Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ರಸ್ತೆ ಬದಿ ನಿಂತಿದ್ದ ವೈದ್ಯೆಗೆ ‘ಲೈಂಗಿಕ ಕಿರುಕುಳ’ ನೀಡಿದ ಕೇಸ್ : ಕಾಮುಕ ಅರೆಸ್ಟ್

03/01/2026 12:12 PM

SHOCKING : ಮತ್ತೊಂದು `ಪೈಶಾಚಿಕ ಕೃತ್ಯ’ : 6 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್, ಟೆರೇಸ್ ನಿಂದ ಎಸೆದು ಹತ್ಯೆ.!

03/01/2026 12:08 PM

BIG UPDATE : ಛತ್ತೀಸ್ ಗಢದಲ್ಲಿ ಭದ್ರತಾ ಪಡೆಗಳಿಂದ ಎನ್ ಕೌಂಟರ್ : 14 ಕ್ಕೂ ಹೆಚ್ಚು ನಕ್ಸಲರ ಹತ್ಯೆ.!

03/01/2026 11:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ಮಗ ಸೈನಿಕನಾಗುತ್ತಾನೆಂಬ ಕನಸು ಕಂಡಿದ್ದೆ, ಅವನಿಗೆ ಯಾವ ಶಿಕ್ಷೆ ಕೊಟ್ಟರು ಸ್ವೀಕರಿಸುತ್ತೇನೆ : ಫಯಾಜ್ ತಂದೆ ಹೇಳಿಕೆ
KARNATAKA

ನನ್ನ ಮಗ ಸೈನಿಕನಾಗುತ್ತಾನೆಂಬ ಕನಸು ಕಂಡಿದ್ದೆ, ಅವನಿಗೆ ಯಾವ ಶಿಕ್ಷೆ ಕೊಟ್ಟರು ಸ್ವೀಕರಿಸುತ್ತೇನೆ : ಫಯಾಜ್ ತಂದೆ ಹೇಳಿಕೆ

By kannadanewsnow0519/04/2024 9:49 PM

ಬೆಳಗಾವಿ : ಹುಬ್ಬಳ್ಳಿಯ ಬಿ ವಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಫಯಾಜ್ ತಂದೆ ಬಾಬಾ ಸಾಹೇಬ್ ಸುಭಾನಿ ಪ್ರತಿಕ್ರಿಯೆ ನೀಡಿದ್ದು ನನ್ನ ಮಗನನ್ನು ಸೈನಿಕನನ್ನಾಗಿ ಮಾಡಬೇಕೆಂಬ ಆಸೆ ಇತ್ತು ಆದರೆ ಅವನು ಕ್ಷಮಿಸಲಾರದಂತ ತಪ್ಪು ಮಾಡಿದ್ದಾನೆ. ಆದ್ದರಿಂದ ಅವನಿಗೆ ಯಾವ ಶಿಕ್ಷೆ ಕೊಟ್ಟರೂ ಅದನ್ನು ಸ್ವೀಕರಿಸುತ್ತೇನೆ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ತಿಂಗಳ ಹಿಂದೆ ನೇಹಾ ಅವರ ತಂದೆ ಕರೆ ಮಾಡಿ, ಸರ್‌ ನಿಮ್ಮ ಮಗನಿಂದ ನಮ್ಮ ಮಗಳಿಗೆ ತೊಂದರೆ ಇದೆ. ದಯವಿಟ್ಟು ನಿಮ್ಮ ಮಗನಿಗೆ ಬುದ್ಧಿ ಹೇಳಿ ಎಂದಿದ್ದರು. ಈ ಕಾರಣಕ್ಕಾಗಿ ನಾನು ಅವನನ್ನು ಬೆಳಗಾವಿಗೆ ಕರೆದುಕೊಂಡು ಬಂದು ಇಲ್ಲಿ ಇಟ್ಟುಕೊಂಡಿದ್ದೆ. ಆದರೆ ಕಳೆದ 2 ವರ್ಷದಿಂದ ಆತ ನನ್ನ ಜೊತೆಗೆ ಇರಲಿಲ್ಲ. ಬದಲಾಗಿ ತಾಯಿ ಜೊತೆ ಇದ್ದ. ನಾನು ನನ್ನ ಪಾಡಿಗೆ ಕೆಲಸ ಮಾಡಿಕೊಳ್ಳುತ್ತಾ ಇದ್ದೆ. ಈ ಘಟನೆ ನಡೆದು 6 ಗಂಟೆಗೆ ನನಗೆ ಗೊತ್ತಾಯಿತು. ಅಲ್ಲಿವರೆಗೆ ನನನಗೆ ಏನೂ ಗೊತ್ತಿಲ್ಲ ಎಂದರು.

