Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟ್ರಂಪ್ ದಾಳಿ ಮಾಡಿದರೆ ಅಮೇರಿಕಾದ ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಬೆದರಿಕೆ !

12/01/2026 8:05 AM

ಮೂಕ ಪ್ರಾಣಿಗಳ ಮಾರಣಹೋಮ: ಮೂರೇ ದಿನದಲ್ಲಿ 300 ನಾಯಿಗಳ ಹತ್ಯೆ, 9 ಪಾಪಿಗಳ ಬಂಧನ!

12/01/2026 7:54 AM

ಭಾರತವು ತ್ವರಿತಗತಿಯಲ್ಲಿ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಪ್ರಧಾನಿ ಮೋದಿ

12/01/2026 7:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು, ಸಿಎಂ ಸಿದ್ಧರಾಮಯ್ಯ ಬ್ರದರ್ಸ್ ರೀತಿಯಲ್ಲಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ನಾನು, ಸಿಎಂ ಸಿದ್ಧರಾಮಯ್ಯ ಬ್ರದರ್ಸ್ ರೀತಿಯಲ್ಲಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0921/12/2025 4:15 PM

ಬೆಂಗಳೂರು : “ನನಗೆ ಕಾಂಗ್ರೆಸ್ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, “ಅವರಿಗೆ ಸಿಎಂ ಆಪ್ತರೇನು? ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ ನವನು. ಅಂದು ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ” ಎಂದರು.

ರಾಜಕೀಯ ಬೆಂಬಲಕ್ಕೆ ಕೆ.ಎನ್. ರಾಜಣ್ಣ ಹಾಗೂ ನೀವು ಭೇಟಿ ಮಾಡಿದ್ದೀರಿ ಎಂದಾಗ, “ನಾವು ಸಹೋದ್ಯೋಗಿಗಳು. ಅವರು ನಮ್ಮ ಜತೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 16 ವರ್ಷಗಳಿಂದ, ಅವರು ನಮ್ಮ ಪಕ್ಷಕ್ಕೆ ಬಂದ ದಿನದಿಂದ ನನಗೂ ಮುಖ್ಯಮಂತ್ರಿಯವರಿಗೂ ಬಿನ್ನಾಭಿಪ್ರಾಯಗಳು ಏನಾದರೂ ಇದೆಯಾ? ಭಿನ್ನಾಭಿಪ್ರಾಯಗಳನ್ನು ಮಾಧ್ಯಮಗಳು, ವಿರೋಧ ಪಕ್ಷಗಳು ಸೃಷ್ಟಿ ಮಾಡುತ್ತಿವೆ. ತಮಗೆ ಬೇಕಾದ ಆಹಾರ ಸೃಷ್ಟಿಸುತ್ತಿದ್ದಾರೆ. ಕೆಲವು ಸಂದರ್ಭಗಳಲ್ಲಿ ರಾಜಕೀಯವಾಗಿ ಹೇಳಿಕೆ ಕೊಟ್ಟಿರುತ್ತಾರೆ. ಇದಕ್ಕೆ ಬೇಸರ ಮಾಡಿಕೊಳ್ಳಲು ಆಗುತ್ತದೆಯೇ? ಅಣ್ಣ ತಮ್ಮಂದಿರೇ ಜಗಳ ಮಾಡುತ್ತಾರಂತೆ, ಇನ್ನು ನಮ್ಮದು ಯಾವ ಜಗಳ” ಎಂದರು.

“ಎಲ್ಲಾ ಕಾಂಗ್ರೆಸ್ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ನನ್ನ ಸ್ನೇಹಿತರು, ಸಹೋದ್ಯೋಗಿಗಳು, ಒಟ್ಟಿಗೆ ಇದ್ದೇವೆ. ನಾನಂತು ಯಾರ ಮೇಲೂ ಜಗಳ ಮಾಡಲು ಹೋಗಿಲ್ಲ. ಯಾವ ವಿಚಾರಕ್ಕೂ ಒಬ್ಬರ ಮೇಲೆ ಇನ್ನೊಬ್ಬರು ಇದುವರೆಗೂ ಹೇಳಿಕೆ ನೀಡಿಲ್ಲ. ದಾಖಲೆಗಳನ್ನು ತೆಗೆದು ನೋಡಿ. ವಿರೋಧ ಪಕ್ಷದವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಿದ್ದೇನೆಯೇ ಹೊರತು ನಾನಾಗಿಯೇ ಯಾರ ಮೇಲೂ ಹೇಳಿಕೆ ನೀಡಿಲ್ಲ. ನಾನಾಗಿಯೇ ಒಬ್ಬರ ಮೇಲಾದರೂ ಹೇಳಿಕೆ ನೀಡಿದ್ದರೆ ತಿಳಿಸಿ” ಎಂದರು.

