Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಗೆ ಗೊತ್ತಾ.? ರೈಲಿನಲ್ಲಿ ವೈದ್ಯಕೀಯ ಸೇವೆ ಸಿಗುತ್ತೆ, ಪ್ರಯಾಣದ ಮಧ್ಯ ತುರ್ತು ಪರಿಸ್ಥಿತಿ ಉಂಟಾದ್ರೆ ವೈದ್ಯರೂ ಲಭ್ಯ, ಜಸ್ಟ್ 100 ರೂ. ಫೀಸ್

28/11/2025 10:11 PM

ಮುಂದಿನ ವಾರ ರಷ್ಯಾ ಅಧ್ಯಕ್ಷ ‘ವ್ಲಾಡಿಮಿರ್ ಪುಟಿನ್’ ಭಾರತಕ್ಕೆ ಆಗಮನ ; ‘MEA’ ದೃಢ

28/11/2025 9:41 PM

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಗ್ ಶಾಕ್ : ಜಾಮೀನು ನಿರಾಕರಿಸಿದ ಹೈಕೋರ್ಟ್

28/11/2025 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0911/01/2025 9:34 PM

ಬೆಂಗಳೂರು : “ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ. ಆದರೆ ಸತ್ಯಾಂಶ ಶೋಧಿಸಿ ಬರೆಯಿರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಕಿವಿಮಾತು ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್ ಶನಿವಾರದಂದು ಏರ್ಪಡಿಸಿದ್ದ ‘ಪ್ರೈಡ್ ಆಫ್ ಕರ್ನಾಟಕ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ನಾನು ಚುನಾವಣಾ ರಾಜಕೀಯಕ್ಕೆ ಬಂದು 40 ವರ್ಷಗಳು ಕಳೆದಿವೆ. ಆದರೆ ಒಂದು ದಿನವೂ ಪ್ರೆಸ್ ಕ್ಲಬ್ ಗೆ ಕಾಲಿಟ್ಟಿರಲಿಲ್ಲ. ಕಳೆದ ವರ್ಷ ನನ್ನನ್ನು ಕರೆಸಿ ವರ್ಷದ ವ್ಯಕ್ತಿ ಪ್ರಶಸ್ತಿ ಕೊಟ್ಟಿದ್ದೀರಿ” ಎಂದರು.

“ನನ್ನ ರಾಜಕೀಯ ಜೀವನದ ಹಾದಿಯಲ್ಲಿ ಮಾಧ್ಯಮದವರು ನನಗೆ ಸಕಾರಾತ್ಮಕ ಪ್ರಚಾರವನ್ನು ನೀಡಿದ್ದೀರಿ, ನಕಾರಾತ್ಮಕ ಪ್ರಚಾರವನ್ನು ನೀಡಿದ್ದೀರಿ. ಈ ಹಿಂದೆ ರಾಜೀವ್ ಗಾಂಧಿ ಅವರು ಪ್ರಧಾನಮಂತ್ರಿಯಾಗಿದ್ದಾಗ ಪೆಂಗ್ಯೋಂಗ್ ನಲ್ಲಿ ನಡೆದಿದ್ದ ವಿಶ್ವ ಯುವ ಸಮ್ಮೇಳನಕ್ಕೆ ಕಳುಹಿಸಿಕೊಟ್ಟಿದ್ದರು. ಆ ಸಮಯದಲ್ಲಿ ವೆಂಕಟಸುಬ್ಬಯ್ಯ ಅವರು ರಾಜ್ಯಪಾಲರಾಗಿದ್ದರು. ಇಲ್ಲಿ ದೊಡ್ಡ ಸಮಾವೇಶ ನಡೆದ ನಂತರ ನಾನು ಕಬ್ಬನ್ ಪಾರ್ಕ್ ನಲ್ಲಿ ಬಂದು ಕೂತಿದ್ದೆ. ಪೊಲೀಸ್ ಆಯುಕ್ತರು ಒಬ್ಬರನ್ನು ಕಳುಹಿಸಿ ನನ್ನನ್ನು ಕರೆಸಿಕೊಂಡರು. ನಿಮ್ಮನ್ನು ವಿಶ್ವ ಯುವ ಸಮ್ಮೇಳನಕ್ಕೆ ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.

