Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಟ್ಟೆ ಬೇಯಿಸುವಾಗ ನಿಂಬೆಹಣ್ಣಿನ ತುಂಡು ಹಾಕಿದ್ದೀರಾ? ಈ ಕಿಚನ್ ಟಿಪ್ಸ್ ನಿಮ್ಮ ಕೆಲಸವನ್ನು ಸುಲಭವಾಗಿಸುತ್ತೆ!

Gold News: ದೇಶಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಅಚ್ಚರಿಯ ಕರೆ ನೀಡಿದ್ದೇಕೆ? ಇಲ್ಲಿದೆ ಕಾರಣ!

BREAKING: ಡಿಎಂಕೆ ಶಾಸಕಾಂಗ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ಅವಿರೋಧ ಆಯ್ಕೆ | Udayanidhi Stalin

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಾರೇ ಬರಲಿ, ಯಾರೇ ಹೋಗಲಿ, ಏನೇ ಟೀಕೆ ಮಾಡಲಿ, ನಾನು ತಲೆಕೆಡಿಸಿ ಕೊಳ್ಳುವುದಿಲ್ಲ: DCM ಡಿ.ಕೆ ಶಿವಕುಮಾರ್
KARNATAKA

ಯಾರೇ ಬರಲಿ, ಯಾರೇ ಹೋಗಲಿ, ಏನೇ ಟೀಕೆ ಮಾಡಲಿ, ನಾನು ತಲೆಕೆಡಿಸಿ ಕೊಳ್ಳುವುದಿಲ್ಲ: DCM ಡಿ.ಕೆ ಶಿವಕುಮಾರ್

By ವಸಂತ್‌ ಬಿ ಈಶ್ವರಗೆರೆ

ಚನ್ನಪಟ್ಟಣ: “ಯಾರೇ ಬರಲಿ, ಯಾರೇ ಹೋಗಲಿ, ಏನೇ ಟೀಕೆ ಮಾಡಲಿ, ನಾನು ತಲೆಕೆಡಿಸಿ ಕೊಳ್ಳುವುದಿಲ್ಲ. “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಜನರಿಗೆ ಸಹಾಯ ಮಾಡಿದ್ದು ಮಾತ್ರ ಶಾಶ್ವತ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಬೈರಾಪಟ್ಟಣ ಹಾಗೂ ಹೊಂಗನೂರಿನ ಬಳಿ ಸುಣ್ಣಘಟ್ಟದಲ್ಲಿ ನಡೆದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಯಾರು ಏನೇ ಹೇಳಿದರು ನನಗೆ ಜನ ಸೇವೆ ಮುಖ್ಯ. ನಾನು ನಿಮ್ಮ ಮನೆ ಮಗ, ಸೇವಕ. ಚನ್ನಪಟ್ಟಣ ತಾಲೂಕಿನ ಜನತೆಗೆ ಶಿವಕುಮಾರ್ ಮನೆ ಬಾಗಿಲು ಸದಾ ತೆರೆದಿರುತ್ತದೆ ” ಎಂದರು.

ಈಗ ಬಂದಿದ್ದಾರೆ ಚುನಾವಣೆ ಆದ ನಂತರ ಹೋಗುತ್ತಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅಧಿಕಾರ ಇದ್ದಾಗ ಜನರ ಕೆಲಸ ಮಾಡಬೇಕಿತ್ತು. ಬಡವರ ಕೆಲಸ ಮಾಡಬೇಡಿ ಎಂದು ಕುಮಾರಣ್ಣ ಮತ್ತು ಯೋಗೇಶ್ವರ್ ಗೂ ಹೇಳಿಲ್ಲ. ಕೆಲಸ ಮಾಡಬೇಡಿ ಎಂದು ಯಾರಾದರು ಅಡ್ಡ ಹಾಕಿಕೊಂಡಿದ್ದರೆ? ನಾವು ಈಗ ನಮ್ಮದೇ ಶೈಲಿಯಲ್ಲಿ ಕೆಲಸ ಮಾಡುತ್ತಿದ್ದೇವೆ” ಎಂದು ತಿರುಗೇಟು ನೀಡಿದರು.