“ರಾಜಣ್ಣ ಅವರು ನಮ್ಮ ಶಾಸಕರು, ನಮ್ಮ ಜತೆ ಮಂತ್ರಿಯಾಗಿದ್ದವರು. ಸೌಹಾರ್ದಯುತ ಭೇಟಿ ಮಾಡುತ್ತೇವೆ. ಶನಿವಾರ ಸರಿಯಾಗಿ ಮಾತನಾಡಲು ಆಗಲಿಲ್ಲ. ಅದಕ್ಕೆ ಇಂದು (ಭಾನುವಾರ) ಸಹ ಭೇಟಿ ಮಾಡುತ್ತೇನೆ ಎಂದು ಹೇಳಿದ್ದೇನೆ. ರಾಜ್ಯಪಾಲರ ಕಾರ್ಯಕ್ರಮ ಇರುವ ಕಾರಣಕ್ಕೆ ಆನಂತರ ಭೇಟಿ ಮಾಡುತ್ತೇನೆ”ಎಂದರು.

ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ

ಬಿ.ಆರ್. ಸುದರ್ಶನ ಅವರು ಎಲ್ಲಾ ಗೊಂದಲಗಳನ್ನು ಬಗೆಹರಿಸಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ‌ ಬರೆದಿರುವ ಬಗ್ಗೆ ಕೇಳಿದಾಗ, “ನನ್ನ ಪ್ರಕಾರ ಯಾವ ಗೊಂದಲವೂ ಇಲ್ಲ. ಗೊಂದಲ ಎಲ್ಲಿದೆ. ಗೊಂದಲ ಮಾಧ್ಯಮ‌ ಹಾಗೂ ಬಿಜೆಪಿ ಸೃಷ್ಟಿ. ಅವರ ಪಕ್ಷದಲ್ಲಿ ಸಾಕಷ್ಟು ತೊಂದರೆಗಳಿವೆ ಅದಕ್ಕೆ ‌ಮಾಡುತ್ತಿದ್ದಾರೆ. ಮಾಧ್ಯಮಗಳಿಗೂ ಸುದ್ದಿ ಬೇಕು. ಅದಕ್ಕೆ ದಿನಾ ತೋರಿಸುತ್ತಿದ್ದೀರಿ ಅಷ್ಟೇ” ಎಂದರು.

ಪರಮೇಶ್ವರ್ ಅವರು ಸಹ ಗೊಂದಲ‌ ಬಗೆಹರಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ಕೇಳಿದಾಗ, “ನಾನು ಅವರ ವಕ್ತಾರನಲ್ಲ. ಅವರು ಬಹಳ ನಾಯಕರು ಉತ್ತರ ನೀಡುತ್ತಾರೆ” ಎಂದರು.

ಜನರ ಆಶೀರ್ವಾದವೇ ನನಗೆ ಆತ್ಮ ವಿಶ್ವಾಸ:

ಹೆಚ್ಚು ಆತ್ಮವಿಶ್ವಾಸ ಇರುವಂತೆ ಕಾಣುತ್ತಿದ್ದೀರಿ ಎಂದು ಕೇಳಿದಾಗ, “ನೀವೇ (ಮಾಧ್ಯಮಗಳ) ನನಗೆ ಆತ್ಮವಿಶ್ವಾಸ. ಅನವಶ್ಯಕ ಪ್ರಚಾರ ನೀಡುತ್ತಿದ್ದೀರಿ. ಜನರ ಆಶೀರ್ವಾದವೇ ನನಗೆ ಆತ್ಮವಿಶ್ವಾಸ” ಎಂದರು.