ಅವರಿಬ್ಬರ ನಡುವೆ ಅಫೇರ್ ಇತ್ತು. ಮಗ ಅವಳನ್ನು ಮದುವೆ ಆಗುತ್ತೇನೆ ಎಂದಿದ್ದ. ಆಗ ನಾನು ಬೇಡಪ್ಪ, ಅವರು ಗುರುಗಳು ಅಂಥವರ ಮಗಳನ್ನು ಮದುವೆ ಆಗುವುದು ನಮಗೆ ಗೌರವ ಅಲ್ಲ. ಮೊದಲೇ ದೇಶ ಹಾಗೂ ರಾಜ್ಯದಲ್ಲಿ ಲವ್‌ ಜಿಹಾದ್‌ ಅನ್ನೋದು ಹುಟ್ಟಿಕೊಂಡಿದೆ. ಇದಕ್ಕೆ ಬಣ್ಣ ಕಟ್ಟಿ ನಿನಗೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಬೇಡ ಅಂತಾ ಅವನ ಮುಂದೆಯೇ ಕೈಮುಗಿದು ಕೇಳಿಕೊಂಡಿದ್ದೆ.

6 ವರ್ಷದಿಂದ ನಾವಿಬ್ಬರು ಗಂಡ-ಹೆಂಡತಿ ಕೌಟುಂಬಿಕ ಕಲಹದಿಂದ ಬೇರೆಯಾಗಿದ್ದೇವೆ.2 ವರ್ಷದಿಂದ ಅವನು ನನ್ನ ಜೊತೆ ಮಾತಾಡ್ತಿರಲಿಲ್ಲ. ಶಿಕ್ಷಣಕ್ಕಾಗಿ ಹಣ ಕೊಡುತ್ತಿದ್ದೆ ಅಷ್ಟೇ. ಮಗ ಹಾಗೂ ಮಗಳು ನನ್ನ ಪತ್ನಿಯ ಜೊತೆ ವಾಸವಾಗಿದ್ದಾರೆ. ನಾನು ಒಬ್ಬನೇ ಬೇರೆ ಇದ್ದೀನಿ. ಮಗ ನನ್ನ ಜೊತೆ ಮಾತಾಡದೇ 3 ತಿಂಗಳು ಆಯ್ತು. ಹಣ ಬೇಕಾದರೆ ಮಾತ್ರ ಆತ ನನಗೆ ಫೋನ್‌ ಮಾಡುತ್ತಾನೆ. ಇಲ್ಲವೆಂದರಲ್ಲಿ ಫೋನ್‌ ಮಾಡಲ್ಲ ಎಂದು ತಿಳಿಸಿದರು.

ಇವತ್ತು ಇಂತಹ ಘಟನೆ ನಡೆದರೂ ನಾನು ಅವನ ಪರವಾಗಿಲ್ಲ. ಯಾಕೆಂದರೆ ಯಾರ ಮಕ್ಕಳಾದರೂ ನಮ್ಮ ಮಕ್ಕಳ ಥರನೇ. ಹೆಣ್ಮಕ್ಕಳು ಕಣ್ಣೀರು ಹಾಕಿದರೆ ಯಾರಿಗೂ ಇನ್ನೊಂದು ಸಲ ಯಾವ ಹೆಣ್ಮಕ್ಕಳಿಗೂ ತೊಂದರೆ ಕೊಡಬಾರದು ಅಂಥ ಶಿಕ್ಷೆ ಅವನಿಗೆ ಕೊಡಬೇಕು. ನೇಹಾ ತಂದೆಯ ಬಳಿ ಕ್ಷಮೆಯಾಚಿಸುತ್ತೇನೆ. ಯಾಕೆಂದರೆ ನೇಹಾ ಕೂಡ ನನಗೆ ಮಗಳಿದ್ದಂತೆ. ಇವತ್ತು ಅವರ ಮಗಳಿಗೆ ಆದ ಕಷ್ಟನೇ ನಾಳೆ ನನ್ನ ಮಗಳಿಗೂ ಆದರೂ ಕಷ್ಟನೇ ಎಂದು ಕಣ್ಣೀರು ಹಾಕಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ರಸ್ತೆ ಬದಿ ನಿಂತಿದ್ದ ವೈದ್ಯೆಗೆ ‘ಲೈಂಗಿಕ ಕಿರುಕುಳ’ ನೀಡಿದ ಕೇಸ್ : ಕಾಮುಕ ಅರೆಸ್ಟ್