ಈ ಸಮ್ಮೇಳನದಲ್ಲಿ ಭಾಗವಹಿಸಲು ವಿಸಾಗೆ 3 ಸಾವಿರ ಕಟ್ಟಬೇಕು ಎಂದು ಹೇಳಿದ್ದರು. ಆಗ ನನ್ನ ಬಳಿ ದುಡ್ಡು ಇರಲಿಲ್ಲ. ನನ್ನ ಕತ್ತಿನಲ್ಲಿ ಇದ್ದ ಚಿನ್ನದ ಸರ ಅಡವಿಟ್ಟು ಪೊಲೀಸ್ ಆಯುಕ್ತರ ಕಚೇರಿಗೆ ಹೋಗಿ ಹಣ ಪಾವತಿಸಿದ್ದೆ. ಒಂದು ದಿನದ ನಂತರ ಸಮ್ಮೇಳನಕ್ಕೆ ಆಯ್ಕೆಯಾಗಿರುವ ಬಗ್ಗೆ ನನಗೆ ಟೆಲಿಗ್ರಾಮ್ ಬಂತು.

ಆಗ ಹೊರಡುವ ಮುನ್ನ 5 ಜನ ಸಂಸದರು ನೀವು ಇಂತಹ ಗೂಂಡಾಗಳನ್ನು ಕಳುಹಿಸುತ್ತಿದ್ದೀರಿ ಎಂದು ರಾಜೀವ್ ಗಾಂಧಿ ಅವರಿಗೆ ಹೇಳಿದರು. ಅಷ್ಟು ಹೊತ್ತಿಗೆ ನಾನು ದೇವೇಗೌಡರ ವಿರುದ್ಧ ಸ್ಪರ್ಧಿಸಿ ಸೋತಿದ್ದೆ. ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದೆ. ನಾವು ಹೊರಡುವ ಮುನ್ನ ನಮಗೆ ಔತಣ ಕೂಟ ನೀಡಿ ಕೆಲವು ಮಾರ್ಗದರ್ಶನ ನೀಡಿ ಕಳುಹಿಸಿದರು. ಅಂದು 5 ಸಂಸದರ ದೂರಿನ ಮೇರೆಗೆ ರಾಜೀವ್ ಗಾಂಧಿ ಅವರು ರಾಜ್ಯಪಾಲರಿಗೆ ಕರೆ ಮಾಡಿ ನನ್ನ ಬಗ್ಗೆ ವಿಚಾರಿಸಿದರು. ಅವರು ಏನು ಹೇಳಿದರೊ ಗೊತ್ತಿಲ್ಲ. ರಾಜೀವ್ ಗಾಂಧಿ ಅವರು 5 ಸಂಸದರು ಹಾಗೂ ನನ್ನನ್ನು ಕರೆಸಿ ವಿವಾದಾತ್ಮಕ ನಾಯಕರೇ ಹೆಚ್ಚು ಯಶಸ್ವಿಯಾಗುತ್ತಾರೆ ಎಂದು ಹೇಳಿ, ಹಣ ಕೊಟ್ಟು ನನ್ನನ್ನು ಸಮ್ಮೇಳನಕ್ಕೆ ಕಳುಹಿಸಿಕೊಟ್ಟಿದ್ದರು” ಎಂದು ಸ್ಮರಿಸಿದರು.