ಹೈಕಮಾಂಡ್ ನಿಂದ ಫೋನ್ ಕರೆ ಬರುವ ಮುಂಚೆಯೇ ಆತ್ಮವಿಶ್ವಾಸ ಕಾಣುತ್ತಿದೆ ಎಂದಾಗ, “ಈಗ ತಾನೇ ಹೈಕಮಾಂಡ್ ನಾಯಕರ ಜತೆ ಮಾತನಾಡಿದೆ. ಪರಿಷತ್ ಚುನಾವಣೆ ವಿಚಾರವಾಗಿ ನಾಲ್ಕು ಜನಕ್ಕೆ ಬಿ ಫಾರಂ ನೀಡುವ ವಿಚಾರ ಚರ್ಚೆ ನಡೆಸಿದೆ. ಹೆಸರನ್ನು ಘೋಷಿಸಿ ಎಂದು ಚರ್ಚೆ ನಡೆಸಿದೆ” ಎಂದರು.

ಹೈಕಮಾಂಡ್ ಭೇಟಿಗೆ ದಿನಾಂಕ ನಿಗದಿಯಾಗಿದೆಯೇ ಎಂದಾಗ, “ಎಲ್ಲಿಗೆ ಹೋದರು ರಾಜಕೀಯಕ್ಕೆ ಬರುತ್ತಿದ್ದೀರಿ. ರಸ್ತೆಗುಂಡಿ ವಿಚಾರ ಬಿಡಲಾಯಿತು. ಎಲ್ಲಾ ಗುಂಡಿ‌ ಮುಚ್ಚಲಾಗಿದೆ. ನಮ್ಮ ಜಿಬಿಎ ಆಯುಕ್ತರು ಬೆಳಿಗ್ಗೆ ಸಂಜೆ ಓಡಾಡಿ ಕೆಲಸ ಮಾಡುತ್ತಿದ್ದಾರೆ ಅದನ್ನೂ ತೋರಿಸುತ್ತಿಲ್ಲ” ಎಂದರು.

ರಾಜ್ಯದ ಯೋಜನೆಗಳ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚೆ:

ದೆಹಲಿ ಪ್ರಯಾಣದ ಬಗ್ಗೆ ಕೇಳಿದಾಗ, “ನದಿ ಜೋಡಣೆ ವಿಚಾರವಾಗಿ ಸಭೆ ಇರುವ ಕಾರಣಕ್ಕೆ ತೆರಳುತ್ತಿದ್ದೇನೆ. ಇದೇ ವೇಳೆ ನಗರಾಭಿವೃದ್ಧಿ ಸಚಿವರ ಭೇಟಿಗೆ ಅವಕಾಶ ಕೇಳಿದ್ದೇನೆ. ಮೆಟ್ರೋ ಸೇರಿದಂತೆ ಇತರೇ ಕೆಲಸಗಳಿಗೆ ಶೇ.50 ರಷ್ಟು ಅನುದಾನ ನೀಡಬೇಕು ಎಂದು ಒತ್ತಾಯಿಸುತ್ತೇನೆ.‌ ಏಕೆಂದರೆ ಕೇವಲ ಶೇ. 12-13 ರಷ್ಟು ಅನುದಾನ ನೀಡಿದರೆ ಸಾಲುವುದಿಲ್ಲ. ಮೆಟ್ರೋ ಅಡಿ ದೊಡ್ಡ ಯೋಜನೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ನಿಗದಿತ ಅವಧಿಯೊಳಗೆ ಮುಗಿಸಬೇಕಲ್ಲವೇ? ಡಬ್ಬಲ್ ಡೆಕ್ಕರ್ ಕೂಡ ಮಾಡುತ್ತಿದ್ದೇವೆ. ಹೊಸ ಮಾರ್ಗಗಳನ್ನು ವಿಸ್ತರಿಸಬೇಕಲ್ಲವೇ. ಹೊಸಕೋಟೆ, ಬಿಡದಿ ಮಾರ್ಗಗಳ ಬಗ್ಗೆ ಚರ್ಚಿಸಬೇಕಿದೆ. ಮಹದಾಯಿ, ಎತ್ತಿನಹೊಳೆ ವಿಚಾರವಾಗಿ ಅರಣ್ಯ ಸಚಿವರ ಬಳಿ ಮಾತನಾಡಬೇಕು. ಎತ್ತಿನಹೊಳೆಯ ಹೆಚ್ಚಿನ ಕೆಲಸ ಮುಗಿಸಿದ್ದೇವೆ. ತುಮಕೂರಿನವರೆಗೆ ನೀರು ತರಲಿಲ್ಲ ಎಂದರೆ ಜನ ಹೊಡೆಯುತ್ತಾರೆ. ಮೇಕೆದಾಟು ವಿಚಾರವಾಗಿ ಡಿಪಿಆರ್ ವರದಿ ಸಲ್ಲಿಸಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ” ಎಂದರು.

