Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಚಲಾಯಿಸಲು ಹೆದರಿಕೆ ಆಗುತ್ತಾ.? ಈ ಸಲಹೆ ಅನುಸರಿಸಿ, ಭಯ ಓಡಿ ಹೋಗುತ್ತೆ!

03/06/2025 3:29 PM

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

03/06/2025 3:08 PM

BREAKING : ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ : ಜೂನ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

03/06/2025 3:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಯಾವುದೇ ಭೇದಭಾವ ಇಲ್ಲದೇ ಅಭಿವೃದ್ಧಿ ಮಾಡಿದ್ದೇನೆ: ಬಸವರಾಜ ಬೊಮ್ಮಾಯಿ
KARNATAKA

ನಾನು ಯಾವುದೇ ಭೇದಭಾವ ಇಲ್ಲದೇ ಅಭಿವೃದ್ಧಿ ಮಾಡಿದ್ದೇನೆ: ಬಸವರಾಜ ಬೊಮ್ಮಾಯಿ

By kannadanewsnow0903/11/2024 8:41 PM

ಹಾವೇರಿ : ಸವಣೂರಿನಲ್ಲಿ ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿಯಲು ಭಾವಸಾರ ಕ್ಷತ್ರಿಯ ಸಮಾಜ ಕಾರಣ. ನಿಮ್ಮ ಪ್ರೀತಿ ವಿಶ್ವಾಸದ ಮುಂದೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯ ದೊಡ್ಡದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸವಣೂರಿನಲ್ಲಿ ಇಂದು ಭಾವಸಾರ ಕ್ಷತ್ರಿಯ ಸಮಾಜದ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ಮಾಡಿದರು.

ಸವಣೂರಿನಲ್ಲಿ ತಾವು ಯಾವ ಪರಿಸ್ಥಿತಿಯಲ್ಲಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದೀರಾ ಎಂದು ನಮಗೆ ಅರಿವಿದೆ. ಆದರೂ, ನೀವು ಎದೆಗುಂದದೆ ಮುನ್ನಡೆಯುತ್ತಿದ್ದೀರಿ ನಮ್ಮನ್ನೂ ಮುನ್ನಡೆಸುತ್ತಿದ್ದೀರಿ, ನಾಲ್ಕು ಚುನಾವಣೆಯಿಂದಲೂ ನನ್ನನ್ನು ಗೆಲ್ಕಿಸುತ್ತ ಬಂದಿದ್ದೀರಿ, ನನ್ನ ಮೇಲೆ ಅಷ್ಟೊಂದು ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದೀರಿ, ನಾನೇನಾದರೂ ಅಭಿವೃದ್ಧಿ ಕೆಲಸ ಮಾಡಿದ್ದರೆ ನಿಮ್ಮ‌ ಪ್ರೀತಿ ವಿಶ್ವಾಸದ ಮುಂದೆ ಅದು ದೊಡ್ಡ ಕೆಲಸವಲ್ಲ ಎಂದರು.

ಒಂದು ಬಾರಿ ಕೃಷ್ಣನ ಮೇಲೆ ಯಾರ ಪ್ರೀತಿ ದೊಡ್ಡದಿದೆ ಅಂತ ಪರೀಕ್ಷೆ ಮಾಡಲು ಸುಭದ್ರಾ ರುಕ್ಮಿಣಿ ನಡುವೆ ಸ್ಪರ್ಧೆ ಏರ್ಪಟ್ಟಿತು. ಒಂದು ತಕ್ಕಡಿಯಲ್ಲಿ ಕೃಷ್ಣನನ್ನು ಕೂಡಿಸಿ ಇನ್ನೊಂದು ತಕ್ಕಡಿಯಲ್ಲಿ ಸುಭದ್ರಾ ತನ್ನ ಮೈಮೇಲೆ ಇರುವ ಎಲ್ಲ ಆಭರಣಗಳನ್ನು ಹಾಕಿದರೂ ಕೃಷ್ಣನ ತಕ್ಕಡಿ ಮೇಲೆ ಏರಲಿಲ್ಲ. ಆದರೆ, ರುಕ್ಮಿಣಿ ಮೂರು ಪತ್ತರಿ ಎಲೆಗಳನ್ನು ಪೂಜಿಸಿ ತಕ್ಕಡಿಯ ಮೇಲೆ ಇಟ್ಟಲು ಕೃಷ್ಣನ ತಕ್ಕಡಿ ಮೇಲೆ ಏರಿತು. ಭಕ್ತಿ, ಅಭಿಮಾನದ ಪ್ರೀತಿಯ ಮುಂದೆ ಯಾವ ಪ್ರೀತಿಯೂ ದೊಡ್ಡದಲ್ಲ ಎಂದು ಹೇಳಿದರು.

ಶಿಗ್ಗಾವಿ ಸವಣೂರಿನಲ್ಲಿ ಯಾರಾದರೂ ಶಾಸಕಾಗುತ್ತಾರೆ ಎನ್ನುವಂತಿಲ್ಲ. ಈ ಕ್ಷೇತ್ರದಲ್ಲಿ ಶಾಂತಿಯುತ ವಾತಾವರಣ ಬೇಕಾ, ಅಥವಾ ಪೊಲಿಸ್ ಸ್ಟೇಷನ್ ಗೆ ಅಲೆದಾಡುವ ವಾತಾವರಣ ಬೇಕಾ ಎನ್ನುವುದನ್ನು ಈ ಚುನಾವಣೆಯಲ್ಲಿ ನಿರ್ಧರಿಸಬೇಕು ಎಂದರು.

ಸವಣೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕರ ಇತ್ತು. ದೊಡ್ಡ ಮಟ್ಟದ ಹೋರಾಟ ನಡೆಯುತ್ತಿತ್ತು. ಈಗ ಅದೆಲ್ಲ ಹೋಗಿ ಜನರಿಗೆ ಕುಡಿಯುವ ನೀರು ಲಭ್ಯವಾಗುತ್ತಿದೆ. ನಾನು 2018 ರಲ್ಲಿ ಗೆದ್ದಾಗ ಒಂದು ಗಲ್ಲಿಲಿ ಗುದ್ದಲಿ ಪೂಜೆ ಮಾಡಿದಾಗ ಒಬ್ಬ ಅಲ್ಪಸಂಖ್ಯಾತ ವಯಸ್ಸಾದ ಅಜ್ಜಿ ಮರೆಯಲ್ಲಿ ನಿಂತು ನೋಡುತ್ತಿದ್ದರು. ಏನು ನೋಡುತ್ತಿರುವೆ ಎಂದು ಅಜ್ಜಿಯನ್ನು ಕೇಳಿದೆ. ಅವರು ನಾನು ನಿಮ್ಮನ್ನು ನೋಡಲು ಬಂದಿದ್ದೇನೆ. ನಾನು ಐವತ್ತು ವರ್ಷದ ಹಿಂದೆ ಸೊಸೆಯಾಗಿ ಇಲ್ಲಿಗೆ ಬಂದಿದ್ದೇನೆ, ಬಾವಿ ನೀರು ಸೇದುವುದು ತಪ್ಪಿರಲಿಲ್ಲ. ನೀವು ಮನೆಗಳಿಗೆ ನೀರು ಬರುವಂತೆ ಮಾಡಿದ್ದೀರಿ, ನಿಮ್ಮ ಪರವಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ನಾನು ಯಾವುದೇ ಭೇದ ಭಾವ ಇಟ್ಟುಕೊಳ್ಳದೇ ಅಭಿವೃದ್ಧಿ ಕೆಲಸ ಮಾಡುತ್ತ ಬಂದಿದ್ದೇನೆ. ಸವಣೂರಿನಲ್ಲಿ ಅಭಿವೃದ್ಧಿ ಕಾರ್ಯ ನಿರಂತರ ಮುಂದುವರೆಯಬೇಕು. ಈ ಬಾರಿ ಪಕ್ಷ ಭರತ್ ಬೊಮ್ಮಾಯಿಯನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಅವನನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಥ ಮುಂದುವರೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಭಯೋತ್ಪಾದಕ ಸಂಘಟನೆಗಳನ್ನು ಹತ್ತಿಕ್ಕಿರಿ: ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೂಚನೆ

BIG NEWS: ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಸಾವಿನ ಬಗ್ಗೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ.? ಇಲ್ಲಿದೆ ಡೀಟೆಲ್ಸ್

Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

03/06/2025 3:08 PM1 Min Read

BREAKING : ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ : ಜೂನ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

03/06/2025 3:07 PM2 Mins Read

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನೆಮಾ ರಿಲೀಸ್ ಮಾಡಲ್ಲ : ಹೈಕೋರ್ಟಿಗೆ ಕಮಲ್ ಹಾಸನ್ ಪರ ವಕೀಲರಿಂದ ಸ್ಪಷ್ಟನೆ

03/06/2025 3:01 PM2 Mins Read
Recent News

ವಾಹನ ಚಲಾಯಿಸಲು ಹೆದರಿಕೆ ಆಗುತ್ತಾ.? ಈ ಸಲಹೆ ಅನುಸರಿಸಿ, ಭಯ ಓಡಿ ಹೋಗುತ್ತೆ!

03/06/2025 3:29 PM

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

03/06/2025 3:08 PM

BREAKING : ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ : ಜೂನ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

03/06/2025 3:07 PM

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನೆಮಾ ರಿಲೀಸ್ ಮಾಡಲ್ಲ : ಹೈಕೋರ್ಟಿಗೆ ಕಮಲ್ ಹಾಸನ್ ಪರ ವಕೀಲರಿಂದ ಸ್ಪಷ್ಟನೆ

03/06/2025 3:01 PM
State News
KARNATAKA

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

By kannadanewsnow0903/06/2025 3:08 PM KARNATAKA 1 Min Read

ಬೆಂಗಳೂರು: ಕನ್ನಡ-ತಮಿಳು ಹೇಳಿಕೆಗಳ ವಿವಾದದ ನಡುವೆ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದಾರೆ.…

BREAKING : ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ : ಜೂನ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

03/06/2025 3:07 PM

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನೆಮಾ ರಿಲೀಸ್ ಮಾಡಲ್ಲ : ಹೈಕೋರ್ಟಿಗೆ ಕಮಲ್ ಹಾಸನ್ ಪರ ವಕೀಲರಿಂದ ಸ್ಪಷ್ಟನೆ

03/06/2025 3:01 PM

BIG NEWS: ಮುಂದುವರೆದ ನಟ ಕಮಲ್ ಹಾಸನ್ ಮೊಂಡುತನ: ಕ್ಷಮೆಯಾಚನೆ ಮಾಡಲು ಪರೋಕ್ಷವಾಗಿ ನಿರಾಕರಣೆ

03/06/2025 3:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.