ಚನ್ನಪಟ್ಟಣಕ್ಕೆ 167 ಕೋಟಿ ಅನುದಾನ

“ಚನ್ನಪಟ್ಟಣ ತಾಲ್ಲೂಕು ಅಭಿವೃದ್ಧಿಗೆ ನೀರಾವರಿ ಇಲಾಖೆಯಿಂದ ರೂ. 167 ಕೋಟಿ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿಗಳು 100 ಕೋಟಿ ವಿಶೇಷ ಅನುದಾನ ನೀಡುವುದಾಗಿ ಹೇಳಿದ್ದಾರೆ . ಅಲ್ಲದೇ ರೈಲ್ವೆ ಸೇತುವೆ ಕಾಮಗಾರಿ, ಆನೆ ದಾಳಿ ತಡೆಯಲು ಬ್ಯಾರಿಕೇಡ್ ಕಾಮಗಾರಿ. ರಸ್ತೆ, ಚರಂಡಿ ದುರಸ್ಥಿ ಕಾಮಗಾರಿಗೆ ಚನ್ನಪಟ್ಟಣಕ್ಕೆ 70 ಕೋಟಿ, 50 ಕೋಟಿ ವೆಚ್ಚದಲ್ಲಿ ಕಣ್ವ ನದಿಗೆ ಅಡ್ಡಾಲಹಳ್ಳಿ ಬಳಿ ಬ್ಯಾರೇಜ್ ಕಾಮಗಾರಿ, ಗರಕನಹಳ್ಳಿ ಏತ ನೀರಾವರಿ ಯೋಜನೆಯ ಉನ್ನತೀಕರಣ ಮತ್ತು ಕೋಡಂಬಳ್ಳಿ ಏರು ಕೊಳವೆ ಶಾಖೆಯ ಸಾಮರ್ಥ್ಯ ವೃದ್ಧಿಗಾಗಿ 40 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿದೆ. 540 ಕೋಟಿ ವೆಚ್ಚದಲ್ಲಿ ಸತ್ತೇಗಾಲದಲ್ಲಿ ನೀರಾವರಿ ಕಾಮಗಾರಿ ನಡೆಯುತ್ತಿದೆ” ಎಂದು ತಿಳಿಸಿದರು.

“ನಿವೇಶನ ಮತ್ತು ಮನೆ ಬೇಕು ಎಂದು ಕ್ರಮವಾಗಿ 2,500 ಮತ್ತು 1,121 ಜನರು ಒಟ್ಟು 4 ಸಾವಿರ ಜನರು ಮನೆ ಹಾಗೂ ನಿವೇಶನ ಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಯಾವ ಕುಟುಂಬಗಳಿಗೆ ಅವಶ್ಯಕತೆ ಇದ್ದವರಿಗೆ ಹಂಚಿಕೆ ಮಾಡಲಾಗುವುದು. ಕನಕಪುರದಲ್ಲಿ 100 ಎಕರೆಯಲ್ಲಿ ಹೊಸ ಬಡಾವಣೆ ಮಾಡಲಾಗಿದ್ದು ಇದೇ ಮಾದರಿಯಲ್ಲಿ ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಯೋಜನೆ ರೂಪಿಸಲಾಗುವುದು” ಎಂದರು.

“ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ನಾವು ಪಣ ತೊಟ್ಟಿದ್ದೇವೆ. ಅದ್ಕಕಾಗಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇವೆ. ಇದು ಕೇವಲ ಒಂದು ಪಕ್ಷದ ಕೆಲಸವಲ್ಲ. ನೀವು ಯಾವುದೇ ಪಕ್ಷಕ್ಕೆ ಮತ ಹಾಕಿದ್ದರೂ ಮುಜುಗರ ಪಟ್ಟುಕೊಳ್ಳದೆ ನಿಮ್ಮ ಸಮಸ್ಯೆ ಹೇಳಿಕೊಳ್ಳಿ, ನಾವು ಬಗೆಹರಿಸುತ್ತೇವೆ” ಎಂದು ಭರವಸೆ ನೀಡಿದರು.

ಕೆಂಗಲ್ ಹನುಮಂತಯ್ಯ ಅವರು ವಿಧಾನ ಸೌಧದ ಮೇಲೆ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂದು ಬರೆಸಿದ್ದಾರೆ. ನಾವು ಆಯ್ಕೆಯಾಗಿರುವುದೇ ಜನಸೇವೆ ಮಾಡಲು” ಎಂದು ಹೇಳಿದರು.

