೆಸೇಜಿಂಗ್ ಅಪ್ಲಿಕೇಶನ್ ‘ಬಿಟ್ಚಾಟ್’ ಬಿಡುಗಡೆ

08/07/2025 3:29 PM

BREAKING: ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

08/07/2025 3:15 PM

‘ರೆಸ್ಯೂಮ್’ನಲ್ಲಿ ಈ ಯುವಕ ಬಳಸಿದ ತಂತ್ರ ಬಳಸಿ, ಆಫರ್’ಗಳ ಸುರಿಮಳೆ ಸುರಿಯುತ್ತೆ!

08/07/2025 3:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ, ನಾನೇ ಮಂತ್ರಿ, ನಾನೇ ಡಿಸಿಎಂ: ಡಿ.ಕೆ. ಶಿವಕುಮಾರ್
KARNATAKA

ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ, ನಾನೇ ಮಂತ್ರಿ, ನಾನೇ ಡಿಸಿಎಂ: ಡಿ.ಕೆ. ಶಿವಕುಮಾರ್

By kannadanewsnow0901/07/2024 9:46 PM

ಚನ್ನಪಟ್ಟಣ : ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ” ಎಂದು ಹೇಳಿದರು.

ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿದಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು” ಎಂದರು.

“ಈ ಹಿಂದೆ ಇಂಧನ ಸಚಿವನಾಗಿದ್ದಾಗ ರೈತರಿಗೆ ಟ್ರಾನ್ಸ್ಫಾರ್ಮರ್ ಅಳವಡಿಕೆ ಮತ್ತು ನೀರಾವರಿ ಕೆಲಸಗಳನ್ನು ಮಾಡಿ ಅನುಕೂಲ ಮಾಡಿಕೊಡಲಾಗಿತ್ತು. ಕ್ಷೇತ್ರ ವಿಂಗಡಣೆಯಾಗಿ ನಾನು ಕನಕಪುರಕ್ಕೆ ಹೋದ ನಂತರ ಯಾರಾದರೂ ಶಾಸಕರು ಹೀಗೆ ಜನರ ಬಳಿಗೆ ಬಂದು ಕೆಲಸ ಮಾಡಿದ ಉದಾಹರಣೆಯೇ ಇಲ್ಲ. ದಳ, ಬಿಜೆಪಿ ಯಾವ ಪಕ್ಷದವರನ್ನು ಪ್ರಶ್ನೆ ಮಾಡಲು ಹೋಗುವುದಿಲ್ಲ” ಎಂದು ಹೇಳಿದರು.

ನಾನು ಯಾರ ಜೊತೆಗೂ ಸ್ಪರ್ಧಿಸಲು ಇಲ್ಲಿಗೆ ಬಂದಿಲ್ಲ ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಮತ ನೀಡಿದ್ದೀರಿ ಅದಕ್ಕಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ. 80 ಸಾವಿರ ಮತಗಳನ್ನು ನೀಡಿದ ನಿಮಗೆ ಕೋಟಿ ನಮಸ್ಕಾರಗಳು” ಎಂದು ತಿಳಿಸಿದರು.

4,419 ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ

5 ಜಿಲ್ಲಾ ಪಂಚಾಯತಿಗಳಲ್ಲಿ 4,419 ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಸುಮಾರು 1,996 ಜನ ಮನೆಯಿಲ್ಲ ಎಂದು ಅರ್ಜಿ ಸಲ್ಲಿಸಿದ್ದಾರೆ. 1,010 ಮಂದಿ ನಿವೇಶನವಿಲ್ಲ ಎಂದು ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರಿ ಜಮೀನು ಅಥವಾ ಖಾಸಗಿ ಜಮೀನು ಹುಡುಕಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ಕಾಡಾನೆಗಳ ಹಾವಳಿ ತಪ್ಪಿಸಲು ಬನ್ನೇರುಘಟ್ಟದಿಂದ ಇಲ್ಲಿಯವರೆಗೆ 180 ಕಿಮೀ ಉದ್ದ ಬ್ಯಾರಿಕೆಡ್ ಅನ್ನು ಸುರೇಶ್ ಅವರ ಶ್ರಮದಿಂದ ಹಾಕಲಾಗುತ್ತಿದೆ. ಟಾಸ್ಕ್ ಫೋರ್ಸ್ ಸಿದ್ಧವಾಗಿದೆ” ಎಂದು ತಿಳಿಸಿದರು.

“ಗ್ಯಾರಂಟಿಗಳಿಂದ ಅತ್ತೆ ಸೊಸೆ ಜಗಳ ಆಗುತ್ತದೆ ಎಂದು ಸುಳ್ಳು ಹೇಳಿದರು. ಆದರೆ ಗ್ಯಾರಂಟಿಗಳಿಂದ ನಿಮ್ಮ ಬದುಕು ಬದಲಾವಣೆಯಾಗಿದೆ. ಒಂದೇ ಒಂದು ರೂಪಾಯಿ ಲಂಚ ಕೊಡದೆ ಐದು ಭಾಗ್ಯಗಳನ್ನು ಪಡೆಯುತ್ತಾ ಇದ್ದೀರಿ. ಅದೇ ರೀತಿ ತಾಲ್ಲೂಕು ಕಚೇರಿಯಲ್ಲಿ ಒಂದೇ ಒಂದು ರೂಪಾಯಿ ಲಂಚ ಕೊಡದೆ ಸರ್ವೇ, ಪಹಣಿ, ಪೋಡಿ ಕೆಲಸ ಮಾಡಿಕೊಡಿಸುವ ಜವಾಬ್ದಾರಿ ನನ್ನದು” ಎಂದು ಭರವಸೆ ನೀಡಿದರು.