ಮೀಡಿಯಾ ಸ್ಕೂಲ್ ಆರಂಭಿಸಲು ತೀರ್ಮಾನ

“ಈಗಿನ ಮಾಧ್ಯಮಗಳು ಸತ್ಯವನ್ನು ಬರೆಯುವುದಕ್ಕಿಂತ ಹೆಚ್ಚಾಗಿ ವಿವಾದಾತ್ಮಕ ಸುದ್ದಿಯನ್ನೇ ಪ್ರಕಟಿಸುತ್ತೀರಿ. ನಾನು ಕಳೆದ 25 ವರ್ಷಗಳಿಂದ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೆ. ಈಗ ಆ ಸಂಸ್ಥೆಗೆ ರಾಜೀನಾಮೆ ನೀಡಿ ಅದರ ಜವಾಬ್ದಾರಿಯನ್ನು ನನ್ನ ಕುಟುಂಬದವರಿಗೆ ನೀಡಿದ್ದೇನೆ. ಈಗಿನ ಮಾಧ್ಯಮಗಳನ್ನು ನೋಡಿ ನನ್ನ ಮಗಳು ಒಂದು ಮೀಡಿಯಾ ಸ್ಕೂಲ್ ಆರಂಭಿಸಬೇಕು ಎಂದು ಹೇಳಿದಳು. ನಾನು ಕೂಡ ಇದನ್ನು ಆರಂಭಿಸಲು ತೀರ್ಮಾನಿಸಿದ್ದೇನೆ” ಎಂದರು.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾಂಗ ನಾಲ್ಕು ಆಧಾರ ಸ್ಥಂಭಗಳು. ಇಡೀ ದೇಶದಲ್ಲಿ ಶಾಸಕಾಂಗ ಹಾಗೂ ನ್ಯಾಯಾಂಗ ಎರಡೂ ಎದುರುಬದುರಾಗಿರುವುದು ಅವೆರಡರ ಮಧ್ಯೆ ಪ್ರೆಸ್ ಕ್ಲಬ್ ಇರುವುದು ಬೆಂಗಳೂರಿನಲ್ಲಿ ಮಾತ್ರ. ಕಾರ್ಯಾಂಗವು ಇದಕ್ಕೆ ಸಮೀಪದಲ್ಲಿದೆ. ಹೀಗಾಗಿ ನೀವು ಎಲ್ಲವನ್ನು ಹತ್ತಿರದಿಂದ ಕಾಣುತ್ತೀರಿ, ಜೊತೆಗೆ ಕುಟುಕುತ್ತೀರಿ. ನೀವು ನಿಮ್ಮ ಕರ್ತವ್ಯ ಮಾಡಿ. ಆದರೆ ನಾವು ಬಹಳ ಕಷ್ಟಪಟ್ಟು ಬೆಳೆದಿರುತ್ತೇವೆ, ಆದರೆ ಯಾರೋ ಒಬ್ಬ ಒಂದು ಸ್ಟೋರಿ ಪ್ಲಾಂಟ್ ಮಾಡಿದ ಎಂದು ಭವಿಷ್ಯ ನಾಶ ಮಾಡಲು ಮುಂದಾಗುತ್ತಿರುವುದನ್ನು ಗಮನಿಸಿದ್ದೇನೆ” ಎಂದು ಹೇಳಿದರು.

ನಾವು ಮಾಧ್ಯಮ ಬಿಡಲು ಆಗುವುದಿಲ್ಲ:

“ನಾನು ದೇವಸ್ಥಾನಕ್ಕೆ ಹೋದರೂ ಪ್ರಶ್ನೆ ಮಾಡುತ್ತಾರೆ. ಎಲ್ಲರೂ ತಮ್ಮದೇ ಆದ ಧರ್ಮ ಪಾಲನೆ ಮಾಡುತ್ತಾರೆ. ನನ್ನ ಹೆಸರಿನಲ್ಲಿ ಶಿವ ಇದೆ. ನಾನು ಹುಟ್ಟುವಾಗ ಇದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಹುಟ್ಟುವುದಿಲ್ಲ. ನಾವು ಜಾತಿ ಧರ್ಮ ಬೇಡ ಎಂದರೂ ನಾವು ಹುಟ್ಟಿದಾಗ ಹಾಗೂ ಸತ್ತಾಗ ನಮ್ಮ ಸಂಪ್ರದಾಯ, ಆಚರಣೆಗಳು ನಮ್ಮ ಜಾತಿ ಧರ್ಮವನ್ನು ಬಿಡುವುದಿಲ್ಲ.