ಕಳೆದ 5 ಕಾರ್ಯಕ್ರಮಗಳಲ್ಲಿ ಅರ್ಜಿ ಸಲ್ಲಿಸಲು ಆಗದೆ ಇರುವವರಿಗೆ ತಾಲ್ಲೂಕು ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗುವುದು. ಈ ಸೌಲಭ್ಯವನ್ನು ಎಲ್ಲರು ಉಪಯೋಗಿಸಿಕೊಳ್ಳಬೇಕು. ಅಧಿಕಾರಿಗಳು ಯಾವ ರೀತಿಯ ವ್ಯವಸ್ಥೆ ಮಾಡಿದ್ದಾರೆ ಎಂದು ಪರಿಶೀಲನೆ ನಡೆಸುತ್ತೇನೆ” ಎಂದು ಹೇಳಿದರು.

ಬೈರಾಪಟ್ಟಣ ವೆಂಕಟಗಿರೀಗೌಡರ ಕರ್ಮಭೂಮಿ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಅವರ ಜೊತೆ ನಿಕಟವಾಗಿ ಸಂಪರ್ಕ ಇಟ್ಟುಕೊಂಡಿದ್ದೆ. ಈ ಊರಿನಲ್ಲಿ ವಿದ್ಯಾವಂತರು, ಶಿಕ್ಷಕರು, ಪ್ರೊಫೆಸರ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇದು ಪ್ರಜ್ಞಾವಂತರ ಗ್ರಾಮ” ಎಂದು ಶ್ಲಾಘಿಸಿದರು.

ಉಚಿತ ಬಸ್ ಬಿಟ್ಟಿದ್ದೀರಿ ಎಂದ ಪ್ರಧಾನಿಗಳು

ಪ್ರಧಾನಿಗಳ ಭೇಟಿ ವೇಳೆ ಬೆಂಗಳೂರಿನ ಮೆಟ್ರೋ ವಿಚಾರವಾಗಿ ಹೆಚ್ಚಿನ ಅನುದಾನ ಕೇಳಿದೆ. ‘ನೀವು ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಬಿಟ್ಟಿದ್ದೀರಿ, ಮೆಟ್ರೋಗೆ ಜನರೇ ಹತ್ತುತ್ತಾ ಇಲ್ಲ’ ಎಂದು ಹೇಳಿದರು. ಆದರೆ ಗ್ರಾಮೀಣ ಭಾಗದಲ್ಲಿ ಜನರು ಬಳಕೆ ಮಾಡುವುದೇ ಸರ್ಕಾರಿ ಬಸ್ ಗಳನ್ನು” ಎಂದರು.

ರಾಮನಗರ ಜಿಲ್ಲೆಯಲ್ಲಿ ಶೇ 96 ರಷ್ಟು ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪಿವೆ. ಗ್ಯಾರಂಟಿ ಯೋಜನೆ ಕೊಟ್ಟಾಗ ಅತ್ತೆ, ಸೊಸೆ ಜಗಳ ತಂದಿಟ್ಟರು. ಮನೆ ಭಾಗ ಮಾಡಿದರು ಎಂದು ಸುಳ್ಳು ಹಬ್ಬಿಸಿದರು. ನಾವು ಯಾರನ್ನು ಭಾಗ ಮಾಡಿಲ್ಲ. ಗ್ಯಾರಂಟಿಯಿಂದ ಜನರ ಅಭಿವೃದ್ಧಿ ಮಾಡಿದ್ದೇವೆ. ರಾಮನಗರಕ್ಕೆ 100 ಹೊಸ ಕೆಎಸ್ ಆರ್ ಟಿಸಿ ಬಸ್ ಗಳನ್ನು ಬಿಟ್ಟಿದ್ದೇವೆ. ಇಲ್ಲಿಂದ ಮಂಡ್ಯಕ್ಕೆ ಬಸ್ ಬೇಕು ಎಂದು ಮನವಿ ಸಲ್ಲಿಸಲಾಗಿದ್ದು ಅದನ್ನು ಆದಷ್ಟು ಬೇಗ ಪರಿಹಾರಿಸಲಾಗುವುದು” ಎಂದು ಹೇಳಿದರು.