“ಡಿ. ಕೆ.ಸುರೇಶ್ ಅವರಿಗೆ ಮತ ಹಾಕಿಲ್ಲ ಎಂದು ಮುಜುಗರ ಮಾಡಿಕೊಳ್ಳ ಬೇಡಿ. ನೀವು ನಮ್ಮ ಜಿಲ್ಲೆಯ ಜನ ನಿಮ್ಮ ಸಮಸ್ಯೆಗಳು ಬಗೆಹರಿಯಬೇಕು. ಪ್ರತಿ ಪಂಚಾಯತಿ ವ್ಯಾಪ್ತಿಯಲ್ಲಿ ನಮ್ಮ ಟ್ರಸ್ಟ್ ಹುಡುಗರು ನಿಮ್ಮ ಸಹಾಯಕ್ಕೆ ಇರುತ್ತಾರೆ” ಎಂದು ಹೇಳಿದರು.

“ಯಾರು ಬರಲಿ ಹೋಗಲಿ ನಿಮ್ಮ ಸಹಾಯಕ್ಕೆ ನಾನು ತಯಾರಿದ್ದೇನೆ. ನನ್ನ ಕರ್ತವ್ಯ ಮರೆಯುವ ಪ್ರಶ್ನೆಯೇ ಇಲ್ಲ. ನನ್ನನ್ನು ಅತ್ಯಂತ ಚಿಕ್ಕ ವಯಸ್ಸಿಗೆ ಶಾಸಕನನ್ನಾಗಿ ಮಾಡಿದವರು ನೀವು. 1985 ರಿಂದ 2008 ರ ತನಕ ನಿಮ್ಮ ಸೇವೆ ಮಾಡಿದ್ದೇನೆ, ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇನೆ” ಎಂದರು.

ಕಾರ್ಯಕ್ರಮಕ್ಕೆ ಮುಂಚಿತವಾಗಿ ಗರಕನಹಳ್ಳಿ ಏತ ನೀರಾವರಿ ಯೋಜನೆಯ ಉನ್ನತೀಕರಣ ಮತ್ತು ಕೋಡಂಬಳ್ಳಿ ಏರು ಕೊಳವೆ ಶಾಖೆಯ ಸಾಮರ್ಥ್ಯ ವೃದ್ಧಿಗಾಗಿ 40 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.

ಜನರ ಮನವಿಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ ಅವರು
ಕಾರ್ಯಕ್ರಮದಲ್ಲಿ ತೆಗೆದುಕೊಂಡ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆಯೇ ಎಂದಾಗ “ಜನರ ಕಷ್ಟಗಳಿಗೆ ಮಾಧ್ಯಮಗಳ ಕಣ್ಣುಗಳೇ ಸಾಕ್ಷಿ. ಈಗಾಗಲೇ 5 ಸಭೆಗಳನ್ನು ನಡೆಸಲಾಗಿದೆ. ಇನ್ನೂ 4 ಸಭೆಗಳನ್ನು ನಡೆಸಲಾಗುವುದು. ಜನರು ತಮ್ಮ ಸಮಸ್ಯೆಗಳು ಬಗೆಹರಿಯುತ್ತಿರುವ ಕಾರಣಕ್ಕೆ ಮನವಿ ಸಲ್ಲಿಕೆ ಮಾಡುತ್ತಾ ಇರುವುದು” ಎಂದು ಹೇಳಿದರು.

“ಪಿಂಚಣಿ ಬರುತ್ತಿಲ್ಲ ಎಂದು ಅರ್ಜಿ ಸಲ್ಲಿಸಿದ್ದ 69 ಜನರಿಗೆ ಸಂಧ್ಯಾ ಸುರಕ್ಷಾ ಯೋಜನೆಯ ಅಡಿ ಹಣ ಬರುವಂತೆ ಮಾಡಲಾಗಿದೆ. ಫಲನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಗುವುದು” ಎಂದು ತಿಳಿಸಿದರು.

ಮಾವಿನ ಬೆಳೆ ನಷ್ಟವಾಗಿದೆ ಸರ್ಕಾರದಿಂದ ಪರಿಹಾರ ನೀಡುವ ಉದ್ದೇಶವಿದೆಯೇ ಎಂದು ಕೇಳಿದಾಗ “ಕೇಂದ್ರ ಸರ್ಕಾರ ನಾವು ಕೇಳಿದಷ್ಟು ಬರ ಪರಿಹಾರ ಕೊಡಲಿಲ್ಲ. ಈಗಾಗಲೇ ಒಂದಷ್ಟು ಪರಿಹಾರವನ್ನು ರೈತರ ಖಾತೆಗೆ ಹಾಕಲಾಗಿದೆ. ಇನ್ನೂ ಹೆಚ್ಚಿನ ಪರಿಹಾರಕ್ಕೆ ಕ್ರಮ ವಹಿಸಲಾಗುವುದು” ಎಂದರು.