ಅದೇ ರೀತಿ ಮಾಧ್ಯಮಗಳು ಬೇಡ ಎಂದರು ರಾಜಕಾರಣಿಗಳು ಮಾಧ್ಯಮಗಳನ್ನು ಬಿಡಲು ಆಗುವುದಿಲ್ಲ. ಹೀಗಾಗಿ ಶೃಂಗೇರಿ ಕಾರ್ಯಕ್ರಮ ಮುಗಿಸಿಕೊಂಡು ನೇರವಾಗಿ ಇಲ್ಲಿಗೆ ಆಗಮಿಸಿದ್ದೇನೆ. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಬಂದಿದ್ದೇನೆ” ಎಂದು ತಿಳಿಸಿದರು.

“ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು ನೂರು ವರ್ಷಗಳಾಗಿವೆ. ಅವರು ಕೂಡ ಮಾಧ್ಯಮಕ್ಕೆ ಆದ್ಯತೆ ನೀಡಿದವರು ಹರಿಜನ ಪತ್ರಿಕೆ ಆರಂಭಿಸಿ ಪತ್ರಿಕಾರಂಗದಲ್ಲಿ ತೊಡಗಿಸಿಕೊಂಡಿದ್ದರು. ಅವರು ಹಾಕಿಕೊಟ್ಟ ದಾರಿಯನ್ನು ಸ್ಮರಿಸಿ, ಸಮಾಜಕ್ಕೆ ನೀವು ಮಾರ್ಗದರ್ಶನ ನೀಡುವ ಶಕ್ತಿಯನ್ನು ಭಗವಂತ ನಿಮಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದರು.

“ಪ್ರಶಸ್ತಿ ಪಡೆಯುತ್ತಿರುವವರ ಪಟ್ಟಿ ನೋಡಿ ಸಂತೋಷವಾಗಿದೆ. ಈ ಹಾರ ಬಹಳ ಭಾರ. ಸನ್ಮಾನ ಮಾಡಿಸಿಕೊಂಡ ನಂತರ ಜವಾಬ್ದಾರಿ ಹೆಚ್ಚುತ್ತದೆ. ಈ ಜವಾಬ್ದಾರಿ ಭಾರ ಹೊತ್ತು ಸಮಾಜಕ್ಕೆ ಮತ್ತಷ್ಟು ಸೇವೆ ಮಾಡಲಿ ಎಂದು ಶುಭಕೋರುತ್ತೇನೆ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ” ಎಂದು ತಿಳಿಸಿದರು.

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ನಾದಿನಿ ಜೊತೆ ಸೇರಿ ತಮ್ಮನನ್ನೇ ಕೊಲೆಗೈದ ಅಣ್ಣ

BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer

Share. Facebook Twitter LinkedIn WhatsApp Email

Related Posts

ನಿಮ್ಗೆ ಗೊತ್ತಾ.? ರೈಲಿನಲ್ಲಿ ವೈದ್ಯಕೀಯ ಸೇವೆ ಸಿಗುತ್ತೆ, ಪ್ರಯಾಣದ ಮಧ್ಯ ತುರ್ತು ಪರಿಸ್ಥಿತಿ ಉಂಟಾದ್ರೆ ವೈದ್ಯರೂ ಲಭ್ಯ, ಜಸ್ಟ್ 100 ರೂ. ಫೀಸ್