ಸಾರ್ವಜನಿಕರ ಸಮಸ್ಯೆ ಪರಿಹಾರ ಮುಖ್ಯ

“ದಪ್ಪ ಹಾರ ಹಾಕಬೇಡಿ ಹಾಗೂ ನನ್ನ ಸುತ್ತ ಸುತ್ತುವರೆಯಬೇಡಿ. ನಿಮ್ಮ ಮುಖ ಪರಿಚಯವಿದೆ. ಆದರೆ ಸಾರ್ವಜನಿಕರಿಗೆ ಅವರ ಪರಿಚಯ ಮಾಡಿಕೊಳ್ಳಬೇಕು, ಸಮಸ್ಯೆ ಹೇಳಿಕೊಳ್ಳಬೇಕು ಎನ್ನುವ ಅಭಿಲಾಷೆ ಇರುತ್ತದೆ. ಆದ ಕಾರಣ ಮೊದಲು ಜನರಿಗೆ ಅವಕಾಶ ಮಾಡಿಕೊಡಿ, ಅವರ ಸಮಸ್ಯೆ ಪರಿಹಾರ ಬಹಳ ಮುಖ್ಯ” ಎಂದು ಸೂಚನೆ ನೀಡಿದರು.

ಅಧಿಕಾರಿಗಳು ಸರಕಾರ ಮತ್ತು ಜನರ ನಡುವಣ ಕೊಂಡಿ

“ಕಚೇರಿಯಲ್ಲಿ ಅಧಿಕಾರಿಗಳು ಜಿಡ್ಡು ಹಿಡಿದುಕೊಂಡು ಕುಳಿತಿದ್ದಾರೆ. ಅವರಿಗೆ ಚುರುಕು ಮುಟ್ಟಿಸಲು ಹಾಗೂ ಜನರ ಕಷ್ಟ ಏನು ಎಂದು ತಿಳಿಸಲು ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಭಕ್ತನಿಗೂ ಭಗವಂತನಿಗೂ ವ್ಯವಹಾರ ನಡೆಯುವ ಸ್ಥಳ ದೇವಸ್ಥಾನ. ಅದೇ ರೀತಿ ಸರ್ಕಾರ ಹಾಗೂ ಜನರ ನಡುವಿನ ಕೊಂಡಿ ಅಧಿಕಾರಿಗಳು” ಎಂದರು.

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿಕಾ ಪೊಣಚ್ಚ ಮತ್ತು ಭುವನ್ ಪೊನ್ನಣ್ಣ | Actress Harshika Poonacha

ಶತಮಾನಗಳವರೆಗೆ ಜನರು ಕ್ಷಮಿಸುವುದಿಲ್ಲ: ಹಿಂದೂಗಳ ಬಗ್ಗೆ ‘ರಾಹುಲ್ ಗಾಂಧಿ’ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು | PM Modi

Share. Facebook Twitter LinkedIn WhatsApp Email

Related Posts

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ

4 Mins Read

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

2 Mins Read
Recent News

ಮೊಟ್ಟೆ ಬೇಯಿಸುವಾಗ ನಿಂಬೆಹಣ್ಣಿನ ತುಂಡು ಹಾಕಿದ್ದೀರಾ? ಈ ಕಿಚನ್ ಟಿಪ್ಸ್ ನಿಮ್ಮ ಕೆಲಸವನ್ನು ಸುಲಭವಾಗಿಸುತ್ತೆ!

Gold News: ದೇಶಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಅಚ್ಚರಿಯ ಕರೆ ನೀಡಿದ್ದೇಕೆ? ಇಲ್ಲಿದೆ ಕಾರಣ!

BREAKING: ಡಿಎಂಕೆ ಶಾಸಕಾಂಗ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ಅವಿರೋಧ ಆಯ್ಕೆ | Udayanidhi Stalin

SHOCKING: ತಾಯಂದಿರ ದಿನವೇ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ

State News
KARNATAKA

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

By ವಸಂತ್‌ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಸಾಗರ ನಗರದ ಹೃದಯಭಾಗದಲ್ಲಿರುವ ನಗರಸಭೆಯ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗವೊಂದು ಅಕ್ರಮ ಒತ್ತುವರಿಯಾಗುತ್ತಿದ್ದರೂ, ನಗರಸಭೆ ಆಡಳಿತ ಮಂಡಳಿ ಮಾತ್ರ ಕಣ್ಣಿದ್ದೂ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 74 DYSP, 293 ಪಿಐ ವರ್ಗಾವಣೆ ಮಾಡಿ ಆದೇಶ

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.