Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಬಳಿ ‘ಜನ್ ಧನ್ ಖಾತೆ’ ಇದ್ಯಾ.? ‘ಮರು-ಕೆವೈಸಿ’ ಮಾಡದಿದ್ರೆ ಏನಾಗುತ್ತೆ ಗೊತ್ತಾ.?

08/08/2025 9:38 PM

ಆ.15ರಂದು ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಅನುಷ್ಠಾನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/08/2025 9:27 PM

BREAKING: ನ್ಯಾಯಾಲಯದ ಆದೇಶದಂತೆ ನಟ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ಸ್ಪಷ್ಟನೆ

08/08/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ 4 ದಶಕಗಳ ರಾಜಕೀಯ ಜೀವನದಲ್ಲಿ ಇಂಥಾ ಬಹಳಷ್ಟು ಪಿತೂರಿ, ಷಡ್ಯಂತ್ರ ಎದುರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ
KARNATAKA

ನನ್ನ 4 ದಶಕಗಳ ರಾಜಕೀಯ ಜೀವನದಲ್ಲಿ ಇಂಥಾ ಬಹಳಷ್ಟು ಪಿತೂರಿ, ಷಡ್ಯಂತ್ರ ಎದುರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ

By kannadanewsnow0511/07/2024 4:40 PM

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಹಳಾ ಜನರಿಗೆ ಹೊಟ್ಟೆಯುರಿ ಉಂಟುಮಾಡಿದೆ. ಅದಕ್ಕಾಗಿ ಕುತಂತ್ರ ಮಾಡುತ್ತಿದ್ದಾರೆ. ನನ್ನ 4 ದಶಕಗಳ ರಾಜಕೀಯ ಜೀವನದಲ್ಲಿ ಇಂಥಾ ಬಹಳಷ್ಟು ಪಿತೂರಿ, ಷಡ್ಯಂತ್ರ ನೋಡಿ, ಎದುರಿಸಿ ಬಂದಿದ್ದೀನಿ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

2014 ರಲ್ಲಿ ಮೂಡಾ ಜಮೀನು ಅಲ್ಲದೆ ಹೋದರೂ ಕೂಡ ನಮ್ಮ ಜಮೀನಲ್ಲಿ ನಿವೇಶನ ಮಾಡಿ ಹಂಚಿದ್ದಾರೆ. ಅದಕ್ಕೆ ನಾವು ಸುಮ್ಮನೆ ಬಿಡಬೇಕಾ? ಬದಲಿ ನಿವೇಶನ ಕೇಳಿದೆವೇ ಹೊರತು ಇಂಥಾ ಜಾಗದಲ್ಲಿಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ. ಆಗ ಮೂಡಾ ಸದಸ್ಯರೆಲ್ಲಾ ಏನು ಮಾಡುತ್ತಿದ್ದರು? ಬಿಜೆಪಿ ಸರ್ಕಾರವೇ ಇತ್ತು ಆಗ. ಕಾನೂನು ಪ್ರಕಾರ ನಮಗೆ ಬೇರೆ ಜಮೀನು ಕೊಡಬೇಕು ಎಂದರು.

ಇದೇ ರೀತಿಯಲ್ಲಿ ಸುಂದರಮ್ಮ ಪ್ರಕರಣದಲ್ಲಿ ಅವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಉಚ್ಚ ನ್ಯಾಯಾಲಯ ಅಷ್ಟು ಜಾಗವನ್ನೂ ಕೊಡಲು ಆದೇಶಿಸಿ ಒಂದು ಲಕ್ಷ ರೂಪಾಯಿ ದಂಡವನ್ನೂ ಮೂಡಾಗೆ ಹಾಕಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೂಡಾ ತಪ್ಪು ಮಾಡಿದ್ದರೆ ಯಾರು ಜವಾಬ್ದಾರರು? ನಾನು ಜವಾಬ್ದಾರನೇ?

ಒಂದು ವೇಳೆ ಇದನ್ನು ರದ್ದು ಮಾಡಿದರೆ ಭೂಸ್ವಾಧೀನ ಕಾಯ್ದೆ ಪ್ರಕಾರ ಪರಿಹಾರ ನೀಡಬೇಕಲ್ಲವೇ. ಅದರ ಪ್ರಕಾರ 57 ಕೋಟಿಯಾದರೆ ಬಡ್ಡಿ ಸೇರಿಸಿ 62 ಕೋಟಿಯಾಗುತ್ತದೆ. ಮೂಡಾದವರು 62 ಕೋಟಿ ಕೊಡಬೇಕಾಗುತ್ತದೆ.2021ರಲ್ಲಿ ನಾನು ವಿರೋಧ ಪಕ್ಷದ ನಾಯಕ ಇದ್ದೆ. ಆಗ ನಾನು ಹೇಳಿದ್ದನ್ನು ಕೇಳಿ ಸರ್ಕಾರ ಕೆಲಸ ಮಾಡುತ್ತಿತ್ತಾ? ಎಂದು ಪ್ರಶ್ನಿಸಿದರು.