28/11/2025 10:11 PM2 Mins Read

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಗ್ ಶಾಕ್ : ಜಾಮೀನು ನಿರಾಕರಿಸಿದ ಹೈಕೋರ್ಟ್

28/11/2025 9:28 PM1 Min Read

BIG NEWS : ಹೈಕಮಾಂಡ್ ಹೇಳಿದಂತೆ ನಾಳೆ ನಾನು, ಡಿಕೆ ಶಿವಕುಮಾರ್ ಸಭೆ ಮಾಡ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

28/11/2025 9:07 PM1 Min Read
Recent News

ನಿಮ್ಗೆ ಗೊತ್ತಾ.? ರೈಲಿನಲ್ಲಿ ವೈದ್ಯಕೀಯ ಸೇವೆ ಸಿಗುತ್ತೆ, ಪ್ರಯಾಣದ ಮಧ್ಯ ತುರ್ತು ಪರಿಸ್ಥಿತಿ ಉಂಟಾದ್ರೆ ವೈದ್ಯರೂ ಲಭ್ಯ, ಜಸ್ಟ್ 100 ರೂ. ಫೀಸ್

28/11/2025 10:11 PM

ಮುಂದಿನ ವಾರ ರಷ್ಯಾ ಅಧ್ಯಕ್ಷ ‘ವ್ಲಾಡಿಮಿರ್ ಪುಟಿನ್’ ಭಾರತಕ್ಕೆ ಆಗಮನ ; ‘MEA’ ದೃಢ

28/11/2025 9:41 PM

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಗ್ ಶಾಕ್ : ಜಾಮೀನು ನಿರಾಕರಿಸಿದ ಹೈಕೋರ್ಟ್

28/11/2025 9:28 PM

BREAKING : ‘RCB’ ಬಳಿಕ ‘ರಾಜಸ್ಥಾನ ರಾಯಲ್ಸ್ ತಂಡ’ ಮಾರಾಟಕ್ಕೆ ಸಜ್ಜು ; ವರದಿ

28/11/2025 9:11 PM
State News
KARNATAKA

ನಿಮ್ಗೆ ಗೊತ್ತಾ.? ರೈಲಿನಲ್ಲಿ ವೈದ್ಯಕೀಯ ಸೇವೆ ಸಿಗುತ್ತೆ, ಪ್ರಯಾಣದ ಮಧ್ಯ ತುರ್ತು ಪರಿಸ್ಥಿತಿ ಉಂಟಾದ್ರೆ ವೈದ್ಯರೂ ಲಭ್ಯ, ಜಸ್ಟ್ 100 ರೂ. ಫೀಸ್

By KannadaNewsNow28/11/2025 10:11 PM KARNATAKA 2 Mins Read

ನವದೆಹಲಿ : ಪ್ರತಿದಿನ ಲಕ್ಷಾಂತರ ಜನರು ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಸುತ್ತಾರೆ. ಆದಾಗ್ಯೂ, ಕೆಲವರು ರೈಲುಗಳಲ್ಲಿ ಪ್ರಯಾಣಿಸುವಾಗ ಆರೋಗ್ಯ ತುರ್ತು ಪರಿಸ್ಥಿತಿಗಳನ್ನ…

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಗ್ ಶಾಕ್ : ಜಾಮೀನು ನಿರಾಕರಿಸಿದ ಹೈಕೋರ್ಟ್

28/11/2025 9:28 PM

BIG NEWS : ಹೈಕಮಾಂಡ್ ಹೇಳಿದಂತೆ ನಾಳೆ ನಾನು, ಡಿಕೆ ಶಿವಕುಮಾರ್ ಸಭೆ ಮಾಡ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

28/11/2025 9:07 PM

ಮಂಡ್ಯದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಯತ್ನ ; ಪ್ರಾಣಾಪಾಯದಿಂದ ಪಾರು!

28/11/2025 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.