ಧಾರವಾಡ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ 17 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರೋ ಸಂಬಂಧ ಪ್ರಕರಣ ದಾಖಲಾಗಿದೆ. ಈ ನಡುವೆ ನನಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ಅಪಾರವಾದ ನಂಬಿಕೆಯಿದೆ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾರೇ ಯಾವುದೇ ವಿಚಾರವಾಗಿ ಪೊಲೀಸರಿಗೆ ದೂರು ಕೊಟ್ಟರೂ ಅದನ್ನು ದಾಖಲು ಮಾಡಬೇಕು. ಈಗ ಬಿಎಸ್ ಯಡಿಯೂರಪ್ಪ ಅವರ ವಿಚಾರದಲ್ಲಿ ಅದೇ ಆಗಿದೆ. ಸಂತ್ರಸ್ತೆ ತಾಯಿ ನೀಡಿದಂತ ದೂರಿನ ಆಧಾರದ ಮೇಲೆ ಪೋಕ್ಸೊ ಕೇಸ್ ದಾಖಲಾಗಿದೆ ಎಂದರು.

ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿರುವ ವಿಚಾರ ಗೊತ್ತಾಗಿದೆ. ಆದರೇ ಅವರ ಮೇಲೆ ನನಗೆ ಅಪಾರವಾದಂತ ನಂಬಿಕೆಯಿದೆ. ಸಂತ್ರಸ್ತೆ ತಾಯಿ ಮಾನಸಿಕ ಅಸ್ವಸ್ಥೆ ಅಂತ ಹೇಳಲಾಗುತ್ತಿದೆ. ಸ್ವಲ್ಪ ದಿನ ಕಾದು ನೋಡೋಣ. ನಾನು ಈ ಪ್ರಕರಣದ ಬಗ್ಗೆ ಏನು ಮಾತನಾಡೋದಿಲ್ಲ ಎಂಬುದಾಗಿ ತಿಳಿಸಿದರು.

‘ಲೋಕಸಭಾ ಚುನಾವಣೆ’ಯಲ್ಲಿ ‘ಕಾಂಗ್ರೆಸ್ ಅಭ್ಯರ್ಥಿ’ ಗೆಲುವಿಗೆ ‘ಡಿಸಿಎಂ ಡಿಕೆಶಿ’ ಬಿಗ್ ಪ್ಲಾನ್: ಏನು ಗೊತ್ತಾ?

BREAKING : ಭೂಪಾಲ್ ನ ‘ಟೆಂಟ್ ಹೌಸ್’ ಗೋದಾಮಿನಲ್ಲಿ ‘ಸಿಲಿಂಡರ್’ ಸ್ಫೋಟದಿಂದ ಭಾರಿ ಅಗ್ನಿ ಅವಘಡ

Share.
Exit mobile version