ದ್ವೇಷ ಭಾಷಣ ತಡೆ ಮಸೂದೆಗೆ ತೆಲಂಗಾಣವೂ ಮುಂದಾಗಿರುವ ಬಗ್ಗೆ ಕೇಳಿದಾಗ, “ಇದು ಇಂದಿನ ಅಗತ್ಯ. ಏಕೆಂದರೆ ದ್ವೇಷ ಭಾಷಣ ಮೂಲಕ ಜನಸಾಮಾನ್ಯರಲ್ಲಿ ಅನಗತ್ಯ ಗೊಂದಲ ಉಂಟು ಮಾಡಲಾಗುತ್ತಿದೆ. ಜನರಲ್ಲಿ ಭಯ ಹಾಗೂ ಅವರ ನಡುವೆ ವಿಭಜನೆಗೆ ಕಾರಣವಾಗುತ್ತಿದೆ. ಸುಖಾಸುಮ್ಮನೆ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಅದಕ್ಕೆ ಇದನ್ನು ತರಲಾಗಿದೆ. ನಮ್ಮದು ಶಾಂತಿಯುತ ರಾಜ್ಯ” ಎಂದರು.

ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಉಳಿಸಿಕೊಂಡಿದೆ; ಬೆಂಗಳೂರು ಅಭಿವೃದ್ಧಿಗೆ ಒತ್ತು

2025 ನೇ ವರ್ಷ ನಿಮಗೆ ತೃಪ್ತಿ ತಂದಿದೆಯೇ ಎಂದು ಕೇಳಿದಾಗ, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಅದಕ್ಕೆ ಸಂತೋಷವಿದೆ. ಮಾಧ್ಯಮಗಳು ಗೊಂದಲ ಸೃಷ್ಟಿಸುತ್ತಿವೆ ಹೊರತು ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಗ್ಯಾರಂಟಿ ಯೋಜನೆಗಳ ಜೊತೆಗೆ ಪ್ರಣಾಳಿಕೆಯಲ್ಲಿ ನೀಡಿದ ಆಶೋತ್ತರಗಳನ್ನು ಈಡೇರಿಸಿದ್ದೇವೆ. ಪ್ರತಿಯೊಬ್ಬರ ಆರ್ಥಿಕ ಭದ್ರತೆ ಬಗ್ಗೆ ಒತ್ತು ನೀಡಿದ್ದೇವೆ” ಎಂದರು.

“ಜೈ ಭೀಮ್, ಜೈ ಬಾಪು, ಜೈ ಸಂವಿಧಾನ ಘೋಷಣೆ ಮೂಲಕ ಗಾಂಧಿ ಭಾರತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಕೇಂದ್ರ ಬಿಜೆಪಿ ಸರ್ಕಾರ ನರೇಗಾ ಹೆಸರನ ಬದಲಾವಣೆ ಮಾಡುತ್ತಿರುವುದು ಒಪ್ಪಲು ಸಾಧ್ಯವಿಲ್ಲ. ಬೆಂಗಳೂರಿಗೆ ಉತ್ತಮ ಯೋಜನೆಗಳನ್ನು ತರಲಾಗುವುದು. ಬೆಂಗಳೂರಿನ ಅಭಿವೃದ್ಧಿ ಬಗ್ಗೆ ನಮಗೆ ಕಾಳಜಿಯಿದೆ. ರಸ್ತೆಗುಂಡಿ ಸಮಸ್ಯೆ, ಸಂಚಾರ ದಟ್ಟಣೆ ನಿವಾರಣೆಯೇ ನಮ್ಮ ಆದ್ಯತೆ. ಬೆಂಗಳೂರನ್ನು ಇಡೀ ಜಗತ್ತು ನೋಡುತ್ತಿದೆ. ಅದಕ್ಕೆ ಬೆಂಗಳೂರಿನ ಅಭಿವೃದ್ಧಿಗೆ ಒತ್ತು ನೀಡುತ್ತೇವೆ” ಎಂದರು.

