ಬೆಂಗಳೂರು : ರೌಡಿಶೀಟರ್ ಕಚೇರಿಗೆ ಭೇಟಿ ನೀಡಿದ್ದಾರೆಂದು ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ ( Minister V Somanna ) ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

Crime News: ಬೆಂಗಳೂರಿನಲ್ಲಿ ಕುಖ್ಯಾತ ಮೊಬೈಲ್ ಕಳ್ಳನ ಬಂಧನ: ಸಿಕ್ಕ ಪೋನ್ ಗಳು ಎಷ್ಟು ಗೊತ್ತಾ.?

ವಿಧಾನಸೌಧದಲ್ಲಿಂದು ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಮಾತನಾಡಿದ ಸಚಿವರು 50 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಸಾವಿರಾರು ಜನ ನನ್ನ ಮನೆಯ ಹತ್ತಿರ ಬಂದು ಹೋಗಿದ್ದಾರೆ. ಅದರಲ್ಲಿ ನಾಗ ಯಾರು, ತಿಮ್ಮ ಯಾರು ಅನ್ನೋದು ನನಗೆ ಗೊತ್ತಿಲ್ಲ. ನಾಗ ಎಂಬುವವರನ್ನು ನಾನೂ ನೋಡಿಲ್ಲ. ಒಂದು ಗಂಟೆಯಲ್ಲ, ಒಂದು ನಿಮಿಷವೂ ನಾನು ಮಾತನಾಡಿಲ್ಲ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಆ ತರಹದ ಜೀವನ ಮಾಡಿಲ್ಲ. ಸಾರ್ವಜನಿಕ ರಸ್ತೆ ಎಂದ ಮೇಲೆ ಯಾರ್ಯಾರೋ ಓಡಾಡುತ್ತಾರೆ. ಅದಕ್ಕೆ ನಾನು ಹೇಗೆ ಹೊಣೆಯಾಗಲು ಸಾಧ್ಯ. ಒಳ್ಳೆಯವರನ್ನೂ ರಸ್ತೆಗೆ ಕರೆ ತಂದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ತಿಳಿಸಿದ್ದಾರೆ.

BIG NEWS: ಬಡ್ತಿ ನಿರೀಕ್ಷೆಯಲ್ಲಿದ್ದ ತಹಶೀಲ್ದಾರ್ ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ KAS ಹುದ್ದೆಗೆ ಬಡ್ತಿ ನೀಡಿ ಆದೇಶ

ರಾಜಕಾರಣದಲ್ಲಿ 11 ಚುನಾವಣೆ ಎದುರಿಸಿದ್ದೇನೆ. ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ. ಅದರ ಅವಶ್ಯಕತೆಯೂ ನನಗಿಲ್ಲ. ನಮ್ಮ ವಯಸ್ಸು, ನಮ್ಮ ಸೇವೆಯನ್ನು ಮಾಧ್ಯಮ ಸ್ನೇಹಿತರೂ ಒಮ್ಮೆ ಅವಲೋಕಿಸಿಕೊಳ್ಳಬೇಕು. ಆರೋಪ ಮಾಡುವ ಮೊದಲು ನಮ್ಮ ರಾಜಕೀಯ ಇತಿಹಾಸವನ್ನು ನೋಡಬೇಕು. ಸುಮ್ಮನೆ ಸುಳ್ಳು ಆರೋಪ ಮಾಡಿ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಬೇಡಿ. ದಯಮಾಡಿ ಇಂತಹ ಸುದ್ದಿಯನ್ನು ಬಿತ್ತರಿಸುವಾಗ ನಮ್ಮ ಪೂರ್ವಾಪರ ತಿಳಿದುಕೊಳ್ಳಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

BREAKING NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು, ಶಾಲಾ ವಿದ್ಯಾರ್ಥಿಗಳು

Share.
Exit mobile version