ಮಂಡ್ಯ : ಕುಮಾರಸ್ವಾಮಿ ಕರ್ನಾಟಕಕ್ಕೆ ಯಾಕೆ ಬರುತ್ತಾರೆ ಅಂತಾರೆ ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿದು ಜನ ಮೃತಪಟ್ಟಿದ್ದರು. ರಾಜ್ಯ ಸರ್ಕಾರದ ಒಬ್ಬ ಮಂತ್ರಿ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ. ನಿನ್ನೆ ನಾನು ಹೋಗಿ ಬಂದ ಬಳಿಕ ಈಗ ಸಿಎಂ ಸಿದ್ದರಾಮಯ್ಯ ಹೋಗಿದ್ದಾರೆ. ಪೇಪರ್ ಪೆನ್ನು ಕೇಳಿದ ವ್ಯಕ್ತಿ ಹೇಗೆ ನಡೆದುಕೊಳ್ಳುತ್ತಿದ್ದಾರೆ ಗೊತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ HD ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಇಂದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಎಚ್ ಡಿ ಕುಮಾರಸ್ವಾಮಿಯವರಿಗೆ ಅಭಿನಂದನಾ ಸಮಾರಂಭ ಆಯೋಜಿಸಿದ್ದು, ಎಚ್ ಎಂ ಟಿ 25 ಸಾವಿರ ಕೋಟಿ ಲಾಭ ತರುವ ಕಾರ್ಖಾನೆಯಾಗಿದೆ. ಅದನ್ನು ಪುನಶ್ಚೇತನಗೊಳಿಸಬೇಕಿದೆ. ಅಲ್ಲದೆ ಆಂಧ್ರದ ವಿಶಾಖಪಟ್ಟಣದ RNI ಕಾರ್ಖಾನೆ ಪುನಶ್ಚೇತನ ಗೊಳಿಸಬೇಕಿದೆ. ಮಂಡ್ಯದಲ್ಲಿ ಉದ್ಯೋಗ ಕೊಡುವ ಕಾರ್ಖಾನೆ ಸ್ಥಾಪನೆ ಮಾಡಬೇಕು ನನಗೆ 6-7 ತಿಂಗಳ ಕಾಲ ಸಮಯಾವಕಾಶ ಕೊಡಿ ಎಂದು ತಿಳಿಸಿದರು.
ಕಾವೇರಿ ನದಿ ನೀರಿನ ವಿವಾದ 125 ವರ್ಷಗಳಿಂದ ಇರುವಂತಹ ಸಮಸ್ಯೆ. ಕಾವೇರಿ ನೀರಿನ ವಿಚಾರವನ್ನು ಒಂದೇ ದಿನದಲ್ಲಿ ತೀರ್ಮಾನಿಸಲು ಆಗುವುದಿಲ್ಲ ಕಾವೇರಿ ನೀರು ವಿಚಾರದಲ್ಲಿ ಬಹಳ ಬುದ್ಧಿವಂತಿಕೆಯಿಂದ ಹೆಜ್ಜೆ ಇಡಬೇಕು. ನೀವು ಕೊಟ್ಟ ಶಕ್ತಿಯನ್ನು ವೈಯಕ್ತಿಕವಾಗಿ ಬಳಕೆ ಮಾಡಿಕೊಳ್ಳುವುದಿಲ್ಲ ಜೆಡಿಎಸ್ ಕಥೆ ಮುಗಿಯಿತು ಎನ್ನುತ್ತಿದ್ದವರು ಈಗ ನಿದ್ದೆಗೆಟ್ಟಿದ್ದಾರೆ ಎಂದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.