ಮೂಡಾ ಮೊದಲಿನಿಂದಲೂ ಗಬ್ಬೆದ್ದು ಹೋಗಿದ್ದು, ಅದನ್ನು ಸ್ವಚ್ಛ ಮಾಡಬೇಕಿದೆ. ನಮಗೆ ನಿವೇಶನ ಕೊಟ್ಟಿದ್ದು ಹಗರಣವಲ್ಲ. ನಮ್ಮ ಜಮೀನನ್ನು ಮುಡಾದವರು ಅಕ್ರಮವಾಗಿ ಕಬಳಿಕೆ ಮಾಡಿದ್ದಾರೆ. ಬೇರೆಯವರ ಹಾಗೆ ನಾವೇ ಮುಡಾಗೆ ಜಮೀನು ಬಿಟ್ಟುಕೊಟ್ಟು ಪರಿಹಾರ ಕೇಳುತ್ತಿರೋದಲ್ಲ. ಈ ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳಬೇಕು.

2020ನೇ ಇಸವಿಯಲ್ಲಿ ಮೂಡಾ ಅಲ್ಲದೇ ಬೇರೆ ಅಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ 50:50 ಅನುಪಾತ ಜಾರಿಗೆ ಬಂದಿದೆ. ಇದರಿಂದ ಅಭಿವೃದ್ಧಿ ಪ್ರಾಧಿಕಾರಗಳಿಗೆ ಲಾಭವಾಗುತ್ತದೆಯೇ ಹೊರತು ನಷ್ಟವಾಗುವುದಿಲ್ಲ. ಭೂಮಾಲೀಕರಿಗೆ ನಷ್ಟವುಂಟಾಗಬಾರದು ಎಂದು ತನಿಖೆ ನಡೆಸಲಾಗುತ್ತಿದೆ. ಮೂಡಾ ಆಯುಕ್ತರು, ಮತ್ತಿತರರು ಇದನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ.ಈ ದುರುಪಯೋಗ ತಡೆಯಲು ತನಿಖೆ ನಡೆಸಿ ಸರಿಮಾಡುತ್ತೇವೆ ಎಂದು ತಿಳಿಸಿದರು.

ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಹಳಾ ಜನರಿಗೆ ಹೊಟ್ಟೆಯುರಿ ಉಂಟುಮಾಡಿದೆ. ಅದಕ್ಕಾಗಿ ಕುತಂತ್ರ ಮಾಡುತ್ತಿದ್ದಾರೆ. ನನ್ನ 4 ದಶಕಗಳ ರಾಜಕೀಯ ಜೀವನದಲ್ಲಿ ಇಂಥಾ ಬಹಳಷ್ಟು ಪಿತೂರಿ, ಷಡ್ಯಂತ್ರ ನೋಡಿ, ಎದುರಿಸಿ ಬಂದಿದ್ದೀನಿ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ.

ಮೂಡಾ ಮೊದಲಿನಿಂದಲೂ ಗಬ್ಬೆದ್ದು… pic.twitter.com/iEAnJQT4ht

— Siddaramaiah (@siddaramaiah) July 11, 2024

Share. Facebook Twitter LinkedIn WhatsApp Email

Related Posts

ಆ.15ರಂದು ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಅನುಷ್ಠಾನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/08/2025 9:27 PM2 Mins Read

BREAKING: ನ್ಯಾಯಾಲಯದ ಆದೇಶದಂತೆ ನಟ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ಸ್ಪಷ್ಟನೆ

08/08/2025 9:21 PM1 Min Read

CRIME NEWS: ಪತ್ನಿಯನ್ನ ಹತ್ಯೆ ಮಾಡಿದ್ದ ಪತಿಯನ್ನು ಬರ್ಬರ ಕೊಲೆ

08/08/2025 9:10 PM1 Min Read
Recent News

ನಿಮ್ಮ ಬಳಿ ‘ಜನ್ ಧನ್ ಖಾತೆ’ ಇದ್ಯಾ.? ‘ಮರು-ಕೆವೈಸಿ’ ಮಾಡದಿದ್ರೆ ಏನಾಗುತ್ತೆ ಗೊತ್ತಾ.?

08/08/2025 9:38 PM

ಆ.15ರಂದು ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಅನುಷ್ಠಾನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/08/2025 9:27 PM

BREAKING: ನ್ಯಾಯಾಲಯದ ಆದೇಶದಂತೆ ನಟ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ಸ್ಪಷ್ಟನೆ

08/08/2025 9:21 PM

CRIME NEWS: ಪತ್ನಿಯನ್ನ ಹತ್ಯೆ ಮಾಡಿದ್ದ ಪತಿಯನ್ನು ಬರ್ಬರ ಕೊಲೆ

08/08/2025 9:10 PM
State News
KARNATAKA

ಆ.15ರಂದು ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಅನುಷ್ಠಾನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

By kannadanewsnow0908/08/2025 9:27 PM KARNATAKA 2 Mins Read

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್.15, 2025ರಂದು ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವುದು ಕಡ್ಡಾಯಗೊಳಿಸಿ…

BREAKING: ನ್ಯಾಯಾಲಯದ ಆದೇಶದಂತೆ ನಟ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ಸ್ಪಷ್ಟನೆ

08/08/2025 9:21 PM

CRIME NEWS: ಪತ್ನಿಯನ್ನ ಹತ್ಯೆ ಮಾಡಿದ್ದ ಪತಿಯನ್ನು ಬರ್ಬರ ಕೊಲೆ

08/08/2025 9:10 PM

ವಿದ್ಯಾರ್ಥಿಗಳ ಗಮನಕ್ಕೆ: ಕುವೆಂಪು ವಿವಿಯಿಂದ ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

08/08/2025 8:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.