ಬೆಂಗಳೂರು: ನಟ ಕಮಲ್ ಹಾಸನ್ ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರ ಬಗ್ಗೆ ಕೊನೆಗೂ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಮೌನ ಮುರಿದಿದ್ದಾರೆ. ನಾನು ಕಮಲ್ ಹಾಸನ್ ಹೇಳಿಕೆ ಸಮರ್ಥಿಸಿಕೊಳ್ಳಿಲ್ಲ ಎಂಬುದಾಗಿ ಸ್ಪಷ್ಟ ಪಿಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವಂತ ಅವರು ಕಮಲ್ ಹಾಸನ್ ಹೇಳಿಕೆ ಮಾತನ್ನ ನಾನೇನು ಸಮರ್ಥನೆ ಮಾಡಿಕೊಂಡಿಲ್ಲ. ಭಾಷೆ ಬಗ್ಗೆ ಮಾತನಾಡ್ತಿದ್ದಾಗ ನಾನು ಕೈ ತಟ್ಟಿದ್ದು ನಿಜ. ಆ ಸಂದರ್ಭದಲ್ಲಿ ಏನ್ ಮಾತನಾಡ್ತಿದ್ದಾರೆ ಅಂತ ಗೊತ್ತಾಗಲಿಲ್ಲ ಎಂಬುದಾಗಿ ಹೇಳಿದ್ದಾರೆ.
ಎಲ್ಲರೂ ಕನ್ನಡಾಭಿಮಾನದ ಬಗ್ಗೆ ಮಾತನಾಡ್ತಾರೆ. ಕನ್ನಡ ಅಭಿಮಾನ ಏನು ಎಂಬುದು ನಮಗೂ ಗೊತ್ತಿದೆ. ನಾನು ಕೂಡ ಕನ್ನಡಾಭಿಮಾನಿನೇ. ಅಣ್ಣಾವ್ರ ಕನ್ನಡ ಅಭಿಮಾನ ನಿಮಗೆಲ್ಲರಿಗೂ ಗೊತ್ತೇ ಇದೆ ಎಂದರು.
ಆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಮಾತನಾಡಿದ್ದು ಗೊತ್ತಾಗಲಿಲ್ಲ. ನನಗೆ ಏನು ಮಾತಾಡ್ತಿದ್ದಾರೆ ಎಂದು ಗಮನಿಸಲಿಲ್ಲ. ಹೀಗಾಗಿ ಚಪ್ಪಾಳೆ ತಟ್ಟಿದೆ. ಕಲಾವಿದನಾಗಿ ಭಾಷೆ ಬಗ್ಗೆ ಮಾತಾಡಿದಾಗ ಚಪ್ಪಾಳೆ ತಟ್ಟಿದ್ದೆ ಎಂಬುದಾಗಿ ಹೇಳಿದ್ದಾರೆ.
BREAKING: ಏಪ್ರಿಲ್.1ರಿಂದ ಮೇ.31ರವರೆಗೆ ರಾಜ್ಯದಲ್ಲಿ ಮಳೆಯಿಂದ 71 ಮಂದಿ ಸಾವು, 15378.32 ಹೆಕ್ಟೇರ್ ಬೆಳೆಹಾನಿ
BREAKING: ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ರಾಜ್ಯ ಸಚಿವ ಸ್ಥಾನಮಾನ ವಾಪಸ್