03/01/2026 12:12 PM1 Min Read

ಮತದಾರರ ಪಟ್ಟಿ ಮ್ಯಾಪಿಂಗ್’ಗೆ ಪ್ರೌಢಶಾಲಾ ಶಿಕ್ಷಕರು ಬೇಡ: ರಾಜ್ಯ ಸರಕಾರಕ್ಕೆ ಮಾಜಿ ಶಾಸಕ ಹೆಚ್.ಎಂ.ರಮೇಶ್ ಗೌಡ ಆಗ್ರಹ

03/01/2026 11:52 AM1 Min Read

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮುಖ್ಯಶಿಕ್ಷಕ ಸಾವು!

03/01/2026 11:48 AM1 Min Read
Recent News

BREAKING : ಬೆಂಗಳೂರಲ್ಲಿ ರಸ್ತೆ ಬದಿ ನಿಂತಿದ್ದ ವೈದ್ಯೆಗೆ ‘ಲೈಂಗಿಕ ಕಿರುಕುಳ’ ನೀಡಿದ ಕೇಸ್ : ಕಾಮುಕ ಅರೆಸ್ಟ್

03/01/2026 12:12 PM

SHOCKING : ಮತ್ತೊಂದು `ಪೈಶಾಚಿಕ ಕೃತ್ಯ’ : 6 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್, ಟೆರೇಸ್ ನಿಂದ ಎಸೆದು ಹತ್ಯೆ.!

03/01/2026 12:08 PM

BIG UPDATE : ಛತ್ತೀಸ್ ಗಢದಲ್ಲಿ ಭದ್ರತಾ ಪಡೆಗಳಿಂದ ಎನ್ ಕೌಂಟರ್ : 14 ಕ್ಕೂ ಹೆಚ್ಚು ನಕ್ಸಲರ ಹತ್ಯೆ.!

03/01/2026 11:59 AM

BREAKING: ಛತ್ತೀಸ್ ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: 14 ಮಾವೋವಾದಿಗಳ ಹತ್ಯೆ

03/01/2026 11:59 AM
State News
KARNATAKA

BREAKING : ಬೆಂಗಳೂರಲ್ಲಿ ರಸ್ತೆ ಬದಿ ನಿಂತಿದ್ದ ವೈದ್ಯೆಗೆ ‘ಲೈಂಗಿಕ ಕಿರುಕುಳ’ ನೀಡಿದ ಕೇಸ್ : ಕಾಮುಕ ಅರೆಸ್ಟ್

By kannadanewsnow0503/01/2026 12:12 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಬೀದಿ ಕಾಮಣ್ಣನರ ಕಾಟ ಹೆಚ್ಚಾಗಿದ್ದು ಕಳೆದ ಒಂದು ತಿಂಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತಿದ್ದ ವೈದ್ಯೆಗೆ…

ಮತದಾರರ ಪಟ್ಟಿ ಮ್ಯಾಪಿಂಗ್’ಗೆ ಪ್ರೌಢಶಾಲಾ ಶಿಕ್ಷಕರು ಬೇಡ: ರಾಜ್ಯ ಸರಕಾರಕ್ಕೆ ಮಾಜಿ ಶಾಸಕ ಹೆಚ್.ಎಂ.ರಮೇಶ್ ಗೌಡ ಆಗ್ರಹ

03/01/2026 11:52 AM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮುಖ್ಯಶಿಕ್ಷಕ ಸಾವು!

03/01/2026 11:48 AM

BIG NEWS : ಗದಗದ ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರ ಆತ್ಮಹತ್ಯೆಗೆ ಶರಣು

03/01/2026 11:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.