ಲಸಿಕೆ ಹಾಕಿಸಿ ಪೋಷಕರು ಸಹಕರಿಸಿ

“ಡಿ.21 ರಿಂದ 24 ನೇ ತಾರೀಕಿನವರೆಗೂ ನಡೆಯುವ ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಪ್ರತಿಯೊಬ್ಬ ಪೋಷಕರು ಸಹ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡುತ್ತೇನೆ. ಆರೋಗ್ಯವೇ ನಮ್ಮೆಲ್ಲರ ಆಸ್ತಿ. 28,38,822 ಮನೆಗಳಿದ್ದು ಪ್ರತಿ ಮನೆಗೂ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಲಿದ್ದಾರೆ. ಒಟ್ಟು 11,34, 588 ಮಕ್ಕಳಿಗೆ ಲಸಿಕೆ ನೀಡಲಾಗುವುದು. 460 ಮೊಬೈಲ್ ಸಂಚಾರಿ ತಂಡವು ಕೆಲಸ ಮಾಡಲಿದೆ. 601 ಟ್ರಾನ್ಸಿಟ್ ತಂಡ, 3,390 ಬೂತ್ ಗಳಲ್ಲಿ ಲಸಿಕೆ ನೀಡಲಾಗುವುದು. ದೇಶದಲ್ಲಿಯೇ ಅತಿ ಹೆಚ್ಚು ತಂಡಗಳನ್ನು ನಿಗದಿ ಮಾಡಿದ್ದೇವೆ” ಎಂದರು.

“ಕ್ಯೂಆರ್ ಕೋಡ್ ಅನ್ನು ಬಿಡುಗಡೆ ಮಾಡಿದ್ದು ಅದನ್ನು ಸ್ಕ್ಯಾನ್ ಮಾಡಿದರೆ ಲಸಿಕೆ ನೀಡುವ ಸ್ಥಳೀಯ ಬೂತ್ ಗಳ ವಿಳಾಸ ಸಿಗಲಿದೆ. 1.61 ಲಕ್ಷ ವಲಸಿಗರಿದ್ದು,‌1,349 ಸ್ಲಂಗಳಲ್ಲೂ ಸಹ ಲಸಿಕೆ ನೀಡುವ ಅಭಿಯಾನ ನಡೆಯಲಿದೆ” ಎಂದರು.

ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ

Share. Facebook Twitter LinkedIn WhatsApp Email

Related Posts

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM1 Min Read

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM1 Min Read

BREAKING : ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು : ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

12/01/2026 7:11 AM1 Min Read
Recent News

ಟ್ರಂಪ್ ದಾಳಿ ಮಾಡಿದರೆ ಅಮೇರಿಕಾದ ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಬೆದರಿಕೆ !

12/01/2026 8:05 AM

ಮೂಕ ಪ್ರಾಣಿಗಳ ಮಾರಣಹೋಮ: ಮೂರೇ ದಿನದಲ್ಲಿ 300 ನಾಯಿಗಳ ಹತ್ಯೆ, 9 ಪಾಪಿಗಳ ಬಂಧನ!

12/01/2026 7:54 AM

ಭಾರತವು ತ್ವರಿತಗತಿಯಲ್ಲಿ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಪ್ರಧಾನಿ ಮೋದಿ

12/01/2026 7:49 AM

BREAKING : ‘PSLV-C62’ ರಾಕೆಟ್ ನಿಂದ ಇಂದು ಇಸ್ರೋದಿಂದ, 16 ಉಪಗ್ರಹಗಳ ಉಡಾವಣೆ | ISRO

12/01/2026 7:43 AM
State News
KARNATAKA

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

By kannadanewsnow0512/01/2026 7:23 AM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಈ ಒಂದು AI ಎನ್ನುವ ಆಪ್ ನಿಂದ ನಮಗೆ ಯಾವ ರೀತಿ ಬೇಕು ಆ ರೀತಿ…

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM

BREAKING : ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು : ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

12/01/2026 7:11 AM

GOOD NEWS: ಯಶಸ್ವಿನಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಚಿಕಿತ್ಸೆ ಉಚಿತ: ಹೊಸ ಸದಸ್ಯರ ನೋಂದಣಿ ಆಂರಭ

12/01/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.