ಕ್ಷೇತ್ರದ ಯಾವ ಯೋಜನೆಗಳಿಗೆ ವಿಶೇಷ ಅನುದಾನ ತರಲಾಗುವುದು ಎಂದಾಗ “ಗ್ರಾಮ ಪಂಚಾಯತಿವಾರು ಸಮಸ್ಯೆಗಳನ್ನು ಪಟ್ಟಿ ಮಾಡಿ ಅದರಂತೆ ಮುಖ್ಯಮಂತ್ರಿಗಳ ಬಳಿ ವಿಶೇಷ ಅನುದಾನಕ್ಕೆ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದರು.

ಪ್ರಧಾನಿಯವರ ಭೇಟಿ ವೇಳೆ ಹೊಸ ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಯಿತೇ ಎಂದು ಕೇಳಿದಾಗ “ಈಗ ಬಾಕಿ ಇರುವ ಯೋಜನೆಗಳಿಗೆ ಅನುಮತಿ ನೀಡಿ ಹಾಗೂ ಭದ್ರ, ಮೇಕೆದಾಟು, ಮಹದಾಯಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಕೊಡಿ ಎಂದು ಮನವಿ ಮಾಡಲಾಯಿತು” ಎಂದು ಉತ್ತರಿಸಿದರು.

ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಕೇಂದ್ರ ಕೈಗಾರಿಕಾ ಸಚಿವರ ಬಳಿ ಸರ್ಕಾರ ಮಾತುಕತೆ ನಡೆಸಲಾಗುವುದೇ ಎಂದಾಗ “ಅವಕಾಶ ಸಿಕ್ಕಿದೆಯಲ್ಲ ಈಗ ಅವರು ಕೆಲಸ ಮಾಡಲಿ. ಯಾವ ಯೋಜನೆಗಳನ್ನು ರಾಜ್ಯಕ್ಕೆ ತಂದರು ನಾವು ಸಹಕಾರ ನೀಡಲು ಬದ್ಧವಾಗಿದ್ದೇವೆ” ಎಂದು ಹೇಳಿದರು.

BIG NEWS: ‘ಪೌರ ಕಾರ್ಮಿಕ’ರಿಗೆ ವಾರದಲ್ಲಿ ‘ಪೂರ್ಣ ಒಂದು ದಿನ ರಜೆ’ ನೀಡುವುದು ಕಡ್ಡಾಯ: ‘ರಾಜ್ಯ ಸರ್ಕಾರ’ ಆದೇಶ

ಗಮನಿಸಿ: ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ ರೈಲಿನ ವೇಳಾಪಟ್ಟಿ ಪರಿಷ್ಕರಣೆ | South Western Railway

Share. Facebook Twitter LinkedIn WhatsApp Email

Related Posts

BREAKING: ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

08/07/2025 3:15 PM2 Mins Read

GOOD NEWS: ರಾಜ್ಯದ ಸಮುದಾಯ ವಿಜ್ಞಾನ ಪದವೀಧರರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

08/07/2025 2:59 PM2 Mins Read

ನಮ್ಮ ‘ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಕ್ಯೂಆರ್ ಟಿಕೆಟ್’ ಪರಿಚಯ

08/07/2025 2:48 PM2 Mins Read
Recent News

Good News ; ಇಂಟರ್ನೆಟ್ ಇಲ್ಲದೇ ಕಾರ್ಯ ನಿರ್ವಹಿಸುವ ಮೆಸೇಜಿಂಗ್ ಅಪ್ಲಿಕೇಶನ್ ‘ಬಿಟ್ಚಾಟ್’ ಬಿಡುಗಡೆ

08/07/2025 3:29 PM

BREAKING: ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

08/07/2025 3:15 PM

‘ರೆಸ್ಯೂಮ್’ನಲ್ಲಿ ಈ ಯುವಕ ಬಳಸಿದ ತಂತ್ರ ಬಳಸಿ, ಆಫರ್’ಗಳ ಸುರಿಮಳೆ ಸುರಿಯುತ್ತೆ!

08/07/2025 3:12 PM

GOOD NEWS: ರಾಜ್ಯದ ಸಮುದಾಯ ವಿಜ್ಞಾನ ಪದವೀಧರರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

08/07/2025 2:59 PM
State News
KARNATAKA

BREAKING: ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

By kannadanewsnow0908/07/2025 3:15 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಪಡಿತರ…

GOOD NEWS: ರಾಜ್ಯದ ಸಮುದಾಯ ವಿಜ್ಞಾನ ಪದವೀಧರರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್

08/07/2025 2:59 PM

ನಮ್ಮ ‘ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಕ್ಯೂಆರ್ ಟಿಕೆಟ್’ ಪರಿಚಯ

08/07/2025 2:48 PM

KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

08/07/2025 2:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.